ಬಳ್ಳಾರಿ : ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ನನ್ನ ಬದಲಾವಣೆ ಮಾಡುವುದು ಮುಖ್ಯಮಂತ್ರಿಗಳ ವಿವೇಚನಗೆ ಬಿಟ್ಟಿದ್ದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಹೇಳಿದರು.
![Bellary district incharge minister, Bellary district incharge minister Change, Bellary district incharge minister Change news, Minister Anand Singh, Minister Anand Singh news, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬದಲಾವಣೆ, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬದಲಾವಣೆ ಸುದ್ದಿ, ಸಚಿವ ಆನಂದ ಸಿಂಗ್, ಸಚಿವ ಆನಂದ ಸಿಂಗ್ ಸುದ್ದಿ,](https://etvbharatimages.akamaized.net/etvbharat/prod-images/kn-01-bly-230221-general-meeting-news-ka10007_23022021224025_2302f_1614100225_308.jpg)
ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಬಳ್ಳಾರಿ ಜಿಲ್ಲಾ ಉಸ್ತುವಾರಿಯಿಂದ ಬದಲಾಯಿಸಿ ಸಮಾಜಕಲ್ಯಾಣ ಸಚಿವ ಶ್ರೀರಾಮುಲು ಅವರಿಗೆ ನೀಡಿದರೆ ಸ್ವತಃ ನಾನೇ ಸ್ವಾಗತಿಸುತ್ತೇನೆ. ಒಂದು ವೇಳೆ ಅವರು ಮತ್ತು ನನ್ನನ್ನು ಬಿಟ್ಟು ಬೇರೆಯವರನ್ನು ನಿಯೋಜಿಸದರೇ ಮುಖ್ಯಮಂತ್ರಿಗಳ ಬಳಿ ವಿಚಾರಿಸುತ್ತೇನೆ ಎಂದರು.
![Bellary district incharge minister, Bellary district incharge minister Change, Bellary district incharge minister Change news, Minister Anand Singh, Minister Anand Singh news, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬದಲಾವಣೆ, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬದಲಾವಣೆ ಸುದ್ದಿ, ಸಚಿವ ಆನಂದ ಸಿಂಗ್, ಸಚಿವ ಆನಂದ ಸಿಂಗ್ ಸುದ್ದಿ,](https://etvbharatimages.akamaized.net/etvbharat/prod-images/kn-01-bly-230221-general-meeting-news-ka10007_23022021224025_2302f_1614100225_111.jpg)
ಶಾಸಕ ಸೋಮಶೇಖರ್ ರೆಡ್ಡಿಗೆ ಸಚಿವ ಸ್ಥಾನ ನೀಡಿ ಜಿಲ್ಲಾ ಉಸ್ತುವಾರಿ ನೀಡಿದ್ರೂ ನನ್ನ ಅಭ್ಯಂತರವೇನಿಲ್ಲ ಎಂದರು.
ಹೊಸಪೇಟೆ-ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ 4 ವರ್ಷಗಳಿಂದ ನಿಧಾನಗತಿಯಲ್ಲಿ ಸಾಗಿದ್ದು, ಇತ್ತೀಚೆಗೆ ನಡೆದ ಸಭೆಯಲ್ಲಿ ಕೇಂದ್ರ ಸಚಿವ ನಿತೀನ್ ಗಡ್ಕರಿ ಅವರೊಂದಿಗೆ ಚರ್ಚಿಸಲಾಗಿತ್ತು. ಈ ವೇಳೆ ಅವರು ಮುಂದಿನ ಮಾರ್ಚ್ವೊಳಗೆ ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ ಎಂದರು.
![Bellary district incharge minister, Bellary district incharge minister Change, Bellary district incharge minister Change news, Minister Anand Singh, Minister Anand Singh news, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬದಲಾವಣೆ, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬದಲಾವಣೆ ಸುದ್ದಿ, ಸಚಿವ ಆನಂದ ಸಿಂಗ್, ಸಚಿವ ಆನಂದ ಸಿಂಗ್ ಸುದ್ದಿ,](https://etvbharatimages.akamaized.net/etvbharat/prod-images/kn-01-bly-230221-general-meeting-news-ka10007_23022021224025_2302f_1614100225_920.jpg)
ಸರಕಾರವು ಆಡಳಿತಾತ್ಮಕ ಕಾರಣಕ್ಕಾಗಿ ಜಿಲ್ಲೆಯನ್ನು ವಿಭಜಿಸಿ ಅಧಿಸೂಚನೆ ಹೊರಡಿಸಿ ಈ ನಿರ್ಧಾರ ಕೈಗೊಂಡಿದೆ. ನ್ಯಾಯಾಲಯದ ಎಕ್ಸೆಪ್ಟ್ ಮಾಡುವುದಿಲ್ಲ ಎಂಬ ಭರವಸೆಯನ್ನು ಅವರು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಂಸದ ದೇವೇಂದ್ರಪ್ಪ, ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ, ಜಿಪಂ ಸಿಇಒ ಕೆ.ಆರ್ ನಂದಿನಿ ಮತ್ತಿತರರು ಇದ್ದರು.