ETV Bharat / state

ಬೈಲೂರು ಗ್ರಾಪಂ ಸದಸ್ಯ ಸ್ಥಾನಗಳ ಹರಾಜು ಪ್ರಕರಣ: 13 ಮಂದಿ ವಿರುದ್ಧ ಎಫ್​ಐಆರ್​ - FIR against 13 of Bailuru

ಬೈಲೂರಿನಲ್ಲಿ ಗ್ರಾಪಂ ಸದಸ್ಯ ಸ್ಥಾನಗಳ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಂಡ 13 ಮಂದಿಯ ವಿರುದ್ಧ ಎಫ್​ಐಆರ್​ ದಾಖಲಿಸಿರುವುದಾಗಿ ಬಳ್ಳಾರಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Bellary Bailuru Gram Panchayath Member Bidding Case update
ಬಳ್ಳಾರಿಯ ಬೈಲೂರಿನಲ್ಲಿ ಗ್ರಾ.ಪಂ ಸದಸ್ಯರ ಹರಾಜು ಪ್ರಕರಣ
author img

By

Published : Dec 9, 2020, 6:20 PM IST

ಬಳ್ಳಾರಿ: ಜಿಲ್ಲೆಯ ಕುರುಗೋಡು ತಾಲೂಕಿನ ಸಿಂದಿಗೇರಿ ಗ್ರಾಮ ಪಂಚಾಯತ್​ ವ್ಯಾಪ್ತಿಯ ಬೈಲೂರಿನಲ್ಲಿ ಗ್ರಾಮ ಪಂಚಾಯತ್​ ಸದಸ್ಯ ಸ್ಥಾನಗಳ ಹರಾಜು ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದ 13 ಮಂದಿ ವಿರುದ್ಧ ಎಫ್​ಐಆರ್ ದಾಖಲು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಜಿಲ್ಲಾ ಪೊಲೀಸ್ ಇಲಾಖೆಯು 13 ಮಂದಿಯನ್ನು ವಿಚಾರಣೆಗೆ ಒಳಪಡಿಸಿದೆ.‌ ಆರೋಪ ಸಾಬೀತಾಗಿ ಅವರು‌ ಶಿಕ್ಷೆಗೆ ಒಳಗಾದರೆ, ಈ ಗ್ರಾಮ ಪಂಚಾಯತ್​ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಇರುವುದಿಲ್ಲ ಎಂದು ಹೇಳಿದರು.

ಕೇವಲ ಎಫ್​ಐಆರ್ ದಾಖಲಾಗಿದ್ದರೆ ಮಾತ್ರ ಗ್ರಾಮ‌ ಪಂಚಾಯತ್​ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಇರಲಿದೆ. ಒಂದು ವೇಳೆ ಆರೋಪಿಗಳು ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ಬಳಿಕ ಆರೋಪ ಸಾಬೀತಾದರೆ ಅವರ ಸದಸ್ಯತ್ವ ಅನೂರ್ಜಿತವಾಗಲಿದೆ‌ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ : ರಾತ್ರೋರಾತ್ರಿ ಬಿಕರಿಯಾದ ಗ್ರಾಮ ಪಂಚಾಯತ್​ ಸದಸ್ಯತ್ವ: ಪ್ರಜಾಪ್ರಭುತ್ವಕ್ಕೆ ಕಳಂಕ!

ಕೆಲವೊಂದು ಗ್ರಾಮ ಪಂಚಾಯತ್​ಗಳಲ್ಲಿ ಸಣ್ಣಪುಟ್ಟ ಕಾರಣವೊಡ್ಡಿ ಚುನಾವಣೆ ಬಹಿಷ್ಕರಿಸುವುದಾಗಿ ಹೇಳುತ್ತಿದ್ದಾರೆ. ಅಂತಹವರ‌‌ ಮನವೊಲಿಕೆಗೆ ಈಗಾಗಲೇ ಆಯಾ ತಾಲೂಕುಗಳ ತಹಶೀಲ್ದಾರ್​ಗಳಿಗೆ ಸೂಚನೆ ನೀಡಲಾಗಿದೆ.‌ ಚುನಾವಣೆ ಬಹಿಷ್ಕರಿಸುವುದರಿಂದ ಯಾವುದೇ ಪ್ರಯೋಜನ ಇಲ್ಲ.‌ ಪ್ರತಿಯೊಬ್ಬರು ಕೂಡ ಮತಗಟ್ಟೆಗೆ ಹೋಗಿ ತಮ್ಮ ಹಕ್ಕು ಚಲಾಯಿಸಬೇಕು ಎಂದು ಸಲಹೆ ನೀಡಿದರು.

ಮದಿರೆ ಗ್ರಾಮದಲ್ಲಿ ಸ್ಮಶಾನಕ್ಕೆ ಹಳ್ಳ ದಾಟಿ ಹೋಗುವ ದೃಶ್ಯಾವಳಿಗಳನ್ನು ನಾನು‌ ಗಮನಿಸಿದ್ದೇನೆ. ಆ ಕುರಿತು ಈಗಾಗಲೇ ಸಂಬಂಧಪಟ್ಟವರೊಂದಿಗೆ ಚರ್ಚಿಸಿರುವೆ. ಆ ಗ್ರಾಮ ಪಂಚಾಯತ್​ ವ್ಯಾಪ್ತಿಯಲ್ಲಿ ಸ್ಮಶಾನಕ್ಕೆ ಸರ್ಕಾರಿ ಭೂಮಿಯ ಕೊರತೆಯಿದೆ. ಖಾಸಗಿ ವ್ಯಕ್ತಿ ಅಥವಾ ಭೂ ಮಾಲೀಕರು ಯಾರಾದರು ಭೂಮಿ‌ ಕೊಡಲು ಮುಂದಾದರೆ, ಖರೀದಿಸಿ ಸ್ಮಶಾನಕ್ಕೆ ಭೂಮಿ ಕಲ್ಪಿಸಿಕೊಡುವುದಾಗಿ ತಿಳಿಸಿದರು. ಭೂಮಿ ಖರೀದಿಗೆ ಯಾವುದೇ ಅನುದಾನದ ಕೊರತೆ ಇಲ್ಲ ಎಂದರು.

ಬಳ್ಳಾರಿ: ಜಿಲ್ಲೆಯ ಕುರುಗೋಡು ತಾಲೂಕಿನ ಸಿಂದಿಗೇರಿ ಗ್ರಾಮ ಪಂಚಾಯತ್​ ವ್ಯಾಪ್ತಿಯ ಬೈಲೂರಿನಲ್ಲಿ ಗ್ರಾಮ ಪಂಚಾಯತ್​ ಸದಸ್ಯ ಸ್ಥಾನಗಳ ಹರಾಜು ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದ 13 ಮಂದಿ ವಿರುದ್ಧ ಎಫ್​ಐಆರ್ ದಾಖಲು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಜಿಲ್ಲಾ ಪೊಲೀಸ್ ಇಲಾಖೆಯು 13 ಮಂದಿಯನ್ನು ವಿಚಾರಣೆಗೆ ಒಳಪಡಿಸಿದೆ.‌ ಆರೋಪ ಸಾಬೀತಾಗಿ ಅವರು‌ ಶಿಕ್ಷೆಗೆ ಒಳಗಾದರೆ, ಈ ಗ್ರಾಮ ಪಂಚಾಯತ್​ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಇರುವುದಿಲ್ಲ ಎಂದು ಹೇಳಿದರು.

ಕೇವಲ ಎಫ್​ಐಆರ್ ದಾಖಲಾಗಿದ್ದರೆ ಮಾತ್ರ ಗ್ರಾಮ‌ ಪಂಚಾಯತ್​ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಇರಲಿದೆ. ಒಂದು ವೇಳೆ ಆರೋಪಿಗಳು ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ಬಳಿಕ ಆರೋಪ ಸಾಬೀತಾದರೆ ಅವರ ಸದಸ್ಯತ್ವ ಅನೂರ್ಜಿತವಾಗಲಿದೆ‌ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ : ರಾತ್ರೋರಾತ್ರಿ ಬಿಕರಿಯಾದ ಗ್ರಾಮ ಪಂಚಾಯತ್​ ಸದಸ್ಯತ್ವ: ಪ್ರಜಾಪ್ರಭುತ್ವಕ್ಕೆ ಕಳಂಕ!

ಕೆಲವೊಂದು ಗ್ರಾಮ ಪಂಚಾಯತ್​ಗಳಲ್ಲಿ ಸಣ್ಣಪುಟ್ಟ ಕಾರಣವೊಡ್ಡಿ ಚುನಾವಣೆ ಬಹಿಷ್ಕರಿಸುವುದಾಗಿ ಹೇಳುತ್ತಿದ್ದಾರೆ. ಅಂತಹವರ‌‌ ಮನವೊಲಿಕೆಗೆ ಈಗಾಗಲೇ ಆಯಾ ತಾಲೂಕುಗಳ ತಹಶೀಲ್ದಾರ್​ಗಳಿಗೆ ಸೂಚನೆ ನೀಡಲಾಗಿದೆ.‌ ಚುನಾವಣೆ ಬಹಿಷ್ಕರಿಸುವುದರಿಂದ ಯಾವುದೇ ಪ್ರಯೋಜನ ಇಲ್ಲ.‌ ಪ್ರತಿಯೊಬ್ಬರು ಕೂಡ ಮತಗಟ್ಟೆಗೆ ಹೋಗಿ ತಮ್ಮ ಹಕ್ಕು ಚಲಾಯಿಸಬೇಕು ಎಂದು ಸಲಹೆ ನೀಡಿದರು.

ಮದಿರೆ ಗ್ರಾಮದಲ್ಲಿ ಸ್ಮಶಾನಕ್ಕೆ ಹಳ್ಳ ದಾಟಿ ಹೋಗುವ ದೃಶ್ಯಾವಳಿಗಳನ್ನು ನಾನು‌ ಗಮನಿಸಿದ್ದೇನೆ. ಆ ಕುರಿತು ಈಗಾಗಲೇ ಸಂಬಂಧಪಟ್ಟವರೊಂದಿಗೆ ಚರ್ಚಿಸಿರುವೆ. ಆ ಗ್ರಾಮ ಪಂಚಾಯತ್​ ವ್ಯಾಪ್ತಿಯಲ್ಲಿ ಸ್ಮಶಾನಕ್ಕೆ ಸರ್ಕಾರಿ ಭೂಮಿಯ ಕೊರತೆಯಿದೆ. ಖಾಸಗಿ ವ್ಯಕ್ತಿ ಅಥವಾ ಭೂ ಮಾಲೀಕರು ಯಾರಾದರು ಭೂಮಿ‌ ಕೊಡಲು ಮುಂದಾದರೆ, ಖರೀದಿಸಿ ಸ್ಮಶಾನಕ್ಕೆ ಭೂಮಿ ಕಲ್ಪಿಸಿಕೊಡುವುದಾಗಿ ತಿಳಿಸಿದರು. ಭೂಮಿ ಖರೀದಿಗೆ ಯಾವುದೇ ಅನುದಾನದ ಕೊರತೆ ಇಲ್ಲ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.