ETV Bharat / state

ಉಪಚುನಾವಣೆ ಗೆದ್ದರೆ ಡಿಕೆಶಿ ಸಿಎಂ ಆಗ್ತಾರಾ..?: ಸಚಿವ ಶ್ರೀರಾಮುಲು ವ್ಯಂಗ್ಯ

ಉಪಚುನಾವಣೆಯಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನ ಗೆಲ್ಲಿಸಿಕೊಂಡು ಬಂದ್ರೆ ಮುಂಬರುವ ದಿನಗಳಲ್ಲಿ ಡಿ.ಕೆ ಶಿವಕುಮಾರ್​ ಸಿಎಂ ಆಗುವ ಹಗಲು ಗನಸು ಕಾಣುತ್ತಿದ್ದಾರೆ. ಇಲ್ಲೇನೋ ಸಿಎಂ ಕುರ್ಚಿ ಖಾಲಿಯಿದೆ ಅಂದುಕೊಂಡಿದ್ದಾರೆ ಎಂದು ಸಚಿವ ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ.

author img

By

Published : Nov 2, 2020, 1:28 PM IST

Minister Shriramulu Press meet at Bellary
ಬಳ್ಳಾರಿಯಲ್ಲಿ ಸಚಿವ ಶ್ರೀರಾಮುಲು ಸುದ್ದಿಗೋಷ್ಠಿ

ಬಳ್ಳಾರಿ: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಸಿಎಂ ಆಗ್ತಾರಾ..? ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ.

ನಗರದ ಸಿರುಗುಪ್ಪ ರಸ್ತೆಯಲ್ಲಿರುವ ಅವಂಬಾವಿಯ ತಮ್ಮ ನಿವಾಸದಲ್ಲಿ ಮಾತನಾಡಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ಶಿರಾ ಮತ್ತು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನ ಗೆಲ್ಲಿಸಿಕೊಂಡು ಬಂದ್ರೆ ಮುಂಬರುವ ದಿನಗಳಲ್ಲಿ ಮುಖ್ಯಮಂತ್ರಿ ಆಗುವ ಹಗಲುಗನಸು ಕಾಣುತ್ತಿದ್ದಾರೆ. ಇಲ್ಲೇನೋ ಸಿಎಂ ಕುರ್ಚಿ ಖಾಲಿಯಿದೆ ಎಂದು ತಿಳಿದು ಕೊಂಡಿದ್ದಾರೆ. ಬಿ.ಎಸ್ ಯಡಿಯೂರಪ್ಪ ಈಗಾಗಲೇ ಆ ಕುರ್ಚಿಯನ್ನ ಅಲಂಕರಿಸಿದ್ದಾರೆ. ಅದನ್ನು ಅರಿತುಕೊಂಡು ಡಿ.ಕೆ ಶಿವಕುಮಾರ್​ ಮುನ್ನಡೆಯಬೇಕು ಎಂದರು.

ಸಚಿವ ಬಿ.ಶ್ರೀರಾಮುಲು

ಶಿರಾ ಮತ್ತು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯ ಅಭ್ಯರ್ಥಿಗಳೇ ಗೆಲ್ಲೋದು. ಚುನಾವಣಾ ಫಲಿತಾಂಶದವರೆಗೆ ಕಾದು ನೋಡಿ. ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವಿನ ಒಣ ಪ್ರತಿಷ್ಠೆಯಿಂದಲೇ ಈ ಎರಡು ಕ್ಷೇತ್ರಗಳು ಜಿದ್ದಾ ಜಿದ್ದಿನ ಕಣಗಳಾಗಿ ಮಾರ್ಪಟ್ಟಿವೆ. ಅವರಿಬ್ಬರ ನಡುವಿನ ಒಳ ಜಗಳ ನಮಗೆ ವರದಾನವಾಗಲಿದೆ ಎಂದು ಹೇಳಿದರು.

ವಿಜಯೇಂದ್ರ ಕೈ ಇಟ್ಟಲೆಲ್ಲಾ ಗೆಲುವು : ಸಿಎಂ ಬಿಎಸ್​​ವೈ ಅವರ ಪುತ್ರ ವಿಜಯೇಂದ್ರ ಕೈ ಇಟ್ಟಲೆಲ್ಲಾ ಬಿಜೆಪಿ ಗೆಲುವು ಖಚಿತವಾಗಿದೆ. ಅದರಂತೆಯೇ ಶಿರಾ ಹಾಗೂ ಆರ್​. ಆರ್​ ನಗರ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲುವು ಸಾಧಿಸಲಿದೆ. ವಿಜಯೇಂದ್ರ ಅವರಂತಹ ಯುವ ನಾಯಕರು ಪಕ್ಷದಲ್ಲಿ ಇನ್ನೂ ಎತ್ತರಕ್ಕೆ ಬೆಳೆಯ ಬೇಕು ಎಂದರು.

ಬಳ್ಳಾರಿ: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಸಿಎಂ ಆಗ್ತಾರಾ..? ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ.

ನಗರದ ಸಿರುಗುಪ್ಪ ರಸ್ತೆಯಲ್ಲಿರುವ ಅವಂಬಾವಿಯ ತಮ್ಮ ನಿವಾಸದಲ್ಲಿ ಮಾತನಾಡಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ಶಿರಾ ಮತ್ತು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನ ಗೆಲ್ಲಿಸಿಕೊಂಡು ಬಂದ್ರೆ ಮುಂಬರುವ ದಿನಗಳಲ್ಲಿ ಮುಖ್ಯಮಂತ್ರಿ ಆಗುವ ಹಗಲುಗನಸು ಕಾಣುತ್ತಿದ್ದಾರೆ. ಇಲ್ಲೇನೋ ಸಿಎಂ ಕುರ್ಚಿ ಖಾಲಿಯಿದೆ ಎಂದು ತಿಳಿದು ಕೊಂಡಿದ್ದಾರೆ. ಬಿ.ಎಸ್ ಯಡಿಯೂರಪ್ಪ ಈಗಾಗಲೇ ಆ ಕುರ್ಚಿಯನ್ನ ಅಲಂಕರಿಸಿದ್ದಾರೆ. ಅದನ್ನು ಅರಿತುಕೊಂಡು ಡಿ.ಕೆ ಶಿವಕುಮಾರ್​ ಮುನ್ನಡೆಯಬೇಕು ಎಂದರು.

ಸಚಿವ ಬಿ.ಶ್ರೀರಾಮುಲು

ಶಿರಾ ಮತ್ತು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯ ಅಭ್ಯರ್ಥಿಗಳೇ ಗೆಲ್ಲೋದು. ಚುನಾವಣಾ ಫಲಿತಾಂಶದವರೆಗೆ ಕಾದು ನೋಡಿ. ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವಿನ ಒಣ ಪ್ರತಿಷ್ಠೆಯಿಂದಲೇ ಈ ಎರಡು ಕ್ಷೇತ್ರಗಳು ಜಿದ್ದಾ ಜಿದ್ದಿನ ಕಣಗಳಾಗಿ ಮಾರ್ಪಟ್ಟಿವೆ. ಅವರಿಬ್ಬರ ನಡುವಿನ ಒಳ ಜಗಳ ನಮಗೆ ವರದಾನವಾಗಲಿದೆ ಎಂದು ಹೇಳಿದರು.

ವಿಜಯೇಂದ್ರ ಕೈ ಇಟ್ಟಲೆಲ್ಲಾ ಗೆಲುವು : ಸಿಎಂ ಬಿಎಸ್​​ವೈ ಅವರ ಪುತ್ರ ವಿಜಯೇಂದ್ರ ಕೈ ಇಟ್ಟಲೆಲ್ಲಾ ಬಿಜೆಪಿ ಗೆಲುವು ಖಚಿತವಾಗಿದೆ. ಅದರಂತೆಯೇ ಶಿರಾ ಹಾಗೂ ಆರ್​. ಆರ್​ ನಗರ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲುವು ಸಾಧಿಸಲಿದೆ. ವಿಜಯೇಂದ್ರ ಅವರಂತಹ ಯುವ ನಾಯಕರು ಪಕ್ಷದಲ್ಲಿ ಇನ್ನೂ ಎತ್ತರಕ್ಕೆ ಬೆಳೆಯ ಬೇಕು ಎಂದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.