ಹೊಸಪೇಟೆ (ಬಳ್ಳಾರಿ): ತಾಲೂಕು ಆಸ್ಪತ್ರೆಯ ಆವರಣದಲ್ಲಿ ಮೃತದೇಹವನ್ನು ಮಳೆಯಲ್ಲಿಯೇ ಬಿಟ್ಟಿರುವ ಅಮಾನವೀಯ ಘಟನೆ ಹೊಸಪೇಟೆಯಲ್ಲಿ ನಡೆದಿದೆ.
ಆಟೋ ಚಾಲಕನೊಬ್ಬ ತನ್ನ ಮೊಬೈಲ್ನಲ್ಲಿ ವಿಡಿಯೋ ಮಾಡುತ್ತಾ, ಇಲ್ಲಿನ ಹೊಸಪೇಟೆ ತಾಲೂಕು ಆಸ್ಪತ್ರೆ ಹೇಗಿದೆ ಎಂಬುದು ನಿಮಗೆ ಗೊತ್ತು. ಪ್ರತಿನಿತ್ಯ ಈ ಆಸ್ಪತ್ರೆಗೆ ಗರ್ಭಿಣಿಯರು ಸೇರಿದಂತೆ ಅನೇಕರು ಚಿಕಿತ್ಸೆಗಾಗಿ ಆಗಮಿಸುತ್ತಾರೆ. ಹೀಗಾಗಿ ಕೊರೊನಾ ವೈರಸ್ ಪರೀಕ್ಷಾ ಕೇಂದ್ರವನ್ನು ಬೇರೆಡೆ ಸ್ಥಳಾಂತರಿಸಬೇಕೆಂದು ಸಚಿವ ಆನಂದ್ ಸಿಂಗ್ ಅವರಿಗೆ ಮನವಿ ಮಾಡಿದ್ದಾರೆ.
ಮೃತದೇಹವನ್ನು ಮಳೆಯಲ್ಲಿಯೇ ಬಿಟ್ಟಿರುವ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಅಮಾನವೀಯವಾಗಿ ವರ್ತಿಸಿದ್ದಾರೆ. ಕೆಲ ಗಂಟೆಗಳ ಬಳಿಕ ಮೃತದೇಹಕ್ಕೆ ಪಿಪಿಇ ಕಿಟ್ ಹಾಕಿ ಮುಚ್ಚಿದ್ದಾರೆ. ಈ ಘಟನೆ ಬಗ್ಗೆ ಇಲ್ಲಿನ ಆಟೋ ಚಾಲಕರು ಬೇಸರ ವ್ಯಕ್ತಪಡಿಸಿದ್ದಾರೆ. ಕೊರೊನಾ ವೈರಸ್ ಪರೀಕ್ಷಾ ಕೇಂದ್ರ ಬೇರೆಡೆ ಸ್ಥಳಾಂತರಿಸಬೇಕೆಂದು ಒತ್ತಾಯಿಸಿದ್ದಾರೆ.