ಬಳ್ಳಾರಿ: ಜಿಲ್ಲೆಯ ಕೊಟ್ಟೂರು ತಾಲೂಕಿನ ಇಂದು ಪ್ರೌಢಶಾಲೆ ಎಸ್.ಎಸ್.ಎಲ್.ಸಿಯಲ್ಲಿ ಶೇ 100ರಷ್ಟು ಫಲಿತಾಂಶ ಪಡೆದಿದೆ.

ಇಂದು ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಅಜ್ಜಯ್ಯ.ಡಿ 613, ಅವಿನಾಶ ಎಸ್.ಕೆ. 606, ದರ್ಶನ್.ಕೆ 598 ಅಂಕಗಳನ್ನು ಪಡೆಯುವುದರ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಶಿಕ್ಷಣ ಸಂಸ್ಥೆ ವತಿಯಿಂದ 3 ವರ್ಷದ ಕೆಳಗೆ 'ಕನ್ನಡ ಭಾಷೆಗೊಂದು ಅಳಿಲು ಸೇವೆ' ಯೋಜನೆಯಡಿ ಸಂಪೂರ್ಣ ಉಚಿತ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೆ ತರಲಾಗಿತ್ತು. ಈ ವ್ಯವಸ್ಥೆಯ ಮೊದಲ ಬ್ಯಾಚ್ ಇದಾಗಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳೆಲ್ಲರೂ 'ಎ' ಶ್ರೇಣಿಯಲ್ಲಿ ಉತ್ತೀರ್ಣರಾಗಿ ಉತ್ತಮ ಸಾಧನೆ ಮಾಡಿರುವುದು ಸಂತಸ ತಂದಿದೆ ಎಂದು ಮುಖ್ಯಗುರುಗಳಾದ ಅಶೋಕ್ ಜಿ.ಎಂ. ತಿಳಿಸಿದರು.

ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದೆ.