ಬಳ್ಳಾರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಾಂಸ್ಕೃತಿಕ ಸಮುಚ್ಚಯದ ಆವರಣದಲ್ಲಿ ನವೀಕರಿಸಲಾದ ಉದ್ಯಾನವನ ಹಾಗೂ ಜನಪರ ಉತ್ಸವಕ್ಕೆ ಶಾಸಕ ಜಿ. ಸೋಮಶೇಖರ್ ರೆಡ್ಡಿ ಚಾಲನೆ ನೀಡಿದ್ದಾರೆ.
ಬಳಿಕ ಮಾತನಾಡಿದ ಅವರು, ಬಳ್ಳಾರಿ ನಗರದ ಉದ್ಯಾನವನಕ್ಕೆ ಶ್ರಮಿಸಿದ ಕೂಲಿ ಕಾರ್ಮಿಕರಿಂದ ಹಿಡಿದು ಅಧಿಕಾರಿ ವರ್ಗದವರಿಗೆಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.
ಕೊರೊನಾ ನಂತರ ಜಿಲ್ಲೆಯಲ್ಲಿ ನಡೆದ ಮೊದಲ ಕಾರ್ಯಕ್ರಮ ಇದಾಗಿದ್ದು, ವಿವಿಧ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದೆ.