ETV Bharat / state

ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಳ: ಹಂಪಿಯ ಸ್ಮಾರಕಗಳು ಜಲಾವೃತ

author img

By

Published : Sep 6, 2019, 5:06 PM IST

Updated : Sep 6, 2019, 7:20 PM IST

ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಾದ ಹಿನ್ನೆಲೆ ಅಧಿಕ ಪ್ರಮಾಣದಲ್ಲಿ ನೀರನ್ನು ನದಿಗಳಿಗೆ ಹರಿಸಲಾಗುತ್ತಿದ್ದು, ಐತಿಹಾಸಿಕ ಹಂಪಿಯ ಕೆಲ ಸ್ಮಾರಕಗಳು ಸಂಪೂರ್ಣ ಮುಳುಗಡೆಯಾಗಿದೆ.

ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಳ: ಹಂಪಿಯ ಸ್ಮಾರಕಗಳು ಜಲಾವೃತ

ಬಳ್ಳಾರಿ: ಜಿಲ್ಲೆಯ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿರುವುದರಿಂದ ಅಂದಾಜು 28 ಕ್ರಸ್ಟ್ ಗೇಟ್​ಗಳ ಮೂಲಕ 77 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗಿದ್ದು, ಐತಿಹಾಸಿಕ ಹಂಪಿಯ ಕೆಲ ಸ್ಮಾರಕಗಳು ಜಲಾವೃತಗೊಂಡಿವೆ.

ತುಂಗಭದ್ರಾ ಜಲಾಶಯದಿಂದ ಅಧಿಕ ಪ್ರಮಾಣದಲ್ಲಿ ನೀರು ನದಿಗಳಿಗೆ ಹರಿಬಿಟ್ಟ ಪರಿಣಾಮ ಪುರಂದರದಾಸರ ಮಂಟಪ, ವಿರೂಪಾಕ್ಷೇಶ್ವರ ದೇಗುಲ ಹಿಂಭಾಗದ ಕರ್ಮಮಂಟಪ ಹಾಗೂ ಸ್ನಾನಗಟ್ಟ ಸಂಪೂರ್ಣ ಮುಳುಗಡೆಯಾಗಿವೆ. ಚಕ್ರತೀರ್ಥ ಕೋದಂಡರಾಮ ದೇಗುಲಕ್ಕೆ ಹೋಗುವ ಕಾಲು ದಾರಿಗೆ ನೀರು ನುಗ್ಗಿದ್ದು, ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಿದರೆ ಕಾಲು ದಾರಿ ಬಂದ್ ಆಗುವ ಸಾಧ್ಯತೆಯಿದೆ.

ಹಂಪಿಯ ಸ್ಮಾರಕಗಳು ಜಲಾವೃತ

ಜಲಾಶಯದ ಎರಡು ಅಡಿ ಎತ್ತರದ 20 ಗೇಟ್ ಹಾಗೂ 1 ಅಡಿ ಎತ್ತರದ 8 ಗೇಟ್‍ಗಳ ಮೂಲಕ ನೀರು ಹೊರಬಿಡಲಾಗುತ್ತಿದ್ದು, ತುಂಗಭದ್ರಾ ನದಿದಂಡೆಗೆ ಹೊಂದಿಕೊಂಡಿರುವ ಹಂಪಿ, ಬುಕ್ಕ ಸಾಗರ, ವೆಂಕಟಾಪುರ ಗ್ರಾಮಗಳಲ್ಲಿ ಡಂಗುರ ಸಾರಿ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ. ಜಲಾಶಯದಲ್ಲಿ ಒಟ್ಟು 99.739 ಟಿಎಂಸಿ ನೀರು ಸಂಗ್ರಹವಾಗಿದ್ದು, ಒಳಹರಿವು ಆಧರಿಸಿ ಲಕ್ಷಕ್ಕೂ ಅಧಿಕ ನೀರನ್ನು ನದಿಗೆ ಹರಿಸುವ ಸಾಧ್ಯತೆಯಿದೆ ಎಂದು ತುಂಗಭದ್ರಾ ಜಲಾಶಯ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ಬಳ್ಳಾರಿ: ಜಿಲ್ಲೆಯ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿರುವುದರಿಂದ ಅಂದಾಜು 28 ಕ್ರಸ್ಟ್ ಗೇಟ್​ಗಳ ಮೂಲಕ 77 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗಿದ್ದು, ಐತಿಹಾಸಿಕ ಹಂಪಿಯ ಕೆಲ ಸ್ಮಾರಕಗಳು ಜಲಾವೃತಗೊಂಡಿವೆ.

ತುಂಗಭದ್ರಾ ಜಲಾಶಯದಿಂದ ಅಧಿಕ ಪ್ರಮಾಣದಲ್ಲಿ ನೀರು ನದಿಗಳಿಗೆ ಹರಿಬಿಟ್ಟ ಪರಿಣಾಮ ಪುರಂದರದಾಸರ ಮಂಟಪ, ವಿರೂಪಾಕ್ಷೇಶ್ವರ ದೇಗುಲ ಹಿಂಭಾಗದ ಕರ್ಮಮಂಟಪ ಹಾಗೂ ಸ್ನಾನಗಟ್ಟ ಸಂಪೂರ್ಣ ಮುಳುಗಡೆಯಾಗಿವೆ. ಚಕ್ರತೀರ್ಥ ಕೋದಂಡರಾಮ ದೇಗುಲಕ್ಕೆ ಹೋಗುವ ಕಾಲು ದಾರಿಗೆ ನೀರು ನುಗ್ಗಿದ್ದು, ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಿದರೆ ಕಾಲು ದಾರಿ ಬಂದ್ ಆಗುವ ಸಾಧ್ಯತೆಯಿದೆ.

ಹಂಪಿಯ ಸ್ಮಾರಕಗಳು ಜಲಾವೃತ

ಜಲಾಶಯದ ಎರಡು ಅಡಿ ಎತ್ತರದ 20 ಗೇಟ್ ಹಾಗೂ 1 ಅಡಿ ಎತ್ತರದ 8 ಗೇಟ್‍ಗಳ ಮೂಲಕ ನೀರು ಹೊರಬಿಡಲಾಗುತ್ತಿದ್ದು, ತುಂಗಭದ್ರಾ ನದಿದಂಡೆಗೆ ಹೊಂದಿಕೊಂಡಿರುವ ಹಂಪಿ, ಬುಕ್ಕ ಸಾಗರ, ವೆಂಕಟಾಪುರ ಗ್ರಾಮಗಳಲ್ಲಿ ಡಂಗುರ ಸಾರಿ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ. ಜಲಾಶಯದಲ್ಲಿ ಒಟ್ಟು 99.739 ಟಿಎಂಸಿ ನೀರು ಸಂಗ್ರಹವಾಗಿದ್ದು, ಒಳಹರಿವು ಆಧರಿಸಿ ಲಕ್ಷಕ್ಕೂ ಅಧಿಕ ನೀರನ್ನು ನದಿಗೆ ಹರಿಸುವ ಸಾಧ್ಯತೆಯಿದೆ ಎಂದು ತುಂಗಭದ್ರಾ ಜಲಾಶಯ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

Intro:ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಹಂಪಿಯ ಕೆಲ ಸ್ಮಾರಕಗಳು ಜಲಾವೃತ!
ಬಳ್ಳಾರಿ: ಜಿಲ್ಲೆಯ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ ಆಗಿರೋದರಿಂದ ಅಂದಾಜು
28 ಕ್ರಸ್ಟ್ ಗೇಟ್ ಗಳ ಮುಖೇನ 77 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಬಿಟ್ಟಿರೋದರಿಂದ ಐತಿಹಾಸಿಕ ಪ್ರಸಿದ್ಧ ಹಂಪಿಯ ಕೆಲ ಸ್ಮಾರಕಗಳು ಜಲಾವೃತಗೊಂಡಿವೆ.
ತುಂಗಭದ್ರಾ ಜಲಾಶಯದಿಂದ ಅಧಿಕ ಪ್ರಮಾಣದಲ್ಲಿ ನೀರನ್ನು
ನದಿಗಳಿಗೆ ಹರಿಬಿಟ್ಟ ಪರಿಣಾಮ ಪುರಂದರದಾಸರ ಮಂಟಪ ಸಂಪೂರ್ಣ ಮುಳಗಡೆಯಾಗಿದೆ. ವಿರುಪಾಕ್ಷೇಶ್ವರ ದೇಗುಲದ ಇಂಭಾದಲ್ಲಿನ ಕರ್ಮಮಂಟಪ ಹಾಗೂ ಸ್ನಾನಗಟ್ಟ ಮುಳುಗಡೆ ಆಗಿವೆ. ಚಕ್ರತೀರ್ಥ ಕೋದಂಡರಾಮ ದೇಗುಲಕ್ಕೆ ಹೋಗುವ ಕಾಲು ದಾರಿಗೆ ನೀರು ನುಗ್ಗಿವೆ. ಇನ್ನು ಜಲಾಶಯದಿಂದ ಹೆಚ್ಚಿನ ಪ್ರಮಾಣ ದಲ್ಲಿ ನೀರು ಹರಿಸಿದರೆ ಕಾಲು ದಾರಿ ಬಂದ್ ಆಗುವ ಸಾಧ್ಯತೆಯಿದೆ.
ತುಂಗಭದ್ರಾ ನದಿದಂಡೆಗೆ ಹೊಂದಿಕೊಂಡಿರುವ ಹಂಪಿ, ಬುಕ್ಕ ಸಾಗರ, ವೆಂಕಟಾಪುರ ಗ್ರಾಮಗಳಿಗೆ ಡಂಗುರ ಸಾರಿ ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ತಿಳಿಸಲಾಗಿದೆ.
Body:ತುಂಗಭದ್ರಾ ಜಲಾಶಯದ ಎರಡು ಅಡಿ ಎತ್ತರದ ಮೂಲಕ 20 ಗೇಟ್ ಹಾಗೂ 1 ಅಡಿ ಎತ್ತರದ ಮೂಲಕ 8 ಗೇಟ್‍ಗಳ ಮೂಲಕ ನದಿಗೆ ನೀರನ್ನು ಹರಿಬಿಡಲಾಗುತ್ತಿದೆ. 1632.71 ಅಡಿ ನೀರಿದ್ದು, 99.739 ಟಿಎಂಸಿ ನೀರು ಸಂಗ್ರಹವಾಗಿದೆ. ಒಳಹರಿವು ಆಧರಿಸಿ ಲಕ್ಷಕ್ಕೂ ಅಧಿಕ ನೀರನ್ನು ನದಿಗೆ ಹರಿಸುವ ಸಾಧ್ಯತೆಯಿದೆ ಎಂದು ತುಂಗಭದ್ರಾ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_3_TB_CRUST_GATE_OPENED_HAMPI_MONUMENT_JALARUTHA_7203310

KN_BLY_3c_TB_CRUST_GATE_OPENED_HAMPI_MONUMENT_JALARUTHA_7203310

KN_BLY_3d_TB_CRUST_GATE_OPENED_HAMPI_MONUMENT_JALARUTHA_7203310
Last Updated : Sep 6, 2019, 7:20 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.