ETV Bharat / state

5 ದಿನ ಬಳ್ಳಾರಿ, ವಿಜಯನಗರ ಜಿಲ್ಲೆಗಳು ಸಂಪೂರ್ಣ ಲಾಕ್​ಡೌನ್​​

ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚು ವ್ಯಾಪಿಸುತ್ತಿರುವ ಹಿನ್ನೆಲೆ ನಿಯಂತ್ರಣಕ್ಕಾಗಿ ಜಿಲ್ಲಾಧಿಕಾರಿ ಸುಮಾರು 5 ದಿನಗಳ ಕಾಲ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್​ಡೌನ್​ ಹೇರಿದ್ದಾರೆ.

author img

By

Published : May 18, 2021, 4:17 PM IST

Updated : May 18, 2021, 4:39 PM IST

dc and sp
dc and sp

ಬಳ್ಳಾರಿ: ಕೊರೊನಾ ಎರಡನೇ ಅಲೆ ಅತ್ಯಂತ ವೇಗವಾಗಿ‌ ಹರಡುತ್ತಿರುವ ಹಿನ್ನೆಲೆ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳನ್ನ ನಾಳೆಯಿಂದ ಐದು ದಿನಗಳ‌ ಕಾಲ‌ ಸಂಪೂರ್ಣವಾಗಿ ಲಾಕ್​ಡೌನ್ ಮಾಡಲಾಗುವುದೆಂದು ಜಿಲ್ಲಾಧಿಕಾರಿ ಪವನ್​ ಕುಮಾರ ಮಾಲಪಾಟಿ ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲಾ ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿಂದು ನಡೆದ ಪ್ರಧಾನಿ ಮೋದಿ ಅವರೊಂದಿಗಿನ ವಿಡಿಯೊ‌ ಕಾನ್ಫರೆನ್ಸಿನಲ್ಲಿ ಭಾಗಿಯಾದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದ್ರು. ನಾಳೆ ಬೆಳಗ್ಗೆ 10 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿ ಸೇರಿದಂತೆ ಇನ್ನಿತರೆ ಸಾಮಾನು ಸರಂಜಾಮು ಖರೀದಿಗೆ ಅವಕಾಶ ನೀಡಲಾಗಿದ್ದು, ಮೇ 19 ರಿಂದ 24 ರ ಬೆಳಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್​ಡೌನ್ ಜಾರಿಯಲ್ಲಿರುತ್ತೆ. ಅನಗತ್ಯವಾಗಿ ಓಡಾಡುವವರಿಗೆ ದಂಡ ವಿಧಿಸಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.

5 ದಿನ ಬಳ್ಳಾರಿ, ವಿಜಯನಗರ ಜಿಲ್ಲೆಗಳು ಸಂಪೂರ್ಣ ಲಾಕ್​ಡೌನ್​​

ಅಂತಾರಾಜ್ಯ ಹಾಗೂ ಅಂತರ್ ಜಿಲ್ಲೆಗಳಲ್ಲಿ ಸರಕು ಸಾಗಣೆ ವಾಹನ ಸೇರಿದಂತೆ ವೈದ್ಯಕೀಯ ಸೇವೆಗಳಿಗೆ ಮಾತ್ರ ಸಂಚಾರದ ವ್ಯವಸ್ಥೆ ಮಾಡಲಾಗಿದೆ. ಹಾಲು ಮತ್ತು ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಅದು ಕೂಡ ತಳ್ಳುವ ಗಾಡಿ ಅಥವಾ ಹಾಪ್ ಕಾಮ್ಸ್ ಸೇವೆಯಿಂದ ತರಕಾರಿಗಳ ಪೂರೈಕೆಗೆ ನಿರ್ಧರಿಸಲಾಗುವುದೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಎಸ್​ಪಿ ಸೈದಲು ಅಡಾವತ್ ಮಾತನಾಡಿ, ಗಡಿಭಾಗದಲ್ಲಿ ಸಂಪೂರ್ಣವಾಗಿ ಕಟ್ಟೆಚ್ಚರ ವಹಿಸಲಾಗಿದೆ. ಲಾಕ್​ಡೌನ್ ಸಮಯದಲ್ಲಿ ಅನಗತ್ಯವಾಗಿ ಹೊರಬಂದ್ರೆ ಮಾತ್ರ ವಾಹನ ಸೀಜ್ ಮಾಡಲಾಗುವುದೆಂದು ಎಚ್ಚರಿಸಿದ್ದಾರೆ.

ಬಳ್ಳಾರಿ: ಕೊರೊನಾ ಎರಡನೇ ಅಲೆ ಅತ್ಯಂತ ವೇಗವಾಗಿ‌ ಹರಡುತ್ತಿರುವ ಹಿನ್ನೆಲೆ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳನ್ನ ನಾಳೆಯಿಂದ ಐದು ದಿನಗಳ‌ ಕಾಲ‌ ಸಂಪೂರ್ಣವಾಗಿ ಲಾಕ್​ಡೌನ್ ಮಾಡಲಾಗುವುದೆಂದು ಜಿಲ್ಲಾಧಿಕಾರಿ ಪವನ್​ ಕುಮಾರ ಮಾಲಪಾಟಿ ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲಾ ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿಂದು ನಡೆದ ಪ್ರಧಾನಿ ಮೋದಿ ಅವರೊಂದಿಗಿನ ವಿಡಿಯೊ‌ ಕಾನ್ಫರೆನ್ಸಿನಲ್ಲಿ ಭಾಗಿಯಾದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದ್ರು. ನಾಳೆ ಬೆಳಗ್ಗೆ 10 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿ ಸೇರಿದಂತೆ ಇನ್ನಿತರೆ ಸಾಮಾನು ಸರಂಜಾಮು ಖರೀದಿಗೆ ಅವಕಾಶ ನೀಡಲಾಗಿದ್ದು, ಮೇ 19 ರಿಂದ 24 ರ ಬೆಳಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್​ಡೌನ್ ಜಾರಿಯಲ್ಲಿರುತ್ತೆ. ಅನಗತ್ಯವಾಗಿ ಓಡಾಡುವವರಿಗೆ ದಂಡ ವಿಧಿಸಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.

5 ದಿನ ಬಳ್ಳಾರಿ, ವಿಜಯನಗರ ಜಿಲ್ಲೆಗಳು ಸಂಪೂರ್ಣ ಲಾಕ್​ಡೌನ್​​

ಅಂತಾರಾಜ್ಯ ಹಾಗೂ ಅಂತರ್ ಜಿಲ್ಲೆಗಳಲ್ಲಿ ಸರಕು ಸಾಗಣೆ ವಾಹನ ಸೇರಿದಂತೆ ವೈದ್ಯಕೀಯ ಸೇವೆಗಳಿಗೆ ಮಾತ್ರ ಸಂಚಾರದ ವ್ಯವಸ್ಥೆ ಮಾಡಲಾಗಿದೆ. ಹಾಲು ಮತ್ತು ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಅದು ಕೂಡ ತಳ್ಳುವ ಗಾಡಿ ಅಥವಾ ಹಾಪ್ ಕಾಮ್ಸ್ ಸೇವೆಯಿಂದ ತರಕಾರಿಗಳ ಪೂರೈಕೆಗೆ ನಿರ್ಧರಿಸಲಾಗುವುದೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಎಸ್​ಪಿ ಸೈದಲು ಅಡಾವತ್ ಮಾತನಾಡಿ, ಗಡಿಭಾಗದಲ್ಲಿ ಸಂಪೂರ್ಣವಾಗಿ ಕಟ್ಟೆಚ್ಚರ ವಹಿಸಲಾಗಿದೆ. ಲಾಕ್​ಡೌನ್ ಸಮಯದಲ್ಲಿ ಅನಗತ್ಯವಾಗಿ ಹೊರಬಂದ್ರೆ ಮಾತ್ರ ವಾಹನ ಸೀಜ್ ಮಾಡಲಾಗುವುದೆಂದು ಎಚ್ಚರಿಸಿದ್ದಾರೆ.

Last Updated : May 18, 2021, 4:39 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.