ETV Bharat / state

ವಾರದೊಳಗೆ ನೆರೆಹಾವಳಿ ಹಾನಿ ಪರಿಹಾರ: ಸಂಸದ ದೇವೇಂದ್ರಪ್ಪ

author img

By

Published : Aug 15, 2019, 7:26 PM IST

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಬೆಳೆದ ಭತ್ತ, ಜೋಳ, ಹತ್ತಿ, ಮೆಣಸಿನಕಾಯಿ, ಕಬ್ಬು, ಬಾಳೆ ಇನ್ನಿತರ ಬೆಳೆಗಳು ಈ ನೆರೆಹವಾಳಿಯಿಂದ ನಾಶವಾಗಿದೆ ಎಂದರು.

ಸಂಸದ ವೈ.ದೇವೇಂದ್ರಪ್ಪ.

ಬಳ್ಳಾರಿ: ಗಣಿನಾಡಿನಲ್ಲಿನ ಹೂವಿನ ಹಡಗಲಿ, ಸಿರುಗುಪ್ಪ, ಕಂಪ್ಲಿ, ಹಗರಿಬೊಮ್ಮನಹಳ್ಳಿಯ ಪ್ರದೇಶಗಳಲ್ಲಿ ನೆರೆಹಾವಳಿಯಿಂದ ಅನೇಕ ಮನೆಗಳು ಸೇರಿದಂತೆ ಬೆಳೆಹಾನಿಯಾಗಿದ್ದು, ಇದಕ್ಕೆ ಸಂಭಂದಿಸಿದ ಅಧಿಕಾರಿಗಳ ತಂಡ ಸಮೀಕ್ಷೆ ನಡೆಸುತ್ತಿವೆ. ಸಮೀಕ್ಷೆ ಕಾರ್ಯ ಅಂತಿಮ ಹಂತದಲ್ಲಿದ್ದು, ವರದಿ ಬಂದು 1 ವಾರದೊಳಗೆ ಪರಿಹಾರವನ್ನು ನೀಡಲಾಗುತ್ತದೆ ಎಂದು ಬಳ್ಳಾರಿ ಸಂಸದ ವೈ.ದೇವೇಂದ್ರಪ್ಪ ತಿಳಿಸಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಬೆಳೆದ ಭತ್ತ, ಜೋಳ, ಹತ್ತಿ, ಮೆಣಸಿನಕಾಯಿ, ಕಬ್ಬು, ಬಾಳೆ ಇನ್ನಿತರ ಬೆಳೆಗಳು ನೆರೆ ಹಾವಳಿಯಿಂದ ನಾಶವಾಗಿವೆ. ಪ್ರಸ್ತುತ ತುಂಗಭದ್ರಾ ಜಲಾಶಯದ ಒಳಹರಿವಿನ ಪ್ರಮಾಣ ಕಡಿಮೆಯಾಗಿದ್ದು, ನೆರೆ ಬಾಧಿತ ಪ್ರದೇಶಗಳಿಗೆ ಶಾಸಕರು, ಸಂಸದರು, ಅಧಿಕಾರಿಗಳು ಬೇಟಿ ನೀಡಿ ಸಂತ್ರಸ್ತರಿಗೆ ಧೈರ್ಯ ಹೇಳುವ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ಸಂಸದ ವೈ.ದೇವೇಂದ್ರಪ್ಪ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಹ ನೆರೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಭೇಟಿ ನೀಡಿದ್ದಾರೆ. ಜೊತೆಗೆ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಮತ್ತು ಗೃಹ ಸಚಿವ ಅಮಿತ್ ಶಾ ಸಹ ಭೇಟಿ ನೀಡಿ ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಣೆ ಮಾಡಿ ಹೋಗಿದ್ದಾರೆ.

ಕಂಪ್ಲಿ-ಗಂಗಾವತಿ ಬ್ಯಾರೇಜ್ ಹೊಸದಾಗಿ ನಿರ್ಮಾಣ ಮಾಡುವ ಕುರಿತು ಸರ್ಕಾರದ ಗಮನಕ್ಕೆ ತರಲಾಗುತ್ತದೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಪರಿಹಾರ ದೊರೆಯುತ್ತದೆ ಎಂದು ವೈ.ದೇವೇಂದ್ರಪ್ಪ ತಿಳಿಸಿದರು.

ಬಳ್ಳಾರಿ: ಗಣಿನಾಡಿನಲ್ಲಿನ ಹೂವಿನ ಹಡಗಲಿ, ಸಿರುಗುಪ್ಪ, ಕಂಪ್ಲಿ, ಹಗರಿಬೊಮ್ಮನಹಳ್ಳಿಯ ಪ್ರದೇಶಗಳಲ್ಲಿ ನೆರೆಹಾವಳಿಯಿಂದ ಅನೇಕ ಮನೆಗಳು ಸೇರಿದಂತೆ ಬೆಳೆಹಾನಿಯಾಗಿದ್ದು, ಇದಕ್ಕೆ ಸಂಭಂದಿಸಿದ ಅಧಿಕಾರಿಗಳ ತಂಡ ಸಮೀಕ್ಷೆ ನಡೆಸುತ್ತಿವೆ. ಸಮೀಕ್ಷೆ ಕಾರ್ಯ ಅಂತಿಮ ಹಂತದಲ್ಲಿದ್ದು, ವರದಿ ಬಂದು 1 ವಾರದೊಳಗೆ ಪರಿಹಾರವನ್ನು ನೀಡಲಾಗುತ್ತದೆ ಎಂದು ಬಳ್ಳಾರಿ ಸಂಸದ ವೈ.ದೇವೇಂದ್ರಪ್ಪ ತಿಳಿಸಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಬೆಳೆದ ಭತ್ತ, ಜೋಳ, ಹತ್ತಿ, ಮೆಣಸಿನಕಾಯಿ, ಕಬ್ಬು, ಬಾಳೆ ಇನ್ನಿತರ ಬೆಳೆಗಳು ನೆರೆ ಹಾವಳಿಯಿಂದ ನಾಶವಾಗಿವೆ. ಪ್ರಸ್ತುತ ತುಂಗಭದ್ರಾ ಜಲಾಶಯದ ಒಳಹರಿವಿನ ಪ್ರಮಾಣ ಕಡಿಮೆಯಾಗಿದ್ದು, ನೆರೆ ಬಾಧಿತ ಪ್ರದೇಶಗಳಿಗೆ ಶಾಸಕರು, ಸಂಸದರು, ಅಧಿಕಾರಿಗಳು ಬೇಟಿ ನೀಡಿ ಸಂತ್ರಸ್ತರಿಗೆ ಧೈರ್ಯ ಹೇಳುವ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ಸಂಸದ ವೈ.ದೇವೇಂದ್ರಪ್ಪ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಹ ನೆರೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಭೇಟಿ ನೀಡಿದ್ದಾರೆ. ಜೊತೆಗೆ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಮತ್ತು ಗೃಹ ಸಚಿವ ಅಮಿತ್ ಶಾ ಸಹ ಭೇಟಿ ನೀಡಿ ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಣೆ ಮಾಡಿ ಹೋಗಿದ್ದಾರೆ.

ಕಂಪ್ಲಿ-ಗಂಗಾವತಿ ಬ್ಯಾರೇಜ್ ಹೊಸದಾಗಿ ನಿರ್ಮಾಣ ಮಾಡುವ ಕುರಿತು ಸರ್ಕಾರದ ಗಮನಕ್ಕೆ ತರಲಾಗುತ್ತದೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಪರಿಹಾರ ದೊರೆಯುತ್ತದೆ ಎಂದು ವೈ.ದೇವೇಂದ್ರಪ್ಪ ತಿಳಿಸಿದರು.

Intro:ಗಣಿನಾಡು ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿ, ಸಿರುಗುಪ್ಪ, ಕಂಪ್ಲಿ, ಹಗರಿಬೊಮ್ಮನಹಳ್ಳಿಯ ಪ್ರದೇಶಗಳಲ್ಲಿ ನೆರೆಹಾವಳಿಯಿಂದ ಅನೇಕ ಮನೆಗಳು, ಬೆಳೆಹಾನಿಯಾಗಿದ್ದು ಇದಕ್ಕೆ ಸಂಭಂದಿಸಿದಂತೆ ಅಧಿಕಾರಿಗಳು ತಂಡ ಸಮೀಕ್ಷೆ ನಡೆಸುತ್ತಿದ್ದಾರೆ, ಸಮೀಕ್ಷೆ ಕಾರ್ಯ ಅಂತಿಮ ಹಂತದಲ್ಲಿದೆ.‌ವರದಿ ಬಂದು ಒಂದುವಾರದೊಳಗೆ ಪರಿಹಾರವನ್ನು ನೀಡಲಾಗುತ್ತದೆ ಎಂದು ಬಳ್ಳಾರಿ ಸಂಸದ ವೈ.ದೇವೇಂದ್ರಪ್ಪ ತಿಳಿಸಿದರು.


Body:ನಗರದ ಜಿಲ್ಲಾ ಕ್ರೀಡಾಂಗಣ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರೈತರು ಬೆಳೆದ ಭಕ್ತ, ಜೋಳ, ಹತ್ತಿ, ಮೆಣಸಿನಕಾಯಿ, ಕಬ್ಬು, ಬಾಳೆ ಇನ್ನಿತರ ಬೆಳೆಗಳು ಈ ನೆರೆಹವಾಳಿಯಿಂದ ನಾಶವಾಗಿದೆ.

ಪ್ರಸ್ತುತ ತುಂಗಭದ್ರಾ ಜಲಾಶಯದ ಒಳ ಹರಿವಿನ ಪ್ರಮಾಣ ಕಡಿಮೆಯಾಗಿದೆ. ನೆರೆ ಬಾಧಿತ ಪ್ರದೇಶಗಳಿಗೆ ಶಾಸಕರು, ಸಂಸದರು, ಅಧಿಕಾರಿಗಳು ಬೇಟಿ ನೀಡಿ ಸಂತ್ರಸ್ತರಿಗೆ ಧೈರ್ಯ ಹೇಳುವ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸಹ ನೆರೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಭೇಟಿ ನೀಡಿದ್ದಾರೆ ಜೊತೆಗೆ ಕೇಂದ್ರದ ಹಣಕಾಸು ಸಚಿವೆ ನಿರ್ಮಲ ಸೀತಾರಾಮ್ ಮತ್ತು ಗೃಹಸಚಿವ ಅಮಿತ್ ಷಾ ಸಹ ಭೇಟಿ ನೀಡಿ ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಣೆ ಮಾಡಿ ಹೋಗಿದ್ದು.

ಕಂಪ್ಲಿ ಗಂಗಾವತಿ ಬ್ಯಾರೇಜ್ ಹೊಸದಾಗಿ ನಿರ್ಮಾಣ ಮಾಡುವುದಕ್ಕೆ ಸಂಬಂಧಿಸಿದಂತೆ ಸರ್ಜಾರದ ಗಮನಕ್ಕೆ ತರಲಾಗುತ್ತದೆ ಮತ್ತು ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಪರಿಹಾರ ದೊರೆಯುತ್ತದೆ ಎಂದು ವೈ.ದೇವೇಂದ್ರಪ್ಪ ತಿಳಿಸಿದರು.



Conclusion:ಒಟ್ಟಾರೆಯಾಗಿ ಗಣಿನಾಡಿನ ನೆರೆ ಸಂತ್ರಸ್ತರಿಗೆ ಆದಷ್ಟು ಬೇಗ ಪರಿಹಾರ ದೊರೆಯಲಿ ಎನ್ನುವುದು ನಮ್ಮ ಈಟಿವಿ ಭಾರತ ನ ಆಸೆಯ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.