ಬಳ್ಳಾರಿ: ಮಳೆಹಾನಿ ಕುರಿತು ವೈಮಾನಿಕ ಸಮೀಕ್ಷೆ ಸಲುವಾಗಿ ಕಲಬುರಗಿ ಜಿಲ್ಲೆಗೆ ತೆರಳುವ ಮಾರ್ಗ ಮಧ್ಯದಲ್ಲೇ ಕೆಲ ನಿಮಿಷಗಳ ಕಾಲ ವಿಶ್ರಾಂತಿ ಪಡೆಯುವ ನಿಮಿತ್ತ ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನ ಜಿಂದಾಲ್ ಏರ್ಪೋರ್ಟ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಬಂದಿಳಿದಿದ್ದಾರೆ.

ಬಳ್ಳಾರಿ ಜಿಂದಾಲ್ ಏರ್ಪೋರ್ಟ್ಗೆ ಬಂದಿಳಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೂಗುಚ್ಛ ನೀಡಿ ಸ್ವಾಗತ ಕೋರಿದ್ದಾರೆ. ಸಿಎಂ ಬಿಎಸ್ವೈ ಅವರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವ ಪ್ರಭು ಚೌವ್ಹಾಣ್ ಸಾಥ್ ನೀಡಿದ್ದಾರೆ.
ಐಜಿಪಿ ನಂಜುಂಡಸ್ವಾಮಿ, ಜಿಲ್ಲಾ ಪಂಚಾಯತ್ ಸಿಇಒ ಕೆ.ಆರ್.ನಂದಿನಿ, ಎಸ್ಪಿ ಸೈದುಲು ಅಡಾವತ್ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.