ಹೊಸಪೇಟೆ: ಹಂಪಿ ಕನ್ನಡ ವಿಶ್ವ ವಿದ್ಯಾಲಯದಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ವೇತನಕ್ಕಾಗಿ ಸರ್ಕಾರ 3.52 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.
![copy](https://etvbharatimages.akamaized.net/etvbharat/prod-images/11189473_thumbnjpg.jpg)
ಕಳೆದ ಹತ್ತು ತಿಂಗಳಿಂದ ವೇತನವಿಲ್ಲದೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿದ್ದು, ಸಿಬ್ಬಂದಿಯ ಸಂಕಷ್ಟಕ್ಕೆ ಸ್ಪಂದಿಸುವಂತೆ ಕನ್ನಡ ವಿವಿ ಕುಲಪತಿ ಡಾ.ಸ.ಚಿ. ರಮೇಶ್ ಅವರು ಆರು ಕೋಟಿ ರೂ. ಬಿಡುಗಡೆ ಮಾಡುವಂತೆ ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಸಂಬಂಧ ಸರ್ಕಾರ ಮೊದಲ ಹಂತವಾಗಿ ಮೂರೂವರೆ ಕೋಟಿ ರೂ. ಅನದಾನ ಬಿಡುಗಡೆ ಮಾಡಿದೆ.
ಜಿಲ್ಲೆಯ ಖನಿಜ ನಿಧಿಯಿಂದ ಕನ್ನಡ ವಿವಿಯ ಅಭಿವೃದ್ಧಿಗೆ 10 ಕೋಟಿ ರೂ. ಬಿಡುಗಡೆ ಮಾಡುವಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳು ನಿರಂತರ ಪ್ರತಿಭಟನೆ ನಡೆಸುತ್ತಿವೆ. ಈ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದು, ಸಚಿವರು ನೀಡಿದ ಭರವಸೆ ಈಡೇರಿಸಿಲ್ಲ ಎನ್ನಲಾಗಿದೆ.