ಬಳ್ಳಾರಿ: ಕೋವಿಡ್ ವಿರುದ್ಧ ಹೋರಾಡಲು ಸೇವೆ ಸಲ್ಲಿಸುತ್ತಿರುವ ಆರೋಗ್ಯ ಸಿಬ್ಬಂದಿಗೆ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರಿಗೆ ಕೂಡ್ಲಿಗಿ ಶಾಸಕ ಎನ್.ವೈ.ಗೋಪಾಲಕೃಷ್ಣ ಅವರು ವೈಯಕ್ತಿಕವಾಗಿ 1,000 ಹೆಚ್ಚು ಬ್ಯಾಗ್ ಹಾಗೂ ಛತ್ರಿಗಳನ್ನು ವಿತರಿಸಿದ್ದಾರೆ.
ಕೂಡ್ಲಿಗಿ ಪ್ರವಾಸಿ ಮಂದಿರ ಆವರಣದಲ್ಲಿ ಕೊರೊನಾ ವಿರುದ್ಧ ಹೋರಾಟ ನಡೆಸುತ್ತಿರುವ ಕೊರೊನಾ ವಾರಿಯರ್ಸ್ಗಳ ಸೇವೆ ಅತ್ಯಮೂಲ್ಯ ಎಂದು ಶಾಸಕ ಎನ್.ವೈ ಗೋಪಾಲಕೃಷ್ಣ ಅಭಿನಂದಿಸಿದರು.
ಈ ಸಮಯದಲ್ಲಿ ತಹಶಿಲ್ದಾರ್, ತಾಲೂಕು ಪಂಚಾಯತ್ ಇ.ಓ, ಪೊಲೀಸ್ ಸಿಬ್ಬಂದಿ ಇದ್ದರು.