ETV Bharat / state

ಕಂಪ್ಲಿ ಸೋಮಪ್ಪ ಕೆರೆಗೆ ಡಿಸಿ ನಕುಲ್ ಭೇಟಿ..

author img

By

Published : Jun 22, 2019, 8:28 AM IST

ಜಿಲ್ಲಾಧಿಕಾರಿ ಎಸ್ ಎಸ್ ನಕುಲ್ ಅವರು ನಿನ್ನೆ ಸೋಮಪ್ಪ ಕೆರೆಗೆ ಭೇಟಿ ನೀಡಿದ್ದರು. ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ತೆರಳಿದ ಅವರು ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು.

ಕಂಪ್ಲಿ ಸೋಮಪ್ಪ ಕೆರೆಗೆ ಡಿಸಿ ನಕುಲ್ ಭೇಟಿ

ಬಳ್ಳಾರಿ: ಜಿಲ್ಲೆಯ ಕಂಪ್ಲಿ ಪಟ್ಟಣದ ಹೊರವಲಯದಲ್ಲಿರುವ ಸೋಮಪ್ಪ ಕೆರೆಗೆ ಜಿಲ್ಲಾಧಿಕಾರಿ ಎಸ್ ಎಸ್ ನಕುಲ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಕೆರೆಯ ಅಭಿವೃದ್ಧಿ ಕಾರ್ಯದ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ನೇರವಾಗಿ ತೆರಳಿ ಡಿಸಿ ನಕುಲ್ ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿದ ಅವರು, ಹೊಸ ತಾಲೂಕುಗಳಾಗಿ ಘೋಷಣೆಯಾಗಿರುವ ಕಂಪ್ಲಿ ಮತ್ತು ಕುರುಗೋಡು ಭಾಗದಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆಗೆ ಆಗಮಿಸಿದ್ದೇನೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿನ ಅಕ್ರಮ ಸಕ್ರಮ (94ಸಿ ಹಾಗೂ 94ಸಿಸಿ) ಪಟ್ಟಾ ವಿತರಣೆಗೆ ಸಂಬಂಧಿಸಿದಂತೆ ದಾಖಲಾತಿ ಪರಿಶೀಲನೆ ನಡೆಸಲಾಗುವುದು. ತಾಲೂಕು ಕೇಂದ್ರಕ್ಕೆ ಅವಶ್ಯವಿರುವ ಸರ್ಕಾರಿ ಕಚೇರಿಗಳ ಕಟ್ಟಡ ನಿರ್ಮಾಣಕ್ಕೆ ಕಂದಾಯ ಇಲಾಖೆಯಿಂದಲೇ ಜಾಗ ನೀಡಲಾಗುವುದು. ಆದರೆ, ಸಿಬ್ಬಂದಿ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಈ ವೇಳೆ ತಹಶೀಲ್ದಾರ್ ಎಂ.ರೇಣುಕಾ, ಉಪ ತಹಶೀಲ್ದಾರ್ ಬಿ ರವೀಂದ್ರ ಕುಮಾರ, ಪುರಸಭೆ ಮುಖ್ಯಾಧಿಕಾರಿ ಕೆ ದುರುಗಣ್ಣ, ಪುರಸಭೆ ಅಧ್ಯಕ್ಷ ಎಂ ಸುಧೀರ, ತಾಪಂ ಹಾಗೂ ಪುರಸಭೆ ಕಚೇರಿ ಸಿಬ್ಬಂದಿ ಇದ್ದರು.

ಬಳ್ಳಾರಿ: ಜಿಲ್ಲೆಯ ಕಂಪ್ಲಿ ಪಟ್ಟಣದ ಹೊರವಲಯದಲ್ಲಿರುವ ಸೋಮಪ್ಪ ಕೆರೆಗೆ ಜಿಲ್ಲಾಧಿಕಾರಿ ಎಸ್ ಎಸ್ ನಕುಲ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಕೆರೆಯ ಅಭಿವೃದ್ಧಿ ಕಾರ್ಯದ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ನೇರವಾಗಿ ತೆರಳಿ ಡಿಸಿ ನಕುಲ್ ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿದ ಅವರು, ಹೊಸ ತಾಲೂಕುಗಳಾಗಿ ಘೋಷಣೆಯಾಗಿರುವ ಕಂಪ್ಲಿ ಮತ್ತು ಕುರುಗೋಡು ಭಾಗದಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆಗೆ ಆಗಮಿಸಿದ್ದೇನೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿನ ಅಕ್ರಮ ಸಕ್ರಮ (94ಸಿ ಹಾಗೂ 94ಸಿಸಿ) ಪಟ್ಟಾ ವಿತರಣೆಗೆ ಸಂಬಂಧಿಸಿದಂತೆ ದಾಖಲಾತಿ ಪರಿಶೀಲನೆ ನಡೆಸಲಾಗುವುದು. ತಾಲೂಕು ಕೇಂದ್ರಕ್ಕೆ ಅವಶ್ಯವಿರುವ ಸರ್ಕಾರಿ ಕಚೇರಿಗಳ ಕಟ್ಟಡ ನಿರ್ಮಾಣಕ್ಕೆ ಕಂದಾಯ ಇಲಾಖೆಯಿಂದಲೇ ಜಾಗ ನೀಡಲಾಗುವುದು. ಆದರೆ, ಸಿಬ್ಬಂದಿ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಈ ವೇಳೆ ತಹಶೀಲ್ದಾರ್ ಎಂ.ರೇಣುಕಾ, ಉಪ ತಹಶೀಲ್ದಾರ್ ಬಿ ರವೀಂದ್ರ ಕುಮಾರ, ಪುರಸಭೆ ಮುಖ್ಯಾಧಿಕಾರಿ ಕೆ ದುರುಗಣ್ಣ, ಪುರಸಭೆ ಅಧ್ಯಕ್ಷ ಎಂ ಸುಧೀರ, ತಾಪಂ ಹಾಗೂ ಪುರಸಭೆ ಕಚೇರಿ ಸಿಬ್ಬಂದಿ ಇದ್ದರು.

Intro:ಕಂಪ್ಲಿ ಸೋಮಪ್ಪ ಕೆರೆಗೆ ಡಿಸಿ ನಕುಲ್ ಭೇಟಿ
ಬಳ್ಳಾರಿ: ಜಿಲ್ಲೆಯ ಕಂಪ್ಲಿ ಪಟ್ಟಣದ ಹೊರವಲಯದಲ್ಲಿರುವ ಸೋಮಪ್ಪ ಕೆರೆಗೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರಿಂದು ಭೇಟಿ ನೀಡಿ ಪರಿಶೀಲಿಸಿದರು.
ಕಂಪ್ಲಿ ಪಟ್ಟಣಕ್ಕೆ ಡಿಸಿ ನಕುಲ್ ಅವರು ಧಾವಿಸುತ್ತಿದ್ದಂತೆ ಸೋಮಪ್ಪ ಕೆರೆ ಅಭಿವೃದ್ಧಿಕಾರ್ಯದ ಸ್ಥಳಕ್ಕೆ ಅಧಿಕಾರಿ
ಗಳೊಂದಿಗೆ ನೇರವಾಗಿ ತೆರಳಿ ಪರಿಶೀಲನೆ ನಡೆಸಿದರು.
ಬಳಿಕ, ಪರಿವೀಕ್ಷಣಾ ಮಂದಿರಕ್ಕೆ ತೆರಳಿದ ಡಿಸಿ ನಕುಲ್
ಅವರು ಮಾತನಾಡಿ, ಕಂಪ್ಲಿ ಹೊಸ ತಾಲೂಕಗಳನ್ನಾಗಿಸಿ
ಘೋಷಣೆಯಾಗಿರುವ ಕಂಪ್ಲಿ ಮತ್ತು ಕುರುಗೋಡು ಭಾಗದಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆಗೆ ಆಗಮಿಸಿದ್ದೇನೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿನ ಅಕ್ರಮ ಸಕ್ರಮ
(94ಸಿ ಹಾಗೂ 94ಸಿಸಿ) ಪಟ್ಟಾ ವಿತರಣೆಗೆ ಸಂಬಂಧಿಸಿದಂತೆ ದಾಖಲಾತಿ ಪರಿಶೀಲನೆ ನಡೆಸಲಾಗುವುದು.
Body:ತಾಲೂಕು ಕೇಂದ್ರಕ್ಕೆ ಅವಶ್ಯವಿರುವ ಸರ್ಕಾರಿ ಕಚೇರಿಗಳ ಕಟ್ಟಡ ನಿರ್ಮಾಣಕ್ಕೆ ಕಂದಾಯ ಇಲಾಖೆ ಯಿಂದಲೇ ಜಾಗ ನೀಡಲಾಗುವುದು. ಆದರೆ, ಸಿಬ್ಬಂದಿ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ತಹಸೀಲ್ದಾರ್ ಎಂ.ರೇಣುಕಾ, ಉಪತಹಸೀಲ್ದಾರ್ ಬಿ.ರವೀಂದ್ರ ಕುಮಾರ, ಪುರಸಭೆ ಮುಖ್ಯಾಧಿಕಾರಿ ಕೆ.ದುರುಗಣ್ಣ, ಪುರಸಭೆ ಅಧ್ಯಕ್ಷ ಎಂ.ಸುಧೀರ, ತಾಲೂಕು ಪಂಚಾಯತಿ ಹಾಗೂ ಪುರಸಭೆ ಕಚೇರಿ ಸಿಬ್ಬಂದಿ ಇದ್ದರು.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_04_21_DC_NAKUL_KAMPLI_LAKE_VISIT_7203310
ETV Bharat Logo

Copyright © 2024 Ushodaya Enterprises Pvt. Ltd., All Rights Reserved.