ETV Bharat / state

ನನಗೆ ಸಚಿವ ಸ್ಥಾನ ಕೊಟ್ಟರೆ ನಿಭಾಯಿಸುವೆ: ಶಾಸಕ ಸೋಮಶೇಖರ ರೆಡ್ಡಿ - undefined

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸ್ಥಾಪಿಸುತ್ತಿರುವ ಹಿನ್ನೆಲೆಯಲ್ಲಿ ಮಾತನಾಡಿದ ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ, ನಾನೇನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ, ಒಂದು ವೇಳೆ ಸಚಿವ ಸ್ಥಾನ ಸಿಕ್ಕರೆ ಜವಾಬ್ದಾರಿಯಿಂದ ನಿಭಾಯಿಸುವೆ ಎಂದು ಹೇಳಿದ್ದಾರೆ.

ಶಾಸಕ ಗಾಲಿ ಸೋಮಶೇಖರ ರೆಡ್ಡಿ
author img

By

Published : Jul 26, 2019, 4:04 PM IST

ಬಳ್ಳಾರಿ: ನನಗೆ ಸಚಿವ ಸ್ಥಾನ ಕೊಟ್ಟರೆ‌ ಅತ್ಯಂತ ಜವಾಬ್ದಾರಿಯಿಂದ ನಿಭಾಯಿಸುವೆ ಎಂದು ಬಳ್ಳಾರಿ ನಗರ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಹೇಳಿದ್ರು.

'ಕಾರ್ಗಿಲ್ ವಿಜಯ್ ದಿವಸ್' ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಶಾಸಕ ರೆಡ್ಡಿ ಸುದ್ದಿಗಾರರೊಂದಿಗೆ ಮಾತನಾಡಿ, ಆ ತಾಯಿ ಭುವನೇಶ್ವರಿ, ಬಳ್ಳಾರಿ‌ಯ ಕನಕ ದುರ್ಗಮ್ಮನ ಆರ್ಶೀವಾದದಿಂದ ನನಗೆ ಸಚಿವ ಸ್ಥಾನ ದೊರೆತರೆ ನೋಡೋಣ. ಅದನ್ನು ನಾನು ಅತ್ಯಂತ ಜವಾಬ್ದಾರಿಯಿಂದ ನಿಭಾಯಿಸುವೆ. ಸದ್ಯ ನಾನಂತೂ ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ತಿಳಿಸಿದ್ರು.

ಶಾಸಕ ಗಾಲಿ ಸೋಮಶೇಖರ ರೆಡ್ಡಿ

ಬಿಎಸ್ ವೈ ಪ್ರಮಾಣ ವಚನ ಸ್ವೀಕಾರ ಸಂತಸ ತಂದಿದೆ:

ಪಕ್ಷದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದು ಸಂಜೆ 6 ಗಂಟೆಗೆ ಪ್ರಮಾಣ ವಚನ ಸ್ವೀಕರಿಸುತ್ತಿರುವುದು ನನಗೆ ಖುಷಿ ತಂದಿದೆ. ಇನ್ನು ಮುಂದೆ ಅಭಿವೃದ್ಧಿಯತ್ತ ಕರ್ನಾಟಕ ಸಾಗಲಿದೆ ಎಂದು ರೆಡ್ಡಿ ಹರ್ಷ ವ್ಯಕ್ತಪಡಿಸಿದ್ರು. ಮೊಳಕಾಲ್ಮೂರು ಶಾಸಕ ಶ್ರೀರಾಮುಲು ಅವರು ಪಕ್ಷದ ಪ್ರಬಲ ನಾಯಕ. ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂಬ ವಿಚಾರವು ಮೊದಲಿನಿಂದಲೂ ಇದೆ. ಹೀಗಾಗಿ ಶ್ರೀರಾಮುಲು ಅವರು ಡಿಸಿಎಂ ಆಗಲು ಸಮರ್ಥರಿದ್ದಾರೆ ಎಂದು ಹೇಳುವ ಮೂಲಕ ಮಂತ್ರಿಗಿರಿಗೆ ಲಾಬಿ ನಡೆಸಿದ್ರು.

ಬಳ್ಳಾರಿ: ನನಗೆ ಸಚಿವ ಸ್ಥಾನ ಕೊಟ್ಟರೆ‌ ಅತ್ಯಂತ ಜವಾಬ್ದಾರಿಯಿಂದ ನಿಭಾಯಿಸುವೆ ಎಂದು ಬಳ್ಳಾರಿ ನಗರ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಹೇಳಿದ್ರು.

'ಕಾರ್ಗಿಲ್ ವಿಜಯ್ ದಿವಸ್' ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಶಾಸಕ ರೆಡ್ಡಿ ಸುದ್ದಿಗಾರರೊಂದಿಗೆ ಮಾತನಾಡಿ, ಆ ತಾಯಿ ಭುವನೇಶ್ವರಿ, ಬಳ್ಳಾರಿ‌ಯ ಕನಕ ದುರ್ಗಮ್ಮನ ಆರ್ಶೀವಾದದಿಂದ ನನಗೆ ಸಚಿವ ಸ್ಥಾನ ದೊರೆತರೆ ನೋಡೋಣ. ಅದನ್ನು ನಾನು ಅತ್ಯಂತ ಜವಾಬ್ದಾರಿಯಿಂದ ನಿಭಾಯಿಸುವೆ. ಸದ್ಯ ನಾನಂತೂ ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ತಿಳಿಸಿದ್ರು.

ಶಾಸಕ ಗಾಲಿ ಸೋಮಶೇಖರ ರೆಡ್ಡಿ

ಬಿಎಸ್ ವೈ ಪ್ರಮಾಣ ವಚನ ಸ್ವೀಕಾರ ಸಂತಸ ತಂದಿದೆ:

ಪಕ್ಷದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದು ಸಂಜೆ 6 ಗಂಟೆಗೆ ಪ್ರಮಾಣ ವಚನ ಸ್ವೀಕರಿಸುತ್ತಿರುವುದು ನನಗೆ ಖುಷಿ ತಂದಿದೆ. ಇನ್ನು ಮುಂದೆ ಅಭಿವೃದ್ಧಿಯತ್ತ ಕರ್ನಾಟಕ ಸಾಗಲಿದೆ ಎಂದು ರೆಡ್ಡಿ ಹರ್ಷ ವ್ಯಕ್ತಪಡಿಸಿದ್ರು. ಮೊಳಕಾಲ್ಮೂರು ಶಾಸಕ ಶ್ರೀರಾಮುಲು ಅವರು ಪಕ್ಷದ ಪ್ರಬಲ ನಾಯಕ. ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂಬ ವಿಚಾರವು ಮೊದಲಿನಿಂದಲೂ ಇದೆ. ಹೀಗಾಗಿ ಶ್ರೀರಾಮುಲು ಅವರು ಡಿಸಿಎಂ ಆಗಲು ಸಮರ್ಥರಿದ್ದಾರೆ ಎಂದು ಹೇಳುವ ಮೂಲಕ ಮಂತ್ರಿಗಿರಿಗೆ ಲಾಬಿ ನಡೆಸಿದ್ರು.

Intro:ನನಗೆ ಸಚಿವ ಸ್ಥಾನ ಕೊಟ್ರೆ ನಿಭಾಯಿಸುವೆ: ಶಾಸಕ ರೆಡ್ಡಿ
ಬಳ್ಳಾರಿ: ನನಗೆ ಸಚಿವ ಸ್ಥಾನ ಕೊಟ್ರೆ.‌ ಅತ್ಯಂತ ಜವಾಬ್ದಾರಿ
ಯಿಂದ ನಿಭಾಯಿಸುವೆ ಎಂದು ಬಳ್ಳಾರಿ ನಗರ ಶಾಸಕ ಗಾಲಿ ಸೋಮಶೇಖರರೆಡ್ಡಿ ಇಂಗಿತ ವ್ಯಕ್ತಪಡಿಸಿದ್ದಾರೆ.
ಬಳ್ಳಾರಿಯಲ್ಲಿಂದು ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಶಾಸಕ ರೆಡ್ಡಿ ಸುದ್ದಿಗಾರರೊಂದಿಗೆ ಮಾತನಾಡಿ, ತಾವೂ ಕೂಡ ಸಚಿವ ಸ್ಥಾನ ಆಕಾಂಕ್ಷೆಯಾಗಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಆ ತಾಯಿ ಭುವನೇಶ್ವರಿ, ಬಳ್ಳಾರಿ‌ ಕನಕ ದುರ್ಗಮ್ಮನ ಆರ್ಶೀವಾದದಿಂದ ನನಗೆ ಸಚಿವ ಸ್ಥಾನ ದೊರೆತರೆ ನೋಡೋಣ. ಅದನ್ನ ನಾನು ಅತ್ಯಂತ ಜವಾಬ್ದಾರಿಯಿಂದ ನಿಭಾಯಿಸುವೆ. ಸದ್ಯ ನಾನಂತೂ ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಸ್ಪಷ್ಟಪಡಿಸಿ ದ್ದಾರೆ.
Body:ಬಿಎಸ್ ವೈ ಪ್ರಮಾಣ ವಚನ ಸ್ವೀಕಾರ ಸಂತಸ ತಂದಿದೆ:
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸುತ್ತಿರುವುದು ನನಗೆ ಸಂತಸ ತಂದಿದೆ. ಇನ್ನು ಅಭಿವೃದ್ಧಿಯತ್ತ ಕರ್ನಾಟಕ ಸಾಗಲಿದೆ ಎಂದು ಶಾಸಕ ರೆಡ್ಡಿ ತಿಳಿಸಿದ್ದಾರೆ.
ಮೊಳಕಾಲ್ಮೂರು ಶಾಸಕ ಶ್ರೀರಾಮುಲು ಅವರು ಪ್ರಬಲ ನಾಯಕರಿದ್ದಾರೆ. ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂಬ ವಿಚಾರವು ಮೊದಲಿನಿಂದಲೂ ಇದೆ. ಹೀಗಾಗಿ, ಶಾಸಕ ಶ್ರೀರಾಮುಲು ಅವರು ಡಿಸಿಎಂ ಆಗಬೇಕೆಂದರು.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_3_MLA_SOMASHEKAR_REDY_BYTE_7203310

KN_BLY_3g_MLA_SOMASHEKAR_REDY_BYTE_7203310

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.