ಬಳ್ಳಾರಿ: ಜಿಲ್ಲೆಯ ಕೂಡ್ಲಿಗಿ ಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರ ಸಿದ್ದಯ್ಯನ ಗುಡ್ಡದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕರಡಿಯೊಂದು ಸ್ಥಳದಲ್ಲೇ ಸಾವನ್ನಪ್ಪಿದೆ.

ಕರಡಿಯ ದೇಹವು ಛಿದ್ರಛಿದ್ರವಾಗಿದ್ದು, ದೇಹದ ಅಂಗಾಂಗಗಳು ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲೇ ಬಿದ್ದಿವೆ. ಕೂಡ್ಲಿಗಿ ಪೊಲೀಸ್ ಠಾಣೆಯ ವ್ಯಾಪ್ತಿಯೊಳಗೆ ಈ ಘಟನೆ ನಡೆದಿದ್ದು, ಈವರೆಗೂ ಅರಣ್ಯ ಇಲಾಖೆಯವರು ಯಾವುದೇ ದೂರನ್ನು ದಾಖಲಿಸಿಕೊಂಡಿಲ್ಲ.