ವಿಜಯನಗರ : ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಬೆಣಕಲ್ಲು ಗ್ರಾಮದಲ್ಲಿನ ಅರಣ್ಯ ಪ್ರದೇಶದ 10 ರಿಂದ 15 ಎಕರೆಯಲ್ಲಿ ಬೆಳೆದಿದ್ದ ಹುಲ್ಲು ಹಾಗೂ 100 ರಿಂದ 150 ಗಿಡಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿವೆ ಎಂದು ಅಗ್ನಿ ಶಾಮಕದಳದ ಅಧಿಕಾರಿಗಳು ತಿಳಿಸಿದ್ದಾರೆ.
ಓದಿ: ರಾಜ್ಯದಲ್ಲಿಂದು 934 ಮಂದಿಗೆ ಸೋಂಕು: ಮೂವರು ಕೋವಿಡ್ಗೆ ಬಲಿ
ಯಾರೋ ಕಿಡಿಗೇಡಿಗಳು ಹುಲ್ಲಿಗೆ ಬೆಂಕಿಹಚ್ಚಿದ ಪರಿಣಾಮ ಈ ರೀತಿಯಾಗಿ ಹುಲ್ಲು, ಗಿಡಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿವೆ ಎಂದು ಸಿಬ್ಬಂದಿ ತಿಳಿಸಿದ್ದಾರೆ. ವಿಷಯ ತಿಳಿದು ಅರಣ್ಯ ಇಲಾಖೆಯ ಅಧಿಕಾರಿ ವಿಜಯ್ ಕುಮಾರ್ ಮತ್ತು ಅಗ್ನಿ ಶಾಮಕ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.