ETV Bharat / state

ಬಳ್ಳಾರಿ ಮತ್ತು ಹೊಸಪೇಟೆಯಲ್ಲಿ ಸರಳವಾಗಿ ಕೆಂಪೇಗೌಡ ಜಯಂತಿ ಆಚರಣೆ

ಕೊರೊನಾ ಹಿನ್ನೆಲೆ ಬಳ್ಳಾರಿ ಮತ್ತು ಹೊಸಪೇಟೆಯಲ್ಲಿ ಇಂದು ಸರಳವಾಗಿ ನಾಡಪ್ರಭು ಕಂಪೇಗೌಡರ ದಿನಾಚರಣೆ ಆಚರಿಸಲಾಯಿತು..

author img

By

Published : Jun 27, 2020, 5:20 PM IST

Bellary
Bellary

ಬಳ್ಳಾರಿ/ಹೊಸಪೇಟೆ : ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡರ 511ನೇ ಜಯಂತಿಯನ್ನು ಬಳ್ಳಾರಿ ಮತ್ತು ಹೊಸಪೇಟೆಯಲ್ಲಿ ಶನಿವಾರ ಸರಳವಾಗಿ ಆಚರಿಸಲಾಯಿತು.

ಬಳ್ಳಾರಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣನವರ್ ಅವರು ಕೇಂಪೇಗೌಡರ ಭಾವಚಿತ್ರಕ್ಕೆ‌ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ನಮಿಸಿದರು. ಇದೇ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ ಇದ್ದರು.

ಕೊರೊನಾ ಹಿನ್ನೆಲೆ ಹೊಸಪೇಟೆ ತಾಲೂಕು ಆಡಳಿತದ ವತಿಯಿಂದ ತಾಲೂಕು ಕಚೇರಿಯ ಆವರಣದಲ್ಲಿ ಸರಳವಾಗಿ ಆಚರಿಸಲಾಯಿತು. ತಾಲೂಕು ಕಚೇರಿಯ ಸಿಬ್ಬಂದಿ ಕೆಂಪೇಗೌಡರ ಭಾವಚಿತ್ರಕ್ಕೆ ನಮಿಸಿದರು.

ಈ ಸಂದರ್ಭದಲ್ಲಿ ಶಿರಸ್ತೇದಾರರಾದ ರಮೇಶ್, ಶ್ರೀಧರ್ ಸೇರಿ ಮಂಜುನಾಥ್ ಹಾಗೂ ಕಚೇರಿಯ ಸಿಬ್ಬಂದಿ ಇದ್ದರು.

ಬಳ್ಳಾರಿ/ಹೊಸಪೇಟೆ : ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡರ 511ನೇ ಜಯಂತಿಯನ್ನು ಬಳ್ಳಾರಿ ಮತ್ತು ಹೊಸಪೇಟೆಯಲ್ಲಿ ಶನಿವಾರ ಸರಳವಾಗಿ ಆಚರಿಸಲಾಯಿತು.

ಬಳ್ಳಾರಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣನವರ್ ಅವರು ಕೇಂಪೇಗೌಡರ ಭಾವಚಿತ್ರಕ್ಕೆ‌ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ನಮಿಸಿದರು. ಇದೇ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ ಇದ್ದರು.

ಕೊರೊನಾ ಹಿನ್ನೆಲೆ ಹೊಸಪೇಟೆ ತಾಲೂಕು ಆಡಳಿತದ ವತಿಯಿಂದ ತಾಲೂಕು ಕಚೇರಿಯ ಆವರಣದಲ್ಲಿ ಸರಳವಾಗಿ ಆಚರಿಸಲಾಯಿತು. ತಾಲೂಕು ಕಚೇರಿಯ ಸಿಬ್ಬಂದಿ ಕೆಂಪೇಗೌಡರ ಭಾವಚಿತ್ರಕ್ಕೆ ನಮಿಸಿದರು.

ಈ ಸಂದರ್ಭದಲ್ಲಿ ಶಿರಸ್ತೇದಾರರಾದ ರಮೇಶ್, ಶ್ರೀಧರ್ ಸೇರಿ ಮಂಜುನಾಥ್ ಹಾಗೂ ಕಚೇರಿಯ ಸಿಬ್ಬಂದಿ ಇದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.