ಬಳ್ಳಾರಿ: ಕಳೆದ ಎರಡ್ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಹೆದ್ದಾರಿಯ ತಗ್ಗು ಪ್ರದೇಶಗಳಲ್ಲಿ ನೀರು ನುಗಿದ್ದು, ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.
![ರಸ್ತೆ ತಗ್ಗು ಪ್ರದೇಶಗಳಲ್ಲಿ ನಿಂತ ಮಳೆ ನೀರು](https://etvbharatimages.akamaized.net/etvbharat/prod-images/09:54:20:1595651060_kn-02-bly-250720-kudligi-nh50-news-ka10007_25072020084533_2507f_1595646933_1016.jpg)
ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಖಾನಾಹೊಸಹಳ್ಳಿ, ಹುಲಿಕೆರೆ, ಬಣವಿಕಲ್ಲು ಪ್ರದೇಶದ ಲಿಂಕ್ ರಸ್ತೆಗಳಲ್ಲಿ ಎರಡು ಅಡಿ ನೀರು ನಿಂತಿದ್ದು, ವಾಹನಗಳ ಸಂಚಾರ ಹಾಗೂ ಸಾರ್ವಜನಿಕರು ಪರದಾಡುತ್ತಿದ್ದಾರೆ. ಅಷ್ಟೇ ಅಲ್ಲದೆ ಮಳೆ ನೀರು ಸುತ್ತಲಿನ ಆಸ್ಪತ್ರೆ ಹಾಗೂ ಕಟ್ಟಡಗಳ ಮುಂದೆ ನೀರು ಹರಿಯುತ್ತಿದೆ.
![ರಸ್ತೆ ತಗ್ಗು ಪ್ರದೇಶಗಳಲ್ಲಿ ನಿಂತ ಮಳೆ ನೀರು](https://etvbharatimages.akamaized.net/etvbharat/prod-images/09:54:20:1595651060_kn-02-bly-250720-kudligi-nh50-news-ka10007_25072020084533_2507f_1595646933_441.jpg)
ಬಣವಿಕಲ್ಲಿನ ಅವಾಂತರ :
ಬಣವಿಕಲ್ಲಿನ ಒಳ ಹೋಗುವ ರಸ್ತೆ ಸಂಪೂರ್ಣವಾಗಿ ಜಾಲವೃತಗೊಂಡಿದೆ. ಇದರಿಂದ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.
ಈ ಕುರಿತಂತೆ ತಾಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯಾವೆಲ್ಲ ಸಮಸ್ಯೆ ಉಂಟಾಗಿದೆ ಎಂಬುದರ ಕುರಿತು ವಿಡಿಯೋ ಮಾಡಿ ವಾಟ್ಸ್ಆ್ಯಪ್ ಗ್ರೂಪ್ ಗೆ ಹಾಕಿ ಅಧಿಕಾರಿಗಳ ಗಮನಕ್ಕೆ ತರುವ ಪ್ರಯತ್ನವನ್ನು ಮಾಡಲಾಗಿದೆ.
![Kudlagi](https://etvbharatimages.akamaized.net/etvbharat/prod-images/09:54:21:1595651061_kn-02-bly-250720-kudligi-nh50-news-ka10007_25072020084533_2507f_1595646933_121.jpg)
ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದ ಅಧಿಕಾರಿಗಳು ಲಿಂಕ್ ರಸ್ತೆಗಳಲ್ಲಿ ಮಳೆ ನೀರು ನಿಲ್ಲದಂತೆ ಕ್ರಮ ಕೈಗೊಂಡು ಸಾರ್ವಜನಿಕರಿಗೆ, ವಾಹನ ಸವಾರರಿಗೆ ಅನುಕೂಲ ಮಾಡಿಕೊಡಬೇಕಾಗಿದೆ.