ETV Bharat / state

ಹೊಸಪೇಟೆ: ಸರ್ಕಾರದ ವಿರುದ್ಧ ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿ ಪ್ರತಿಭಟನೆ

author img

By

Published : Sep 23, 2020, 3:59 PM IST

ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿ ನೇತೃತ್ವದಲ್ಲಿ ಹೊಸಪೇಟೆಯಲ್ಲಿ ಪ್ರತಿಭಟನೆ ನಡೆಸಲಾಯಿತು.

Protest
Protest

ಹೊಸಪೇಟೆ: ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ಬರಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿ ನೇತೃತ್ವದಲ್ಲಿ ನಗರದ ರೋಟರಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೋವಿಡ್-19 ಲಾಕ್‌ಡೌನ್ ನಿಂದಾಗಿ ಅತಿಥಿ ಉಪನ್ಯಾಸಕರ ಬದುಕು ತತ್ತರಿಸಿ‌ ಹೋಗಿದೆ.‌ ಆರ್ಥಿಕ ಮುಗ್ಗಟ್ಟಿನಿಂದ ಹಲವು ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆರ್ಥಿಕ ಸಂಕಷ್ಟದಿಂದಾಗಿ ಬದುಕು ಸಾಗಿಸಲು ಹೆಣಗುಡುತ್ತಿದ್ದಾರೆ. ಕೆಲ ಉಪನ್ಯಾಸಕರು ತಳ್ಳುವ ಗಾಡಿಯಲ್ಲಿ ಹಣ್ಣು-ಹಂಪಲು, ತರಕಾರಿ ಮಾರುತ್ತಾ ಜೀವನ ಸಾಗಿಸುತ್ತಿದ್ದಾರೆ. ಕೂಡಲೇ ಅವರ ನೆರವಿಗೆ ಸರ್ಕಾರ ಬರಬೇಕು ಎಂದು ಆಗ್ರಹಿಸಿದರು. ಬಳಿಕ ಬೇಡಿಕೆ ಈಡೇರಿಕೆಗೆ ತಹಶೀಲ್ದಾರ್ ಕಚೇರಿಯ ಶಿರಸ್ತೇದಾರ್ ಶ್ರೀಧರ್ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮುಖಂಡರಾದ ಸಿದ್ದಲಿಂಗ ಬಾಗೇವಾಡಿ, ಎಂ.ಉಮಾದೇವಿ, ಹುಲುಗಪ್ಪ ಇನ್ನಿತರರಿದ್ದರು.

ಹೊಸಪೇಟೆ: ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ಬರಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿ ನೇತೃತ್ವದಲ್ಲಿ ನಗರದ ರೋಟರಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೋವಿಡ್-19 ಲಾಕ್‌ಡೌನ್ ನಿಂದಾಗಿ ಅತಿಥಿ ಉಪನ್ಯಾಸಕರ ಬದುಕು ತತ್ತರಿಸಿ‌ ಹೋಗಿದೆ.‌ ಆರ್ಥಿಕ ಮುಗ್ಗಟ್ಟಿನಿಂದ ಹಲವು ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆರ್ಥಿಕ ಸಂಕಷ್ಟದಿಂದಾಗಿ ಬದುಕು ಸಾಗಿಸಲು ಹೆಣಗುಡುತ್ತಿದ್ದಾರೆ. ಕೆಲ ಉಪನ್ಯಾಸಕರು ತಳ್ಳುವ ಗಾಡಿಯಲ್ಲಿ ಹಣ್ಣು-ಹಂಪಲು, ತರಕಾರಿ ಮಾರುತ್ತಾ ಜೀವನ ಸಾಗಿಸುತ್ತಿದ್ದಾರೆ. ಕೂಡಲೇ ಅವರ ನೆರವಿಗೆ ಸರ್ಕಾರ ಬರಬೇಕು ಎಂದು ಆಗ್ರಹಿಸಿದರು. ಬಳಿಕ ಬೇಡಿಕೆ ಈಡೇರಿಕೆಗೆ ತಹಶೀಲ್ದಾರ್ ಕಚೇರಿಯ ಶಿರಸ್ತೇದಾರ್ ಶ್ರೀಧರ್ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮುಖಂಡರಾದ ಸಿದ್ದಲಿಂಗ ಬಾಗೇವಾಡಿ, ಎಂ.ಉಮಾದೇವಿ, ಹುಲುಗಪ್ಪ ಇನ್ನಿತರರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.