ETV Bharat / state

ಬಿಜೆಪಿ ಸುಳ್ಳನ್ನೇ ಸತ್ಯವೆಂದು ನಂಬಿಸಿ ಯುವಕರ ದಾರಿ ತಪ್ಪಿಸುತ್ತಿದೆ: ಖಂಡ್ರೆ

ಕರ್ನಾಟಕದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ. ಪ್ರತಿ ಕಾಮಗಾರಿ, ನೇಮಕಾತಿಯಲ್ಲೂ ಭ್ರಷ್ಟಾಚಾರ ಇದೆ. ಸಚಿವರ ಮೇಲೆ ಗಂಭೀರ ಆರೋಪಗಳಿವೆ. ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯದ ಮೇಲೆ ನಿರಂತರ ಅನ್ಯಾಯ ಮಾಡುತ್ತಿದೆ ಎಂದು ಈಶ್ವರ್​ ಖಂಡ್ರೆ ಆರೋಪಿಸಿದರು.

author img

By

Published : Jun 29, 2022, 8:31 PM IST

Eshwara Khandre who speak against the Central and State Govt
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ

ಬಳ್ಳಾರಿ: ಬಿಜೆಪಿ ಆಡಳಿತದಿಂದ ರಾಜ್ಯದಲ್ಲಿ ದುರಾಡಳಿತ ಹೆಚ್ಚಾಗಿದೆ. ಕೇಂದ್ರ ಸರ್ಕಾರ ದೇಶದಲ್ಲಿ ಸೈನಿಕರನ್ನು ದುರ್ಬಲಗೊಳಿಸುತ್ತಿದೆ. ಸುಳ್ಳನ್ನೇ ಸತ್ಯವೆಂದು ನಂಬಿಸಿ ಯುವಕರ ದಾರಿ ತಪ್ಪಿಸುತ್ತಿದೆ. ಕರ್ನಾಟಕ ಮಾದರಿಯಲ್ಲಿ ಮಹಾರಾಷ್ಟ್ರದ ಶಾಸಕರಿಗೆ 50 ಕೋಟಿ ರೂ ನೀಡುತ್ತಿದೆ. ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರವನ್ನು ಬೀಳಿಸುವ ಯತ್ನ ನಡೆಯುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ವಾಗ್ದಾಳಿ ನಡೆಸಿದರು.


ಬಳ್ಳಾರಿ ಜಿಲ್ಲೆಯ ಸಂಡೂರಿನ ತಾರಾನಗರ ನಾರಿಹಳ್ಳದ ಎದುರಿನ ವಂಡರ್ ಮೌಂಟೇನ್ ವ್ಯಾಲಿ ರೆಸಾರ್ಟ್​ನಲ್ಲಿ ಬಳ್ಳಾರಿ ನಗರದ ಹಾಗೂ ಬಳ್ಳಾರಿ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ನವ ಸಂಕಲ್ಪ ಶಿಬಿರ ಉದ್ದೇಶಿಸಿ ಮಾತನಾಡಿದರು.

ಇದನ್ನೂ ಓದಿ: ಸುರಕ್ಷಿತ ಕ್ಷೇತ್ರ ಹುಡುಕುವ ಬದಲು ನಿವೃತ್ತಿ ಘೋಷಿಸಿ: ಸಿದ್ದರಾಮಯ್ಯಗೆ ಬಿಜೆಪಿ ಟಾಂಗ್

ಬಳ್ಳಾರಿ: ಬಿಜೆಪಿ ಆಡಳಿತದಿಂದ ರಾಜ್ಯದಲ್ಲಿ ದುರಾಡಳಿತ ಹೆಚ್ಚಾಗಿದೆ. ಕೇಂದ್ರ ಸರ್ಕಾರ ದೇಶದಲ್ಲಿ ಸೈನಿಕರನ್ನು ದುರ್ಬಲಗೊಳಿಸುತ್ತಿದೆ. ಸುಳ್ಳನ್ನೇ ಸತ್ಯವೆಂದು ನಂಬಿಸಿ ಯುವಕರ ದಾರಿ ತಪ್ಪಿಸುತ್ತಿದೆ. ಕರ್ನಾಟಕ ಮಾದರಿಯಲ್ಲಿ ಮಹಾರಾಷ್ಟ್ರದ ಶಾಸಕರಿಗೆ 50 ಕೋಟಿ ರೂ ನೀಡುತ್ತಿದೆ. ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರವನ್ನು ಬೀಳಿಸುವ ಯತ್ನ ನಡೆಯುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ವಾಗ್ದಾಳಿ ನಡೆಸಿದರು.


ಬಳ್ಳಾರಿ ಜಿಲ್ಲೆಯ ಸಂಡೂರಿನ ತಾರಾನಗರ ನಾರಿಹಳ್ಳದ ಎದುರಿನ ವಂಡರ್ ಮೌಂಟೇನ್ ವ್ಯಾಲಿ ರೆಸಾರ್ಟ್​ನಲ್ಲಿ ಬಳ್ಳಾರಿ ನಗರದ ಹಾಗೂ ಬಳ್ಳಾರಿ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ನವ ಸಂಕಲ್ಪ ಶಿಬಿರ ಉದ್ದೇಶಿಸಿ ಮಾತನಾಡಿದರು.

ಇದನ್ನೂ ಓದಿ: ಸುರಕ್ಷಿತ ಕ್ಷೇತ್ರ ಹುಡುಕುವ ಬದಲು ನಿವೃತ್ತಿ ಘೋಷಿಸಿ: ಸಿದ್ದರಾಮಯ್ಯಗೆ ಬಿಜೆಪಿ ಟಾಂಗ್

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.