ETV Bharat / state

ಬಳ್ಳಾರಿ ಜಿಲ್ಲೆಯ ಬಹುಗ್ರಾಮ ಕುಡಿಯುವ ನೀರು ಪೂರೈಕೆಗೆ ಅಗತ್ಯ ಕ್ರಿಯಾ ಯೋಜನೆ ತಯಾರು

ಬಳ್ಳಾರಿ ಜಿಲ್ಲೆಯ ಹರಗಿನಡೋಣಿಯಲ್ಲಿ ಕಳೆದ ಉಪಚುನಾವಣೆಯಲ್ಲಿ ಚುನಾವಣೆ ಬಹಿಷ್ಕರಿಸಿದ್ದಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆ ಇದೇಗ ಜಿಲ್ಲಾಡಳಿತದಿಂದ ಮಂಜೂರಾಗಿದೆ.

author img

By

Published : May 7, 2019, 10:16 PM IST

ಶಶಿಧರ ಬಿ.ದೇವನಾಳ

ಬಳ್ಳಾರಿ: ತಾಲೂಕಿನ ಹರಗಿನಡೋಣಿ ಗ್ರಾಮಕ್ಕೆ ಶಾಶ್ವತ ಕುಡಿಯುವ ನೀರು ಪೂರೈಕೆ ಮಾಡುವ ಸಲುವಾಗಿ ಬಹುಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆಯಡಿ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಪೂರೈಕೆ ಹಾಗೂ ನೈರ್ಮಲ್ಯ ವಿಭಾಗದಿಂದ ಅಗತ್ಯ ಕ್ರಿಯಾ ಯೋಜನೆಯನ್ನ ತಯಾರಿಸಿ ಜಿಲ್ಲಾಡಳಿಕ್ಕೆ‌ ಪ್ರಸ್ತಾವನೆ ಸಲ್ಲಿಸಲಾಗಿದೆ.


ಕಳೆದ ಲೋಕಸಭಾ ಉಪಚುನಾವಣೆಯಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆ ಮಂಜೂರಾಗಿಲ್ಲವೆಂದು ಮತದಾರರು ಮತದಾನ ಬಹಿಷ್ಕರಿಸಿದ್ದರು. ಇದರಿಂದ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಇಕ್ಕಟ್ಟಿನ ಪರಿಸ್ಥಿತಿ ಎದುರಿಸುವಂತಾಗಿತ್ತು. ಆದರೆ ಈಗ ಜಿಲ್ಲಾಡಳಿತ ಸುಮಾರು 25 ಕೋಟಿ ರೂ.ಗಳ ವೆಚ್ಚದಲ್ಲಿ ಶಾಶ್ವತ ಕುಡಿಯುವ ನೀರು‌ ಒದಗಿಸಲು ಮುಂದಾಗಿರುವುದು ಹರಗಿನಡೋಣಿ ಗ್ರಾಮಸ್ಥರಲ್ಲಿ ಸಂತಸ ಉಂಟುಮಾಡಿದೆ.

ಕಾರ್ಯಪಾಲಕ ಎಂಜಿನಿಯರ್​​ ಶಶಿಧರ ಬಿ. ದೇವನಾಳ

ಈಗಾಗಲೇ ಹರಗಿನಡೋಣಿ ಗ್ರಾಮಕ್ಕೆ ಶಾಶ್ವತ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಪೂರೈಕೆ ಮಾಡಲಾಗುತ್ತಿದೆ. ಗ್ರಾಮದ ಗುಡ್ಡಗಾಡು ಪ್ರದೇಶದಲ್ಲಿ ಎಂಟು ಬೋರ್​ವೆಲ್ ಕೊರೆಯಿಸಲಾಗಿದೆ. ಆ ಬೋರ್​ವೆಲ್​ಗಳ ಪೈಕಿ ಕೇವಲ ಎರಡೇ ಬೋರ್​ವೆಲ್​ಗಳು ಕಾರ್ಯನಿರ್ವಹಿಸುತ್ತಿವೆ. ಅವುಗಳ ಮುಖೇನ ಗ್ರಾಮಕ್ಕೆ ಕುಡಿಯುವ ನೀರನ್ನು ಪೂರೈಸಲಾಗುತ್ತದೆ.

ಆದರೆ ನೀರಿನ ಸಮಸ್ಯೆ‌ ಮಾತ್ರ ಬಗೆಹರಿದಿಲ್ಲ. ಹೀಗಾಗಿ, ತುಂಗಭದ್ರಾ ಜಲಾಶಯದ ಉಪ ಕಾಲುವೆಗೆ ಜಾಕ್ ವೆಲ್ ಅಳವಡಿಸಿ, ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆಯೂ ಇದೆ. ಹಾಗಾಗಿ ಉಪ ಕಾಲುವೆ ಮೂಲಕ ಬಂದಂತಹ ನೀರನ್ನು ಒಂದೆಡೆ ಸಂಗ್ರಹಿಸಿಡಲು ಕೆಲವೆಡೆ ಸ್ಥಳ ಗುರುತಿಸಲಾಗಿದೆ. ಆ ಸ್ಥಳವು ಗ್ರಾಮದಿಂದ ದೂರವಿದ್ದ ಕಾರಣ, ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಖಾಲಿ ಇರುವ ಭೂಮಿಯನ್ನು ಖರೀದಿಸುವ ಪ್ರಸ್ತಾವನೆಯೂ ಕೂಡ ಇಲಾಖೆ ಮುಂದಿದೆ ಎಂದು ಗ್ರಾಮೀಣ ಕುಡಿಯುವ ನೀರು ಪೂರೈಕೆ ಹಾಗೂ ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಶಶಿಧರ ಬಿ. ದೇವನಾಳ ತಿಳಿಸಿದ್ದಾರೆ.

ಬಳ್ಳಾರಿ: ತಾಲೂಕಿನ ಹರಗಿನಡೋಣಿ ಗ್ರಾಮಕ್ಕೆ ಶಾಶ್ವತ ಕುಡಿಯುವ ನೀರು ಪೂರೈಕೆ ಮಾಡುವ ಸಲುವಾಗಿ ಬಹುಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆಯಡಿ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಪೂರೈಕೆ ಹಾಗೂ ನೈರ್ಮಲ್ಯ ವಿಭಾಗದಿಂದ ಅಗತ್ಯ ಕ್ರಿಯಾ ಯೋಜನೆಯನ್ನ ತಯಾರಿಸಿ ಜಿಲ್ಲಾಡಳಿಕ್ಕೆ‌ ಪ್ರಸ್ತಾವನೆ ಸಲ್ಲಿಸಲಾಗಿದೆ.


ಕಳೆದ ಲೋಕಸಭಾ ಉಪಚುನಾವಣೆಯಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆ ಮಂಜೂರಾಗಿಲ್ಲವೆಂದು ಮತದಾರರು ಮತದಾನ ಬಹಿಷ್ಕರಿಸಿದ್ದರು. ಇದರಿಂದ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಇಕ್ಕಟ್ಟಿನ ಪರಿಸ್ಥಿತಿ ಎದುರಿಸುವಂತಾಗಿತ್ತು. ಆದರೆ ಈಗ ಜಿಲ್ಲಾಡಳಿತ ಸುಮಾರು 25 ಕೋಟಿ ರೂ.ಗಳ ವೆಚ್ಚದಲ್ಲಿ ಶಾಶ್ವತ ಕುಡಿಯುವ ನೀರು‌ ಒದಗಿಸಲು ಮುಂದಾಗಿರುವುದು ಹರಗಿನಡೋಣಿ ಗ್ರಾಮಸ್ಥರಲ್ಲಿ ಸಂತಸ ಉಂಟುಮಾಡಿದೆ.

ಕಾರ್ಯಪಾಲಕ ಎಂಜಿನಿಯರ್​​ ಶಶಿಧರ ಬಿ. ದೇವನಾಳ

ಈಗಾಗಲೇ ಹರಗಿನಡೋಣಿ ಗ್ರಾಮಕ್ಕೆ ಶಾಶ್ವತ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಪೂರೈಕೆ ಮಾಡಲಾಗುತ್ತಿದೆ. ಗ್ರಾಮದ ಗುಡ್ಡಗಾಡು ಪ್ರದೇಶದಲ್ಲಿ ಎಂಟು ಬೋರ್​ವೆಲ್ ಕೊರೆಯಿಸಲಾಗಿದೆ. ಆ ಬೋರ್​ವೆಲ್​ಗಳ ಪೈಕಿ ಕೇವಲ ಎರಡೇ ಬೋರ್​ವೆಲ್​ಗಳು ಕಾರ್ಯನಿರ್ವಹಿಸುತ್ತಿವೆ. ಅವುಗಳ ಮುಖೇನ ಗ್ರಾಮಕ್ಕೆ ಕುಡಿಯುವ ನೀರನ್ನು ಪೂರೈಸಲಾಗುತ್ತದೆ.

ಆದರೆ ನೀರಿನ ಸಮಸ್ಯೆ‌ ಮಾತ್ರ ಬಗೆಹರಿದಿಲ್ಲ. ಹೀಗಾಗಿ, ತುಂಗಭದ್ರಾ ಜಲಾಶಯದ ಉಪ ಕಾಲುವೆಗೆ ಜಾಕ್ ವೆಲ್ ಅಳವಡಿಸಿ, ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆಯೂ ಇದೆ. ಹಾಗಾಗಿ ಉಪ ಕಾಲುವೆ ಮೂಲಕ ಬಂದಂತಹ ನೀರನ್ನು ಒಂದೆಡೆ ಸಂಗ್ರಹಿಸಿಡಲು ಕೆಲವೆಡೆ ಸ್ಥಳ ಗುರುತಿಸಲಾಗಿದೆ. ಆ ಸ್ಥಳವು ಗ್ರಾಮದಿಂದ ದೂರವಿದ್ದ ಕಾರಣ, ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಖಾಲಿ ಇರುವ ಭೂಮಿಯನ್ನು ಖರೀದಿಸುವ ಪ್ರಸ್ತಾವನೆಯೂ ಕೂಡ ಇಲಾಖೆ ಮುಂದಿದೆ ಎಂದು ಗ್ರಾಮೀಣ ಕುಡಿಯುವ ನೀರು ಪೂರೈಕೆ ಹಾಗೂ ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಶಶಿಧರ ಬಿ. ದೇವನಾಳ ತಿಳಿಸಿದ್ದಾರೆ.

Intro:ಹರಗಿನಡೋಣಿ: ಬಹುಗ್ರಾಮ ಕುಡಿಯುವ ನೀರು ಪೂರೈಕೆಗೆ ಅಗತ್ಯ ಕ್ರಿಯಾಯೋಜನೆ ತಯಾರು!
ಬಳ್ಳಾರಿ: ತಾಲೂಕಿನ ಹರಗಿನಡೋಣಿ ಗ್ರಾಮಕ್ಕೆ ಶಾಶ್ವತ ಕುಡಿಯುವ ನೀರು ಪೂರೈಕೆ ಮಾಡುವ ಸಲುವಾಗಿ ಬಹು
ಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆಯಡಿ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಪೂರೈಕೆ ಹಾಗೂ ನೈರ್ಮಲ್ಯ ವಿಭಾಗದಿಂದ ಅಗತ್ಯ ಕ್ರಿಯಾಯೋಜನೆಯನ್ನ ತಯಾರಿಸಿ ಜಿಲ್ಲಾಡಳಿಕ್ಕೆ‌ ಪ್ರಸ್ತಾವನೆ ಸಲ್ಲಿಸಿದೆ.
ಕಳೆದ ಲೋಕಸಭಾ ಉಪಚುನಾವಣೆಯಲಿ ಮತದಾನ ಬಹಿಷ್ಕರಿಸುವ ಮುಖೇನ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿಗೆ ಒಂದು ರೀತಿಯ ಮುಜುಗರಕ್ಕೆ ಸಿಲುಕಿಸು
ವಂತೆ ಗ್ರಾಮಸ್ಥರು ಮಾಡಿದ್ದರ ಬೆನ್ನಲ್ಲೇ ಸರಿಸುಮಾರು 20 - 25 ಕೋಟಿ ರೂ.ಗಳ ಅಂದಾಜು ವೆಚ್ಚದ ಅಡಿಯಲ್ಲಿ ಶಾಶ್ವತ ಕುಡಿಯುವ ನೀರು‌ ಕಲ್ಪಿಸಲು ಗ್ರಾಮೀಣ ಕುಡಿಯುವ ನೀರು ಪೂರೈಕೆ ಹಾಗೂ ನೈರ್ಮಲ್ಯ ವಿಭಾಗವು ಮುಂದಾಗಿರೋದು ನಿಜಕ್ಕೂ ಸ್ವಾಗತಾರ್ಹ.
ಬಳ್ಳಾರಿ ತಾಲೂಕಿನ ಹರಗಿನಡೋಣಿ ಗ್ರಾಮದ ಶಾಶ್ವತ ಕುಡಿಯುವ ನೀರು ಪೂರೈಕೆ ಕುರಿತು ಈ ಟಿವಿ ಭಾರತ್ ಗ್ರಾಮೀಣ ಕುಡಿಯುವ ನೀರು ಪೂರೈಕೆ ಹಾಗೂ ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಶಶಿಧರ ಬಿ.ದೇವನಾಳ ಅವರ ಗಮನ ಸೆಳೆದಾಗ, ಈಗಾಗಲೇ ಹರಗಿನಡೋಣಿ ಗ್ರಾಮಕ್ಕೆ ಶಾಶ್ವತ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಪೂರೈಕೆ ಮಾಡಲಾಗುತ್ತದೆ. ಆ ಗ್ರಾಮದ ಗುಡ್ಡಗಾಡು ಪ್ರದೇಶದಲ್ಲಿ ಎಂಟು ಬೋರ್ ವೆಲ್ ಅನ್ನು‌ ಕೊರೆಯಿಸಲಾಗಿದೆ. ಆ ಬೋರ್ ವೆಲ್ ಗಳ ಪೈಕಿ ಕೇವಲ ಎರಡೇ ಬೋರ್ ವೆಲ್ ಗಳು ಕಾರ್ಯನಿರ್ವಹಿಸುತ್ತಿವೆ. ಅವುಗಳ ಮುಖೇನ ಗ್ರಾಮಕ್ಕೆ ಕುಡಿಯುವ ನೀರನ್ನು ಪೂರೈಸಲಾಗುತ್ತದೆಯಾದ್ರೂ, ನೀರಿನ ಸಮಸ್ಯೆ‌ ಮಾತ್ರ ಬಗೆಹರಿದಿಲ್ಲ. ಹೀಗಾಗಿ, ತುಂಗಭದ್ರಾ ಜಲಾಶಯದ ಉಪಕಾಲುವೆಗೆ ಜಾಕ್ ವೆಲ್ ಅಳವಡಿಸಿ, ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಇರಾದೆಯೂ
ಇದೆ. ಆಗಾಗಿ, ಉಪಕಾಲುವೆ ಮೂಲಕ ಬಂದಂತಹ
ನೀರನ್ನು ಒಂದೆಡೆ ಸಂಗ್ರಹಿಸಿಡಲು ಕೆಲವೆಡೆ ಸ್ಥಳ ಗುರುತಿಸಲಾಗಿದೆ. ಆ ಸ್ಥಳವು ಗ್ರಾಮದಿಂದ ದೂರವಿದ್ದ
ಕಾರಣ, ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಖಾಲಿ ಇರುವ ಭೂಮಿಯನ್ನು ಖರೀದಿಸುವ ಪ್ರಸ್ತಾವನೆಯೂ ಕೂಡ ಇಲಾಖೆ ಮುಂದಿದೆ. ಹೀಗಾಗಿ, ಹತ್ತಾರು ಎಕರೆ ಪ್ರದೇಶದಲ್ಲಿ ಕುಡಿಯುವ ನೀರು ಸಂಗ್ರಹಿಸಿಡಲು ಉದ್ದೇಶಿಸಲಾಗಿದೆ. ಅದರಿಂದ ಶಾಶ್ವತ ಕುಡಿಯುವ ನೀರು ಪೂರೈಕೆಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.



Body:ಅಂದಾಜು ವೆಚ್ಚ 25 ಕೋಟಿ ರೂ.: ಹರಗಿನಡೋಣಿ ಗ್ರಾಮಕ್ಕೆ ಶಾಶ್ವತ ಕುಡಿಯುವ ನೀರು ಪೂರೈಕೆಗಾಗಿ ಅಂದಾಜು 25 ಕೋಟಿ ರೂ.ಗಳ ಕ್ರಿಯಾಯೋಜನೆ ತಯಾರಾಗಿದೆ. ಅಗತ್ಯ ಅನುದಾನ ಬಿಡುಗಡೆಗಾಗಿ ಜಿಲ್ಲಾಡಳಿತವನ್ನು ಕೋರಲಾಗಿದೆ. ಆದಷ್ಟು ಬೇಗನೆ ಶಾಶ್ವತ ಕುಡಿಯುವ ನೀರು ಪೂರೈಕೆಗೆ
ಚಾಲನೆ ದೊರೆಯಲಿದೆ. ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕರ ವಿಶೇಷ ಕಾಳಜಿಯಿಂದಾಗಿ ಹರಗಿನಡೋಣಿ
ಗ್ರಾಮಕ್ಕೆ ಶೀಘ್ರವೇ ಕುಡಿಯುವ ನೀರು ಪೂರೈಕೆ ಯೋಜ
ನೆಗೆ ಚಾಲನೆ ದೊರೆಯಲಿದೆ ಎಂದರು.
ಕೂಡ್ಲಿಗಿ ತಾಲೂಕಿನ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ: ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೆಲ ಗ್ರಾಮಗಳಲ್ಲಿ ಮಾತ್ರ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುತ್ತದೆ. ಆದರೆ, ಉಳಿದ ತಾಲೂಕಿನಲ್ಲಿ ಯಾವುದೇ ಸಮಸ್ಯೆಯಿಲ್ಲ. ಜಿಲ್ಲೆಯ 248 ಗ್ರಾಮಗಳಲ್ಲಿ ಪ್ಲೋರೈಡ್ ಯುಕ್ತ ಕುಡಿಯುವ ನೀರಿನ ಸಮಸ್ಯೆಯಿತ್ತು. ಅವೆಲ್ಲವನ್ನೂ ಶುದ್ಧೀಕರಣ ಘಟಕ ದಿಂದಲೇ ಶುದ್ಧೀಕರಿಸಿ ಆಯಾ ಗ್ರಾಮಗಳಿಗೆ ಕುಡಿಯುವ ನೀರನ್ನು ಪೂರೈಕೆ ಮಾಡಲಾಗುತ್ತದೆ.‌ ಸದ್ಯ ಹದಿಮೂರು ಗ್ರಾಮಗಳಲ್ಲಿ ಇಂತಹ ಸಮಸ್ಯೆಯಿದೆ. ಶುದ್ಧೀಕರಣ ಘಟಕ ದಿಂದ ನೀರು ಪೂರೈಕೆಗೆ ಅಗತ್ಯಕ್ರಮ ತೆಗೆದುಕೊಳ್ಳಲಾಗುವುದು ಎಂದರು.
300 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ: ಜಿಲ್ಲೆಯ ಮೂನ್ನೂರಕ್ಕೂ ಹೆಚ್ಚು‌ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆಯಾಗದಿರುವುದು ಬೆಳಕಿಗೆ ಬಂದಿದೆ. ಅವುಗಳಲ್ಲಿ ಕ್ಯಾಂಪ್ ಹಾಗೂ ಸಣ್ಣದಾದ ಗ್ರಾಮಗಳೂ ಒಳಗೊಂಡಿವೆ. ಶೀಘ್ರವೇ ಆ ಗ್ರಾಮಗಳಿಗೂ ಕುಡಿಯುವ ‌ನೀರು ಪೂರೈಕೆಗೆ ಅಗತ್ಯ ಕ್ರಮ ಜರುಗಿಸಲಾಗುವುದು ಎಂದರು.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.


Conclusion:KN_BLY_01_06_DRINKING_WATER_SUPPLY_STORY_BYTE_7203310

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.