ETV Bharat / state

ನಾಳೆ ವಿಎಸ್​ಕೆ ವಿವಿ 9ನೇ ಘಟಿಕೋತ್ಸವ : ಮೂವರಿಗೆ ಗೌರವ ಡಾಕ್ಟರೇಟ್​ - vijayanagara shri krishnadevaraya university ninth convocation

ಸ್ವಾತಂತ್ರ್ಯ ಹೋರಾಟ, ಶಿಕ್ಷಣ, ಸಾಮಾಜಿಕ ಸೇವೆ ಪರಿಗಣಿಸಿ ವೀರಶೈವ ಮಹಾಸಭಾದ ರಾಜ್ಯಾಧ್ಯಕ್ಷರಾದ ಎನ್. ತಿಪ್ಪಣ್ಣ ಅವರಿಗೆ ಡಾಕ್ಟರೇಟ್ ನೀಡಲಾಗುತ್ತಿದೆ. ಹಿರೇಮಗಳೂರು ಕಣ್ಣನ್ ಅವರಿಗೆ ಕನ್ನಡ ಭಾಷಾ ಪ್ರಾವೀಣ್ಯತೆ, ದೂರದರ್ಶನ ಕಾರ್ಯಕ್ರಮಗಳ ನಿರೂಪಣೆಗಾಗಿ ಡಾಕ್ಟರೇಟ್​ ನೀಡಲಾಗುತ್ತಿದೆ. ಸುಸ್ಥಿರ ಅಭಿವೃದ್ಧಿ ಮತ್ತು ಉದ್ಯಮ ಕ್ಷೇತ್ರದಲ್ಲಿನ ಸಾಧನೆಗೆ ನರೇಂದ್ರ ಕುಮಾರ್ ಬಲ್ಡೋಟ ಅವರಿಗೆ ಡಾಕ್ಟರೇಟ್​ ಪ್ರದಾನ ಮಾಡಲಾಗುವುದು..

ಹಿರೇಮಗಳೂರು ಕಣ್ಣನ್
ಹಿರೇಮಗಳೂರು ಕಣ್ಣನ್
author img

By

Published : Apr 11, 2022, 5:04 PM IST

ಬಳ್ಳಾರಿ : ನಾಳೆ (ಮಂಗಳವಾರ) ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವ ನಡೆಯಲಿದೆ. ಈ ಬಾರಿ ವಿಎಸ್​ಕೆ ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್ ನೀಡಲಾಗುವುದು ಎಂದು ವಿಎಸ್​ಕೆ ವಿವಿ ಉಪಕುಲಪತಿ ಸಿದ್ದು ಪಿ. ಅಲಗೂರು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ವಿಎಸ್​ಕೆ ವಿವಿ ಉಪಕುಲಪತಿ ಸಿದ್ದು ಪಿ. ಅಲಗೂರು ಮಾತನಾಡಿರುವುದು..

ಈ ಕುರಿತು ಮಾತನಾಡಿದ ಅವರು, ನಾಳೆ ನಡೆಯುವ ಘಟಿಕೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಥಾವರ್​ಚಂದ್ ಗೆಹ್ಲೋಟ್ ಅವರು ವಹಿಸಿಕೊಳ್ಳಲಿದ್ದಾರೆ. ಘಟಿಕೋತ್ಸವದ ಭಾಷಣವನ್ನು ಕುರುಕ್ಷೇತ್ರದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಕೈಲಾಶ್ ಚಂದ್ರ ಶರ್ಮಾ ಅವರು ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವರಾದ ಅಶ್ವತ್ಥ್​ ನಾರಾಯಣ ಅವರು ಭಾಗವಹಿಸಲಿದ್ದಾರೆ ಎಂದರು.

ಸ್ವಾತಂತ್ರ್ಯ ಹೋರಾಟ, ಶಿಕ್ಷಣ, ಸಾಮಾಜಿಕ ಸೇವೆ ಪರಿಗಣಿಸಿ ವೀರಶೈವ ಮಹಾಸಭಾದ ರಾಜ್ಯಾಧ್ಯಕ್ಷರಾದ ಎನ್. ತಿಪ್ಪಣ್ಣ ಅವರಿಗೆ ಡಾಕ್ಟರೇಟ್ ನೀಡಲಾಗುತ್ತಿದೆ. ಹಿರೇಮಗಳೂರು ಕಣ್ಣನ್ ಅವರಿಗೆ ಕನ್ನಡ ಭಾಷಾ ಪ್ರಾವೀಣ್ಯತೆ, ದೂರದರ್ಶನ ಕಾರ್ಯಕ್ರಮಗಳ ನಿರೂಪಣೆಗಾಗಿ ಡಾಕ್ಟರೇಟ್​ ನೀಡಲಾಗುತ್ತಿದೆ. ಸುಸ್ಥಿರ ಅಭಿವೃದ್ಧಿ ಮತ್ತು ಉದ್ಯಮ ಕ್ಷೇತ್ರದಲ್ಲಿನ ಸಾಧನೆಗೆ ನರೇಂದ್ರ ಕುಮಾರ್ ಬಲ್ಡೋಟ ಅವರಿಗೆ ಡಾಕ್ಟರೇಟ್​ ಹಾಗೂ 42 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ 26 ಸಂಶೋಧನಾರ್ಥಿಗಳಿಗೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು ಎಂದರು.

ಓದಿ: ವಾಹನ ಅಪಘಾತ : ಸಂಸದ ಸಂಗಣ್ಣ ಕರಡಿ ಸಹೋದರ ಸ್ಥಳದಲ್ಲಿಯೇ ಸಾವು

ಬಳ್ಳಾರಿ : ನಾಳೆ (ಮಂಗಳವಾರ) ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವ ನಡೆಯಲಿದೆ. ಈ ಬಾರಿ ವಿಎಸ್​ಕೆ ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್ ನೀಡಲಾಗುವುದು ಎಂದು ವಿಎಸ್​ಕೆ ವಿವಿ ಉಪಕುಲಪತಿ ಸಿದ್ದು ಪಿ. ಅಲಗೂರು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ವಿಎಸ್​ಕೆ ವಿವಿ ಉಪಕುಲಪತಿ ಸಿದ್ದು ಪಿ. ಅಲಗೂರು ಮಾತನಾಡಿರುವುದು..

ಈ ಕುರಿತು ಮಾತನಾಡಿದ ಅವರು, ನಾಳೆ ನಡೆಯುವ ಘಟಿಕೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಥಾವರ್​ಚಂದ್ ಗೆಹ್ಲೋಟ್ ಅವರು ವಹಿಸಿಕೊಳ್ಳಲಿದ್ದಾರೆ. ಘಟಿಕೋತ್ಸವದ ಭಾಷಣವನ್ನು ಕುರುಕ್ಷೇತ್ರದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಕೈಲಾಶ್ ಚಂದ್ರ ಶರ್ಮಾ ಅವರು ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವರಾದ ಅಶ್ವತ್ಥ್​ ನಾರಾಯಣ ಅವರು ಭಾಗವಹಿಸಲಿದ್ದಾರೆ ಎಂದರು.

ಸ್ವಾತಂತ್ರ್ಯ ಹೋರಾಟ, ಶಿಕ್ಷಣ, ಸಾಮಾಜಿಕ ಸೇವೆ ಪರಿಗಣಿಸಿ ವೀರಶೈವ ಮಹಾಸಭಾದ ರಾಜ್ಯಾಧ್ಯಕ್ಷರಾದ ಎನ್. ತಿಪ್ಪಣ್ಣ ಅವರಿಗೆ ಡಾಕ್ಟರೇಟ್ ನೀಡಲಾಗುತ್ತಿದೆ. ಹಿರೇಮಗಳೂರು ಕಣ್ಣನ್ ಅವರಿಗೆ ಕನ್ನಡ ಭಾಷಾ ಪ್ರಾವೀಣ್ಯತೆ, ದೂರದರ್ಶನ ಕಾರ್ಯಕ್ರಮಗಳ ನಿರೂಪಣೆಗಾಗಿ ಡಾಕ್ಟರೇಟ್​ ನೀಡಲಾಗುತ್ತಿದೆ. ಸುಸ್ಥಿರ ಅಭಿವೃದ್ಧಿ ಮತ್ತು ಉದ್ಯಮ ಕ್ಷೇತ್ರದಲ್ಲಿನ ಸಾಧನೆಗೆ ನರೇಂದ್ರ ಕುಮಾರ್ ಬಲ್ಡೋಟ ಅವರಿಗೆ ಡಾಕ್ಟರೇಟ್​ ಹಾಗೂ 42 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ 26 ಸಂಶೋಧನಾರ್ಥಿಗಳಿಗೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು ಎಂದರು.

ಓದಿ: ವಾಹನ ಅಪಘಾತ : ಸಂಸದ ಸಂಗಣ್ಣ ಕರಡಿ ಸಹೋದರ ಸ್ಥಳದಲ್ಲಿಯೇ ಸಾವು

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.