ಬಳ್ಳಾರಿ: ಕೊರೊನಾ ನಿಯಮಗಳ ಬಗ್ಗೆ ಸಾರ್ವಜನಿಕರಿಗೆ ಮೂಡಿಸಬೇಕಾದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಸ್ವತಃ ತಾವೇ ಕೋವಿಡ್ ಮಾರ್ಗಸೂಚಿಗಳನ್ನು ಗಾಳಿಗೆ ತೂರಿದ್ದಾರೆ.
ಜಿಲ್ಲೆಯ ಕಂಪ್ಲಿ ತಾಲೂಕಿನ ಇಟಿಗಿ ಗ್ರಾಮದಲ್ಲಿ ನಡೆದ ಸಂಗಮೇಶ್ವರ ಜಾತ್ರೆಯಲ್ಲಿ ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಗುಂಪು - ಗುಂಪಾಗಿ ತೇರು ಎಳೆಯುವ ಮೂಲಕ ಶಾಸಕ ಕೋವಿಡ್ ಮಾರ್ಗಸೂಚಿಗಳನ್ನು ಗಾಳಿಗೆ ತೂರಿದ್ದಾರೆ. ಜಾತ್ರೆಯಲ್ಲಿ ಯುವಕರು, ಹಿರಿಯರು, ಚಿಕ್ಕಮಕ್ಕಳು ಸೇರಿದಂತೆ ಸಾವಿರಾರು ಜನರು ಸೇರಿದ್ದರು.
ಓದಿ: ಅಭಿನಂದನಾ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಶಾಸಕ ರೇಣುಕಾಚಾರ್ಯ
ಶಾಸಕ ಗಣೇಶ್ ಜಾತ್ರೆಯಲ್ಲಿ ತೇರು ಎಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಒಬ್ಬ ಜನಪತ್ರಿನಿಧಿಯಾಗಿ ಸಾರ್ವಜನಿಕರಿಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಬದಲಿಗೆ, ಜೆ.ಎನ್.ಗಣೇಶ ತಾವೇ ಸರ್ಕಾರದ ನಿಯಮ ಉಲ್ಲಂಘನೆ ಮಾಡಿರೋದು ದುರಂತ ಎಂದು ಜನರು ಕಾಮೆಂಟ್ ಮಾಡುತ್ತಿದ್ದಾರೆ.