ETV Bharat / state

ಭರತ ಹುಣ್ಣಿಮೆ ಹಿನ್ನೆಲೆ.. ವಿವಿಧೆಡೆ ನಡೆಯುವ ಜಾತ್ರಾ ಮಹೋತ್ಸವಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಿ ಡಿಸಿ ಆದೇಶ

author img

By

Published : Feb 26, 2021, 6:51 AM IST

ಸದರಿ ದೇವಸ್ಥಾನಗಳ ಆಡಳಿತ ಮಂಡಳಿಯವರು ದೇವಸ್ಥಾನಗಳಲ್ಲಿ ಕೋವಿಡ್ 19 ಮಾರ್ಗಸೂಚಿ ಅನ್ವಯ ಮುಂಜಾಗ್ರತಾ ಕ್ರಮವಹಿಸಿ ನಿತ್ಯದ ಪೂಜಾ ಧಾರ್ಮಿಕ ವಿಧಿ ವಿಧಾನಗಳನ್ನು ನಿರ್ವಹಿಸಲು ಅನುಮತಿ ನೀಡಲಾಗಿದೆ..

Bellary DC
ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ

ಬಳ್ಳಾರಿ : ಕೋವಿಡ್-19 ಹಿನ್ನೆಲೆ ಸಾರ್ವಜನಿಕರು ಮತ್ತು ಭಕ್ತಾದಿಗಳ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯ ವಿವಿಧೆಡೆ ಫೆ.27ರಂದು ನಡೆಯುವ ಜಾತ್ರಾ ಮಹೋತ್ಸವಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಆದೇಶ ಹೊರಡಿಸಿದ್ದಾರೆ.

Bellary
ಡಿಸಿ ಆದೇಶ ಪ್ರತಿ

ಫೆ.27ರಂದು ಹೂವಿನಹಡಗಲಿ ತಾಲೂಕಿನ ಮಾನ್ಯರಮಸಾಲವಾಡ ಗ್ರಾಮದಲ್ಲಿ ನಡೆಯುವ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವ, ಹರಪನಹಳ್ಳಿ ತಾಲೂಕಿನ ಉಚ್ಚೆಂಗಿದುರ್ಗ ಗ್ರಾಮದಲ್ಲಿ ಫೆ.27ರಂದು ಶ್ರೀ ಉತ್ಸವಾಂಭ ದೇವಸ್ಥಾನದ ವಾರ್ಷಿಕ ಭರತ ಹುಣ್ಣಿಮೆ ಪ್ರಯುಕ್ತ ನಡೆಯುವ ರಥೋತ್ಸವ, ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಶ್ರೀಉತ್ತಿನ ಯಲ್ಲಮ್ಮ ದೇವಸ್ಥಾನದ ವಾರ್ಷಿಕ ಭರತ ಹುಣ್ಣಿಮೆ ಪ್ರಯುಕ್ತ ನಡೆಯುವ ರಥೋತ್ಸವಕ್ಕೆ, ನಗರದ ಕೋಟೆ ಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ, ಸಂಡೂರು ತಾಲೂಕಿನ ಗೆಣತಿಕಟ್ಟೆ ಗ್ರಾಮದಲ್ಲಿ ನಡೆಯುವ ಶ್ರೀ ಆಂಜಿನೇಯ ಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.

ಇದನ್ನು ಓದಿ: ಯಲಹಂಕ-ಮಾಕಳಿದುರ್ಗ ಮಧ್ಯೆ ವಿದ್ಯುದೀಕೃತ ಜೋಡಿ ಮಾರ್ಗ ಸಂಚಾರಕ್ಕೆ ಸಿದ್ದ

ಸದರಿ ದೇವಸ್ಥಾನಗಳ ಆಡಳಿತ ಮಂಡಳಿಯವರು ದೇವಸ್ಥಾನಗಳಲ್ಲಿ ಕೋವಿಡ್ 19 ಮಾರ್ಗಸೂಚಿ ಅನ್ವಯ ಮುಂಜಾಗ್ರತಾ ಕ್ರಮವಹಿಸಿ ನಿತ್ಯದ ಪೂಜಾ ಧಾರ್ಮಿಕ ವಿಧಿ ವಿಧಾನಗಳನ್ನು ನಿರ್ವಹಿಸಲು ಅನುಮತಿ ನೀಡಲಾಗಿದೆ ಎಂದು ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಜಾತ್ರಾ ಪ್ರದೇಶದಲ್ಲಿ, ರಸ್ತೆಯ ಬದಿಗಳಲ್ಲಿ, ಜಮೀನುಗಳಲ್ಲಿ ಯಾವುದೇ ವಾಣಿಜ್ಯ ಚಟುವಟಿಕೆಗಳನ್ನು ನಡೆಸಲು ಅವಕಾಶ ಇರುವುದಿಲ್ಲ ಎಂದು ತಿಳಿಸಿರುವ ಅವರು ಆದೇಶ ಉಲ್ಲಂಘಿಸಿದವರಿಗೆ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ 188 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಸದರಿ ದೇವಸ್ಥಾನದ ಆಡಳಿತ ಮಂಡಳಿಗಳು, ಜಿಪಂ ಸಿಇಒ, ಜಿಲ್ಲಾ ಪೊಲೀಸ್ ಅಧೀಕ್ಷಕರು, ಹೂವಿನಹಡಗಲಿ ಉಪವಿಭಾಗಾಧಿಕಾರಿಗಳು, ತಹಸೀಲ್ದಾರರು, ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅವರು ಸೂಚನೆ ನೀಡಿದ್ದಾರೆ.

ಬಳ್ಳಾರಿ : ಕೋವಿಡ್-19 ಹಿನ್ನೆಲೆ ಸಾರ್ವಜನಿಕರು ಮತ್ತು ಭಕ್ತಾದಿಗಳ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯ ವಿವಿಧೆಡೆ ಫೆ.27ರಂದು ನಡೆಯುವ ಜಾತ್ರಾ ಮಹೋತ್ಸವಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಆದೇಶ ಹೊರಡಿಸಿದ್ದಾರೆ.

Bellary
ಡಿಸಿ ಆದೇಶ ಪ್ರತಿ

ಫೆ.27ರಂದು ಹೂವಿನಹಡಗಲಿ ತಾಲೂಕಿನ ಮಾನ್ಯರಮಸಾಲವಾಡ ಗ್ರಾಮದಲ್ಲಿ ನಡೆಯುವ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವ, ಹರಪನಹಳ್ಳಿ ತಾಲೂಕಿನ ಉಚ್ಚೆಂಗಿದುರ್ಗ ಗ್ರಾಮದಲ್ಲಿ ಫೆ.27ರಂದು ಶ್ರೀ ಉತ್ಸವಾಂಭ ದೇವಸ್ಥಾನದ ವಾರ್ಷಿಕ ಭರತ ಹುಣ್ಣಿಮೆ ಪ್ರಯುಕ್ತ ನಡೆಯುವ ರಥೋತ್ಸವ, ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಶ್ರೀಉತ್ತಿನ ಯಲ್ಲಮ್ಮ ದೇವಸ್ಥಾನದ ವಾರ್ಷಿಕ ಭರತ ಹುಣ್ಣಿಮೆ ಪ್ರಯುಕ್ತ ನಡೆಯುವ ರಥೋತ್ಸವಕ್ಕೆ, ನಗರದ ಕೋಟೆ ಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ, ಸಂಡೂರು ತಾಲೂಕಿನ ಗೆಣತಿಕಟ್ಟೆ ಗ್ರಾಮದಲ್ಲಿ ನಡೆಯುವ ಶ್ರೀ ಆಂಜಿನೇಯ ಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.

ಇದನ್ನು ಓದಿ: ಯಲಹಂಕ-ಮಾಕಳಿದುರ್ಗ ಮಧ್ಯೆ ವಿದ್ಯುದೀಕೃತ ಜೋಡಿ ಮಾರ್ಗ ಸಂಚಾರಕ್ಕೆ ಸಿದ್ದ

ಸದರಿ ದೇವಸ್ಥಾನಗಳ ಆಡಳಿತ ಮಂಡಳಿಯವರು ದೇವಸ್ಥಾನಗಳಲ್ಲಿ ಕೋವಿಡ್ 19 ಮಾರ್ಗಸೂಚಿ ಅನ್ವಯ ಮುಂಜಾಗ್ರತಾ ಕ್ರಮವಹಿಸಿ ನಿತ್ಯದ ಪೂಜಾ ಧಾರ್ಮಿಕ ವಿಧಿ ವಿಧಾನಗಳನ್ನು ನಿರ್ವಹಿಸಲು ಅನುಮತಿ ನೀಡಲಾಗಿದೆ ಎಂದು ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಜಾತ್ರಾ ಪ್ರದೇಶದಲ್ಲಿ, ರಸ್ತೆಯ ಬದಿಗಳಲ್ಲಿ, ಜಮೀನುಗಳಲ್ಲಿ ಯಾವುದೇ ವಾಣಿಜ್ಯ ಚಟುವಟಿಕೆಗಳನ್ನು ನಡೆಸಲು ಅವಕಾಶ ಇರುವುದಿಲ್ಲ ಎಂದು ತಿಳಿಸಿರುವ ಅವರು ಆದೇಶ ಉಲ್ಲಂಘಿಸಿದವರಿಗೆ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ 188 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಸದರಿ ದೇವಸ್ಥಾನದ ಆಡಳಿತ ಮಂಡಳಿಗಳು, ಜಿಪಂ ಸಿಇಒ, ಜಿಲ್ಲಾ ಪೊಲೀಸ್ ಅಧೀಕ್ಷಕರು, ಹೂವಿನಹಡಗಲಿ ಉಪವಿಭಾಗಾಧಿಕಾರಿಗಳು, ತಹಸೀಲ್ದಾರರು, ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅವರು ಸೂಚನೆ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.