ETV Bharat / state

ಬರಪೀಡಿತ ಪಟ್ಟಿಯಲ್ಲಿಲ್ಲ ಬೆಳಗಾವಿ, ಖಾನಾಪುರ: ಸರ್ಕಾರದ ವಿರುದ್ಧ ರೈತರ ಆಕ್ರೋಶ - ಗೋಕಾಕ

ಬೆಳಗಾವಿ ಹಾಗೂ ಖಾನಾಪುರ ತಾಲೂಕು ಬರಪೀಡಿತ ಪಟ್ಟಿಯಿಂದ ಹೊರಗುಳಿದಿದೆ. ರಾಜ್ಯ ಸರ್ಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Farmers' outrage against the government
ಬರ ಪೀಡಿತ ಪಟ್ಟಿಯಿಂದ ಹೊರಗುಳಿದ ಬೆಳಗಾವಿ, ಖಾನಾಪುರ ತಾಲೂಕು: ಸರ್ಕಾರದ ವಿರುದ್ಧ ರೈತರ ಆಕ್ರೋಶ
author img

By ETV Bharat Karnataka Team

Published : Sep 15, 2023, 3:32 PM IST

ರಾಜ್ಯ ಸರ್ಕಾರದ ವಿರುದ್ಧ ರೈತರ ಆಕ್ರೋಶ

ಬೆಳಗಾವಿ: ಜಿಲ್ಲೆಯ ಬೆಳಗಾವಿ ಮತ್ತು ಖಾನಾಪುರ ಹೊರತುಪಡಿಸಿ, 13 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲ್ಲೂಕುಗಳೆಂದು ರಾಜ್ಯ ಸರ್ಕಾರ ಘೋಷಿಸಿದೆ. ಬರಪಿಡೀತ ತಾಲೂಕುಗಳ ಪಟ್ಟಿಯಿಂದ ವಂಚಿತವಾಗಿರುವ ಉಭಯ ತಾಲ್ಲೂಕುಗಳ ರೈತರು ಸರ್ಕಾರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಅಥಣಿ, ಬೈಲಹೊಂಗಲ, ಚಿಕ್ಕೋಡಿ, ಗೋಕಾಕ, ಹುಕ್ಕೇರಿ, ರಾಮದುರ್ಗ, ರಾಯಬಾಗ, ಸವದತ್ತಿ, ಚನ್ನಮ್ಮನ ಕಿತ್ತೂರು, ನಿಪ್ಪಾಣಿ, ಕಾಗವಾಡ, ಮೂಡಲಗಿ, ಯರಗಟ್ಟಿ ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದೆ. ಆದರೆ, ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳನ್ನು ಈ ಪಟ್ಟಿಯಿಂದ ಕೈಬಿಟ್ಟಿರುವುದಕ್ಕೆ ರೈತರು ಬೇಸರ ವ್ಯಕ್ತಪಡಿಸಿದ್ದಾರೆ. ಕಳೆದ ಮೂರು ವರ್ಷ ಅತಿವೃಷ್ಟಿಯಿಂದ ಜಿಲ್ಲೆಯ ಜನ ತತ್ತರಿಸಿ ಹೋಗಿದ್ದರು. ಆದರೆ, ಈ ಬಾರಿ ಮುಂಗಾರು ಮಳೆ ಕೈ ಕೊಟ್ಟಿದ್ದರಿಂದ ರೈತರ ಬದುಕು ಅತಂತ್ರವಾಗಿದೆ. ಸಾಲ ಮಾಡಿ ಬಿತ್ತಿದ್ದ ಹೆಸರು, ಉದ್ದು, ಸೋಯಾಬೀನ್‌, ಕಬ್ಬು, ಶೇಂಗಾ, ಭತ್ತ ಸೇರಿ ಇನ್ನಿತರ ಬೆಳೆ ಬೆಳೆದಿದ್ದ ರೈತರು ಬೆಳೆ ಹಾನಿ ಭೀತಿ ಅನುಭವಿಸುತ್ತಿದ್ದಾರೆ.

ಜಿಲ್ಲೆಯಲ್ಲಿ ಜೂನ್‌ 1ರಿಂದ ಇಲ್ಲಿಯವರೆಗೆ 514 ಮಿ.ಮೀ ವಾಡಿಕೆ ಮಳೆಯಾಗಬೇಕಿತ್ತು. ಆದರೆ, 456 ಮಿ.ಮೀ ಮಳೆಯಾಗಿದೆ. ಶೇ. 11ರಷ್ಟು ಮಳೆ ಕೊರತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 7.11 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಗುರಿ ಇಟ್ಟುಕೊಳ್ಳಲಾಗಿತ್ತು. ಆದರೆ, 6.39 ಲಕ್ಷ ಹೆಕ್ಟೇರ್‌ನಲ್ಲಿ ಮಾತ್ರ ಬಿತ್ತನೆಯಾಗಿದ್ದು, ಶೇ.10 ರಷ್ಟು ಬಿತ್ತನೆಯಾಗಿಲ್ಲ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಗಾವಿ, ಖಾನಾಪುರ ತಾಲೂಕಿನಲ್ಲಿ ಅತಿ ಹೆಚ್ಚು ಭತ್ತ ಬೆಳೆಯಲಾಗುತ್ತದೆ. ನೀರಿನ ಕೊರತೆಯಿಂದಾಗಿ ಭತ್ತದ ಗದ್ದೆಗಳು ಬಿರುಕು ಬಿಟ್ಟಿವೆ. ಇದರಿಂದ ಈ ಬಾರಿ ಇಳುವರಿ ಕಡಿಮೆ ಆಗಲಿದೆ. ಹೀಗಿದ್ದರೂ ಬರಪೀಡಿತ ಪಟ್ಟಿಯಿಂದ ಈ ತಾಲೂಕುಗಳನ್ನು ಕೈ ಬಿಟ್ಟಿರುವುದಕ್ಕೆ ಇಲ್ಲಿನ ರೈತರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಈಟಿವಿ ಭಾರತ ಜೊತೆ ಮಾತನಾಡಿದ ರೈತ ಮುಖಂಡ ಪ್ರಕಾಶ ನಾಯಕ್, ''ಜಿಲ್ಲೆಯ ಇಬ್ಬರು ಪ್ರಭಾವಿ ಸಚಿವರಿದ್ದರೂ ಕೂಡ ಎರಡೂ ತಾಲೂಕುಗಳನ್ನು ಬರ ಪಟ್ಟಿಯಿಂದ ಕೈ ಬಿಡಲಾಗಿದೆ. ನೋಡಲು ಮಾತ್ರ ಈ ಎರಡೂ ತಾಲೂಕುಗಳು ಹಚ್ಚ ಹಸಿರಾಗಿ ಕಾಣಿಸುತ್ತಿವೆ. ಆದರೆ, ಭೂಮಿಯಲ್ಲಿ ಯಾವುದೇ ರೀತಿ ತೇವಾಂಶವಿಲ್ಲ. ಗ್ಯಾರಂಟಿ ಭಾಗ್ಯಗಳನ್ನು ಜಾರಿಗೆ ತರುವ ಆತುರದಲ್ಲಿ ಈ ಭಾಗದ ರೈತರಿಗೆ ಅನ್ಯಾಯ ಮಾಡಬಾರದು. ತಕ್ಷಣವೇ ಖಾನಾಪುರ ಮತ್ತು ಬೆಳಗಾವಿ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು'' ಎಂದು ಆಗ್ರಹಿಸಿದರು.

ರೈತ ಮುಖಂಡ ಕಿಶೋರ ಮಿಠಾರೆ ಮತ್ತು ಯಲ್ಲಪ್ಪ ಚನ್ನಾಪುರ ಮಾತನಾಡಿ, ''ರಾಜ್ಯ ಸರ್ಕಾರ ನಮಗೆ ಅನ್ಯಾಯ ಮಾಡಿದೆ. ಈಗಲೇ ಎಚ್ಚೆತ್ತುಕೊಂಡು ಅದನ್ನು ಸರಿಪಡಿಸುವ ಕೆಲಸ ಮಾಡಬೇಕು. ಇಲ್ಲದಿದ್ದರೆ, ರೈತರು ಬೀದಿಗಿಳಿದು ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ'' ಎಂದು ಹೇಳಿದರು.

ಇದನ್ನೂ ಓದಿ: ಕಾವೇರಿ ರಕ್ಷಣಾ ಯಾತ್ರೆಗೆ ಬಿಜೆಪಿ ಸಜ್ಜು: ಬಿಎಸ್​ವೈ ನೇತೃತ್ವದಲ್ಲಿ ಮಹತ್ವದ ಸಭೆ

ರಾಜ್ಯ ಸರ್ಕಾರದ ವಿರುದ್ಧ ರೈತರ ಆಕ್ರೋಶ

ಬೆಳಗಾವಿ: ಜಿಲ್ಲೆಯ ಬೆಳಗಾವಿ ಮತ್ತು ಖಾನಾಪುರ ಹೊರತುಪಡಿಸಿ, 13 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲ್ಲೂಕುಗಳೆಂದು ರಾಜ್ಯ ಸರ್ಕಾರ ಘೋಷಿಸಿದೆ. ಬರಪಿಡೀತ ತಾಲೂಕುಗಳ ಪಟ್ಟಿಯಿಂದ ವಂಚಿತವಾಗಿರುವ ಉಭಯ ತಾಲ್ಲೂಕುಗಳ ರೈತರು ಸರ್ಕಾರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಅಥಣಿ, ಬೈಲಹೊಂಗಲ, ಚಿಕ್ಕೋಡಿ, ಗೋಕಾಕ, ಹುಕ್ಕೇರಿ, ರಾಮದುರ್ಗ, ರಾಯಬಾಗ, ಸವದತ್ತಿ, ಚನ್ನಮ್ಮನ ಕಿತ್ತೂರು, ನಿಪ್ಪಾಣಿ, ಕಾಗವಾಡ, ಮೂಡಲಗಿ, ಯರಗಟ್ಟಿ ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದೆ. ಆದರೆ, ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳನ್ನು ಈ ಪಟ್ಟಿಯಿಂದ ಕೈಬಿಟ್ಟಿರುವುದಕ್ಕೆ ರೈತರು ಬೇಸರ ವ್ಯಕ್ತಪಡಿಸಿದ್ದಾರೆ. ಕಳೆದ ಮೂರು ವರ್ಷ ಅತಿವೃಷ್ಟಿಯಿಂದ ಜಿಲ್ಲೆಯ ಜನ ತತ್ತರಿಸಿ ಹೋಗಿದ್ದರು. ಆದರೆ, ಈ ಬಾರಿ ಮುಂಗಾರು ಮಳೆ ಕೈ ಕೊಟ್ಟಿದ್ದರಿಂದ ರೈತರ ಬದುಕು ಅತಂತ್ರವಾಗಿದೆ. ಸಾಲ ಮಾಡಿ ಬಿತ್ತಿದ್ದ ಹೆಸರು, ಉದ್ದು, ಸೋಯಾಬೀನ್‌, ಕಬ್ಬು, ಶೇಂಗಾ, ಭತ್ತ ಸೇರಿ ಇನ್ನಿತರ ಬೆಳೆ ಬೆಳೆದಿದ್ದ ರೈತರು ಬೆಳೆ ಹಾನಿ ಭೀತಿ ಅನುಭವಿಸುತ್ತಿದ್ದಾರೆ.

ಜಿಲ್ಲೆಯಲ್ಲಿ ಜೂನ್‌ 1ರಿಂದ ಇಲ್ಲಿಯವರೆಗೆ 514 ಮಿ.ಮೀ ವಾಡಿಕೆ ಮಳೆಯಾಗಬೇಕಿತ್ತು. ಆದರೆ, 456 ಮಿ.ಮೀ ಮಳೆಯಾಗಿದೆ. ಶೇ. 11ರಷ್ಟು ಮಳೆ ಕೊರತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 7.11 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಗುರಿ ಇಟ್ಟುಕೊಳ್ಳಲಾಗಿತ್ತು. ಆದರೆ, 6.39 ಲಕ್ಷ ಹೆಕ್ಟೇರ್‌ನಲ್ಲಿ ಮಾತ್ರ ಬಿತ್ತನೆಯಾಗಿದ್ದು, ಶೇ.10 ರಷ್ಟು ಬಿತ್ತನೆಯಾಗಿಲ್ಲ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಗಾವಿ, ಖಾನಾಪುರ ತಾಲೂಕಿನಲ್ಲಿ ಅತಿ ಹೆಚ್ಚು ಭತ್ತ ಬೆಳೆಯಲಾಗುತ್ತದೆ. ನೀರಿನ ಕೊರತೆಯಿಂದಾಗಿ ಭತ್ತದ ಗದ್ದೆಗಳು ಬಿರುಕು ಬಿಟ್ಟಿವೆ. ಇದರಿಂದ ಈ ಬಾರಿ ಇಳುವರಿ ಕಡಿಮೆ ಆಗಲಿದೆ. ಹೀಗಿದ್ದರೂ ಬರಪೀಡಿತ ಪಟ್ಟಿಯಿಂದ ಈ ತಾಲೂಕುಗಳನ್ನು ಕೈ ಬಿಟ್ಟಿರುವುದಕ್ಕೆ ಇಲ್ಲಿನ ರೈತರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಈಟಿವಿ ಭಾರತ ಜೊತೆ ಮಾತನಾಡಿದ ರೈತ ಮುಖಂಡ ಪ್ರಕಾಶ ನಾಯಕ್, ''ಜಿಲ್ಲೆಯ ಇಬ್ಬರು ಪ್ರಭಾವಿ ಸಚಿವರಿದ್ದರೂ ಕೂಡ ಎರಡೂ ತಾಲೂಕುಗಳನ್ನು ಬರ ಪಟ್ಟಿಯಿಂದ ಕೈ ಬಿಡಲಾಗಿದೆ. ನೋಡಲು ಮಾತ್ರ ಈ ಎರಡೂ ತಾಲೂಕುಗಳು ಹಚ್ಚ ಹಸಿರಾಗಿ ಕಾಣಿಸುತ್ತಿವೆ. ಆದರೆ, ಭೂಮಿಯಲ್ಲಿ ಯಾವುದೇ ರೀತಿ ತೇವಾಂಶವಿಲ್ಲ. ಗ್ಯಾರಂಟಿ ಭಾಗ್ಯಗಳನ್ನು ಜಾರಿಗೆ ತರುವ ಆತುರದಲ್ಲಿ ಈ ಭಾಗದ ರೈತರಿಗೆ ಅನ್ಯಾಯ ಮಾಡಬಾರದು. ತಕ್ಷಣವೇ ಖಾನಾಪುರ ಮತ್ತು ಬೆಳಗಾವಿ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು'' ಎಂದು ಆಗ್ರಹಿಸಿದರು.

ರೈತ ಮುಖಂಡ ಕಿಶೋರ ಮಿಠಾರೆ ಮತ್ತು ಯಲ್ಲಪ್ಪ ಚನ್ನಾಪುರ ಮಾತನಾಡಿ, ''ರಾಜ್ಯ ಸರ್ಕಾರ ನಮಗೆ ಅನ್ಯಾಯ ಮಾಡಿದೆ. ಈಗಲೇ ಎಚ್ಚೆತ್ತುಕೊಂಡು ಅದನ್ನು ಸರಿಪಡಿಸುವ ಕೆಲಸ ಮಾಡಬೇಕು. ಇಲ್ಲದಿದ್ದರೆ, ರೈತರು ಬೀದಿಗಿಳಿದು ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ'' ಎಂದು ಹೇಳಿದರು.

ಇದನ್ನೂ ಓದಿ: ಕಾವೇರಿ ರಕ್ಷಣಾ ಯಾತ್ರೆಗೆ ಬಿಜೆಪಿ ಸಜ್ಜು: ಬಿಎಸ್​ವೈ ನೇತೃತ್ವದಲ್ಲಿ ಮಹತ್ವದ ಸಭೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.