ETV Bharat / state

ಬಳ್ಳಾರಿ ವಿಮ್ಸ್​ನಲ್ಲಿ ರೋಗಿಗಳ ಸಾವು ಪ್ರಕರಣ: ಅಧೀಕ್ಷಕ ಸೇರಿ ಐವರಿಗೆ ನೋಟಿಸ್ ಜಾರಿ

author img

By

Published : Sep 16, 2022, 11:38 AM IST

Updated : Sep 16, 2022, 1:10 PM IST

ವಿಮ್ಸ್​ನಲ್ಲಿ ರೋಗಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಧೀಕ್ಷಕ ಸೇರಿ ಐವರಿಗೆ ಕಾರಣ ಕೇಳಿ ನೋಟಿಸ್ ಜಾರಿ ನೀಡಲಾಗಿದೆ.

notice issued to fiver members  Vims patients death case  notice issued over Vims patients death case  ವಿಮ್ಸ್​ನಲ್ಲಿ ರೋಗಿಗಳ ಸಾವು ಪ್ರಕರಣ  ಅಧೀಕ್ಷಕ ಸೇರಿ ಐವರಿಗೆ ಕಾರಣ ಕೇಳಿ ನೋಟಿಸ್  ವಿಮ್ಸ್ ದುರಂತದಲ್ಲಿ ರೋಗಿಗಳು ಸಾವು ಪ್ರಕರಣ  ಐವರಿಗೆ ಕಾರಣ ಕೇಳಿ ನೋಟಿಸ್ ಜಾರಿ  ವಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕ
ವಿಮ್ಸ್​ನಲ್ಲಿ ರೋಗಿಗಳ ಸಾವು ಪ್ರಕರಣ

ಬಳ್ಳಾರಿ: ವಿಮ್ಸ್ ದುರಂತದಲ್ಲಿ ರೋಗಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಮ್ಸ್ ಅಧೀಕ್ಷಕ ಸೇರಿ ಐವರಿಗೆ ಕಾರಣ ಕೇಳಿ ನೋಟಿಸ್ ಕೊಡಲಾಗಿದೆ. ಬುಧವಾರ ವಿದ್ಯುತ್ ಕಡಿತ, ಜನರೇಟರ್ ದೋಷ ಹಾಗು ವೆಂಟಿಲೇಟರ್‌ಗಳಿಗೆ ಬ್ಯಾಟರಿ ಬಲವಿಲ್ಲದೆ ಸಂಭವಿಸಿದೆ ಎನ್ನಲಾದ ಸಾವುಗಳಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂಬ ಶಂಕೆ ವ್ಯಕ್ತಪಡಿಸಲಾಗಿದೆ.

ದುರ್ಘಟನೆಯ ಕುರಿತು ವಿಚಾರಣೆ ನಡೆಸಲು ರಾಜ್ಯ ಸರ್ಕಾರ ಸಮಿತಿ ರಚಿಸಿದ್ದು, ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಎಲ್​.ಜನಾರ್ದನ್​ರಿಂದ ವರದಿ ತರಿಸಿಕೊಂಡಿದ್ದಾರೆ. ಬಳಿಕ ಸ್ಥಾನಿಕ ವೈದ್ಯಾಧಿಕಾರಿ, ವೈದ್ಯಕೀಯ ಸೂಪರಿಂಟೆಂಡೆಂಟ್, ತೀವ್ರ ನಿಗಾ ಘಟಕದಲ್ಲಿ ಕರ್ತವ್ಯನಿರತರಾಗಿದ್ದ ವೈದ್ಯರು ಮತ್ತು ನರ್ಸಿಂಗ್ ಸೂಪರಿಂಟೆಂಡೆಂಟ್‌ಗೆ ನೋಟಿಸ್ ಜಾರಿಗೊಳಿಸಲಾಗಿದೆ.

ಬೆಂಗಳೂರಿನ ಬಿಎಂಎಸಿಆರ್‌ಐ ಪ್ಲಾಸ್ಟಿಕ್ ಸರ್ಜರಿ ವಿಭಾಗದ ಪ್ರಾಧ್ಯಾಪಕಿ ಡಾ.ಸ್ಮಿತಾ ಅವರ ನೇತೃತ್ವದ ಸಮಿತಿ ರಚಿಸಲಾಗಿದೆ. ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ಜಂಟಿ ನಿರ್ದೇಶಕ ಡಾ. ಸಿದ್ದಿಕಿ ಮಹ್ಮದ್, ಬಿಎಂಸಿಯ ಮೆಡಿಸಿನ್ ವಿಭಾಗದ ಅಧ್ಯಾಪಕ ಡಾ.ದಿವಾಕರ್, ಆರೋಗ್ಯ ಇಲಾಖೆಯ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಅಭಿಯಂತರ ಯೋಗೀಶ್ ಸೇರಿದಂತೆ ಹತ್ತು ಮಂದಿ ತಜ್ಞರು ಇಂದು ವಿಮ್ಸ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಇದನ್ನೂ ಓದಿ: ಬಳ್ಳಾರಿ: ವಿಮ್ಸ್​ ತೀವ್ರ ನಿಗಾ ಘಟಕದಲ್ಲಿದ್ದ 8 ವರ್ಷದ ಬಾಲಕ ಸಾವು

ಬಳ್ಳಾರಿ: ವಿಮ್ಸ್ ದುರಂತದಲ್ಲಿ ರೋಗಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಮ್ಸ್ ಅಧೀಕ್ಷಕ ಸೇರಿ ಐವರಿಗೆ ಕಾರಣ ಕೇಳಿ ನೋಟಿಸ್ ಕೊಡಲಾಗಿದೆ. ಬುಧವಾರ ವಿದ್ಯುತ್ ಕಡಿತ, ಜನರೇಟರ್ ದೋಷ ಹಾಗು ವೆಂಟಿಲೇಟರ್‌ಗಳಿಗೆ ಬ್ಯಾಟರಿ ಬಲವಿಲ್ಲದೆ ಸಂಭವಿಸಿದೆ ಎನ್ನಲಾದ ಸಾವುಗಳಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂಬ ಶಂಕೆ ವ್ಯಕ್ತಪಡಿಸಲಾಗಿದೆ.

ದುರ್ಘಟನೆಯ ಕುರಿತು ವಿಚಾರಣೆ ನಡೆಸಲು ರಾಜ್ಯ ಸರ್ಕಾರ ಸಮಿತಿ ರಚಿಸಿದ್ದು, ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಎಲ್​.ಜನಾರ್ದನ್​ರಿಂದ ವರದಿ ತರಿಸಿಕೊಂಡಿದ್ದಾರೆ. ಬಳಿಕ ಸ್ಥಾನಿಕ ವೈದ್ಯಾಧಿಕಾರಿ, ವೈದ್ಯಕೀಯ ಸೂಪರಿಂಟೆಂಡೆಂಟ್, ತೀವ್ರ ನಿಗಾ ಘಟಕದಲ್ಲಿ ಕರ್ತವ್ಯನಿರತರಾಗಿದ್ದ ವೈದ್ಯರು ಮತ್ತು ನರ್ಸಿಂಗ್ ಸೂಪರಿಂಟೆಂಡೆಂಟ್‌ಗೆ ನೋಟಿಸ್ ಜಾರಿಗೊಳಿಸಲಾಗಿದೆ.

ಬೆಂಗಳೂರಿನ ಬಿಎಂಎಸಿಆರ್‌ಐ ಪ್ಲಾಸ್ಟಿಕ್ ಸರ್ಜರಿ ವಿಭಾಗದ ಪ್ರಾಧ್ಯಾಪಕಿ ಡಾ.ಸ್ಮಿತಾ ಅವರ ನೇತೃತ್ವದ ಸಮಿತಿ ರಚಿಸಲಾಗಿದೆ. ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ಜಂಟಿ ನಿರ್ದೇಶಕ ಡಾ. ಸಿದ್ದಿಕಿ ಮಹ್ಮದ್, ಬಿಎಂಸಿಯ ಮೆಡಿಸಿನ್ ವಿಭಾಗದ ಅಧ್ಯಾಪಕ ಡಾ.ದಿವಾಕರ್, ಆರೋಗ್ಯ ಇಲಾಖೆಯ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಅಭಿಯಂತರ ಯೋಗೀಶ್ ಸೇರಿದಂತೆ ಹತ್ತು ಮಂದಿ ತಜ್ಞರು ಇಂದು ವಿಮ್ಸ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಇದನ್ನೂ ಓದಿ: ಬಳ್ಳಾರಿ: ವಿಮ್ಸ್​ ತೀವ್ರ ನಿಗಾ ಘಟಕದಲ್ಲಿದ್ದ 8 ವರ್ಷದ ಬಾಲಕ ಸಾವು

Last Updated : Sep 16, 2022, 1:10 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.