ಬಳ್ಳಾರಿ: ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದ ರೈತರೊಬ್ಬರ ಹೊಲದಲ್ಲಿ ಕರಡಿ ಕಾಣಿಸಿಕೊಂಡಿದೆ.
ಈ ಹಿಂದೆಯೂ ಸಹ, ಕೂಡ್ಲಿಗಿ ತಾಲೂಕಿನ ನಾನಾ ಕಡೆ ರೈತರ ಹೊಲಗಳಲ್ಲಿ ಕರಡಿ ಪ್ರತ್ಯಕ್ಷವಾಗಿದ್ದು, ಅದನ್ನು ಕಾಡಿನತ್ತ ಓಡಿಸಲಾಗಿತ್ತು. ಪದೇಪದೆ ಕರಡಿ ಪ್ರತ್ಯಕ್ಷವಾಗುತ್ತಿರುವ ಹಿನ್ನೆಲೆ ರೈತರಲ್ಲಿ ಆತಂಕ ಶುರುವಾಗಿದೆ.

ಈ ಹಿಂದೆ ಸಾಕಷ್ಟು ಬಾರಿ ರೈತರ ಮೇಲೆ ಕರಡಿಗಳು ದಾಳಿ ಮಾಡಿವೆ. ದಾಳಿಯಿಂದ ತಪ್ಪಿಸಿಕೊಂಡು ಬಂದ ರೈತರು ಇನ್ನೂ ಕೂಡ ಚೇತರಿಸಿಕೊಂಡಿಲ್ಲ ಎಂದು ತಿಳಿದು ಬಂದಿದೆ.