ETV Bharat / state

'ಸಕಾಲ ಸೇವೆ ವಿಲೇವಾರಿ ವಿಳಂಬಿಸಿದ್ರೆ ಅಧಿಕಾರಿಗಳಿಗೆ ಆನ್‌ಲೈನ್‌ನಲ್ಲೇ ನೋಟಿಸ್'

ಸಕಾಲ ಸೇವೆ ವಿಳಂಬಿಸಿದ್ದಕ್ಕೆ ಕಾರಣ ಕೇಳಿ ನೋಟಿಸ್ ನೀಡಲಾದ ಸಂಬಂಧಪಟ್ಟ ಅಧಿಕಾರಿ ಆನ್‍ಲೈನ್ ಮುಖಾಂತರ ಸಕ್ಷಮ ಪ್ರಾಧಿಕಾರಕ್ಕೆ ಉತ್ತರ ಸಲ್ಲಿಸಬೇಕು ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ ತಿಳಿಸಿದ್ದಾರೆ

author img

By

Published : Sep 7, 2019, 9:52 AM IST

ಸೇವೆ ವಿಲೇವಾರಿ ವಿಳಂಬ ಮಾಡಿದ್ರೆ ನೋಟಿಸ್ ಜಾರಿ

ಬಳ್ಳಾರಿ : 'ಸಕಾಲ' ಅಧಿನಿಯಮದಡಿ ಸೇವೆಗಳನ್ನು ವಿಳಂಬ ಮಾಡುವ ಅಧಿಕಾರಿಗಳಿಗೆ ಈ ತಂತ್ರಾಂಶದ ಮುಖೇನವೇ ಆನ್‍ಲೈನ್‌ನಲ್ಲಿ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗುತ್ತದೆ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಕಾಲ ಯೋಜನೆ ಅಡಿ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸೇವೆ ವಿಳಂಬ ವಿಲೇವಾರಿ ಮಾಡಿದ್ದಕ್ಕೆ ನೀಡಲಾದ ಕಾರಣ ಕೇಳಿ ನೋಟಿಸ್ ಜಾರಿಯಾದ ಅಧಿಕಾರಿಯೂ ಕೂಡ ಆನ್‍ಲೈನ್ ಮುಖಾಂತರ ಸಕ್ಷಮ ಪ್ರಾಧಿಕಾರಕ್ಕೆ ಉತ್ತರ ಸಲ್ಲಿಸಬೇಕು ಎಂದು ಎಚ್ಚರಿಸಿದ್ರು.

ಸಕಾಲದಲ್ಲಿ ಸೇವೆ ಒದಗಿಸುವ ನಿಟ್ಟಿನಲ್ಲಿ ಸಿಬ್ಬಂದಿಯನ್ನು ಸಜ್ಜುಗೊಳಿಸಬೇಕಿದೆ. ನಿಗದಿಪಡಿಸಿದ ಅವಧಿಯೊಳಗೆ ಸೇವೆ ಒದಗಿಸದಿದ್ದಲ್ಲಿ ಸಮಸ್ಯೆಯಾಗುತ್ತದೆ. ಅದನ್ನು ಅಧಿಕಾರಿಯ ಎಚ್‍ಆರ್‌ಎಂಎಸ್‍ನೊಂದಿಗೆ ಅಟ್ಯಾಚ್ ಮಾಡಲಾಗುತ್ತಿದ್ದು, ಬಡ್ತಿ ಸಂದರ್ಭದಲ್ಲಿಯೂ ಅಡೆತಡೆ ಉಂಟಾಗುತ್ತದೆ ಎಂದರು.

ಇಡೀ ದೇಶದಲ್ಲಿಯೇ ಅತ್ಯಂತ ಮಾದರಿಯಾಗಿರುವ ಈ ಸೇವೆಯನ್ನು ಬಾಂಗ್ಲಾದೇಶ ಕೂಡ ಅಳವಡಿಸಿಕೊಂಡಿದೆ. ಆರಂಭದಲ್ಲಿ 278 ಸೇವೆಗಳಿದ್ದು, ಈಗ 1091 ಸೇವೆಗಳು ಈ ಸಕಾಲದಡಿ ಲಭ್ಯವಿವೆ. ಈ ಮುಂಚೆ ಮ್ಯಾನ್ಯುವಲ್‌ ಆಗಿದ್ದ ಸೇವೆಗಳು ಈಗ ಆನ್‍ಲೈನ್ (ಸೇವಾಸಿಂಧು) ಮೂಲಕ ಲಭ್ಯವಿವೆ ಎಂದು ತಿಳಿಸಿದ್ರು.

ಸಕಾಲ ನಾಮಫಲಕ ಎಲ್ಲಾ ಕಚೇರಿಗಳಲ್ಲೂ ಅಳವಡಿಸಿ:

ಜಿಲ್ಲೆಯಲ್ಲಿರುವ ವಿವಿಧ ಇಲಾಖೆಗಳು ಸಕಾಲದಡಿ ಒದಗಿಸುತ್ತಿರುವ ಸೇವೆಗಳನ್ನು ನಾಮಫಲಕದಲ್ಲಿ ಬರೆದು ಮತ್ತು ಅದರೊಂದಿಗೆ ಸಹಾಯವಾಣಿ ಸಂಖ್ಯೆ ಕಡ್ಡಾಯವಾಗಿ ನಮೂದಿಸಬೇಕು ಎಂದು ತಹಸೀಲ್ದಾರ್ ವಿಶ್ವಜೀತ್ ಮೆಹತಾ ಸೂಚನೆ ನೀಡಿದರು.

ಬಳ್ಳಾರಿ : 'ಸಕಾಲ' ಅಧಿನಿಯಮದಡಿ ಸೇವೆಗಳನ್ನು ವಿಳಂಬ ಮಾಡುವ ಅಧಿಕಾರಿಗಳಿಗೆ ಈ ತಂತ್ರಾಂಶದ ಮುಖೇನವೇ ಆನ್‍ಲೈನ್‌ನಲ್ಲಿ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗುತ್ತದೆ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಕಾಲ ಯೋಜನೆ ಅಡಿ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸೇವೆ ವಿಳಂಬ ವಿಲೇವಾರಿ ಮಾಡಿದ್ದಕ್ಕೆ ನೀಡಲಾದ ಕಾರಣ ಕೇಳಿ ನೋಟಿಸ್ ಜಾರಿಯಾದ ಅಧಿಕಾರಿಯೂ ಕೂಡ ಆನ್‍ಲೈನ್ ಮುಖಾಂತರ ಸಕ್ಷಮ ಪ್ರಾಧಿಕಾರಕ್ಕೆ ಉತ್ತರ ಸಲ್ಲಿಸಬೇಕು ಎಂದು ಎಚ್ಚರಿಸಿದ್ರು.

ಸಕಾಲದಲ್ಲಿ ಸೇವೆ ಒದಗಿಸುವ ನಿಟ್ಟಿನಲ್ಲಿ ಸಿಬ್ಬಂದಿಯನ್ನು ಸಜ್ಜುಗೊಳಿಸಬೇಕಿದೆ. ನಿಗದಿಪಡಿಸಿದ ಅವಧಿಯೊಳಗೆ ಸೇವೆ ಒದಗಿಸದಿದ್ದಲ್ಲಿ ಸಮಸ್ಯೆಯಾಗುತ್ತದೆ. ಅದನ್ನು ಅಧಿಕಾರಿಯ ಎಚ್‍ಆರ್‌ಎಂಎಸ್‍ನೊಂದಿಗೆ ಅಟ್ಯಾಚ್ ಮಾಡಲಾಗುತ್ತಿದ್ದು, ಬಡ್ತಿ ಸಂದರ್ಭದಲ್ಲಿಯೂ ಅಡೆತಡೆ ಉಂಟಾಗುತ್ತದೆ ಎಂದರು.

ಇಡೀ ದೇಶದಲ್ಲಿಯೇ ಅತ್ಯಂತ ಮಾದರಿಯಾಗಿರುವ ಈ ಸೇವೆಯನ್ನು ಬಾಂಗ್ಲಾದೇಶ ಕೂಡ ಅಳವಡಿಸಿಕೊಂಡಿದೆ. ಆರಂಭದಲ್ಲಿ 278 ಸೇವೆಗಳಿದ್ದು, ಈಗ 1091 ಸೇವೆಗಳು ಈ ಸಕಾಲದಡಿ ಲಭ್ಯವಿವೆ. ಈ ಮುಂಚೆ ಮ್ಯಾನ್ಯುವಲ್‌ ಆಗಿದ್ದ ಸೇವೆಗಳು ಈಗ ಆನ್‍ಲೈನ್ (ಸೇವಾಸಿಂಧು) ಮೂಲಕ ಲಭ್ಯವಿವೆ ಎಂದು ತಿಳಿಸಿದ್ರು.

ಸಕಾಲ ನಾಮಫಲಕ ಎಲ್ಲಾ ಕಚೇರಿಗಳಲ್ಲೂ ಅಳವಡಿಸಿ:

ಜಿಲ್ಲೆಯಲ್ಲಿರುವ ವಿವಿಧ ಇಲಾಖೆಗಳು ಸಕಾಲದಡಿ ಒದಗಿಸುತ್ತಿರುವ ಸೇವೆಗಳನ್ನು ನಾಮಫಲಕದಲ್ಲಿ ಬರೆದು ಮತ್ತು ಅದರೊಂದಿಗೆ ಸಹಾಯವಾಣಿ ಸಂಖ್ಯೆ ಕಡ್ಡಾಯವಾಗಿ ನಮೂದಿಸಬೇಕು ಎಂದು ತಹಸೀಲ್ದಾರ್ ವಿಶ್ವಜೀತ್ ಮೆಹತಾ ಸೂಚನೆ ನೀಡಿದರು.

Intro:ಸಕಾಲ ಯೋಜನೆ ಅಡಿ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ತರಬೇತಿ
ಸೇವೆ ವಿಳಂಬ ಮಾಡಿ ವಿಲೇ ಮಾಡಿದ್ರೆ ನೋಟಿಸ್ ಜಾರಿ: ರಮೇಶ.

ಸಕಾಲ ಅಧಿನಿಯಮದಡಿ ಸೇವೆಗಳನ್ನು ವಿಳಂಬ ಮಾಡಿ ವಿಲೇವಾರಿ ಮಾಡುವ ಅಧಿಕಾರಿಗಳಿಗೆ ಸಕಾಲ ತಂತ್ರಾಂಶದ ಮುಖಾಂತರ ಆನ್‍ಲೈನ್ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗುತ್ತದೆ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ ತಿಳಿಸಿದರು.

Body:ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಕಾಲ ಯೋಜನೆ ಅಡಿ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಶುಕ್ರವಾರ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಸೇವೆ ವಿಳಂಬ ವಿಲೇವಾರಿ ಮಾಡಿದ್ದಕ್ಕೆ ನೀಡಲಾದ ಕಾರಣ ಕೇಳಿ ನೋಟಿಸ್ ಜಾರಿಯಾದ ಅಧಿಕಾರಿಯೂ ಕೂಡ ಆನ್‍ಲೈನ್ ಮುಖಾಂತರ ಸಕ್ಷಮ ಪ್ರಾಧಿಕಾರಕ್ಕೆ ಉತ್ತರ ಸಲ್ಲಿಸಬೇಕು ಎಂಬುದನ್ನು ವಿವರಿಸಿದ ಅವರು ಈ ತರಬೇತಿಯಲ್ಲಿ ನೀಡಲಾಗುವ ಪ್ರಾತ್ಯಕ್ಷಿಕೆಯನ್ನು ಗಮನದಲ್ಲಿಟ್ಟುಕೊಂಡು ಆಲಿಸಿ ಅದರಂತೆ ಕ್ರಮವಹಿಸಿ ಎಂದು ಅವರು ಸಲಹೆ ನೀಡಿದರು.

ಸಕಾಲದಲ್ಲಿ ಸೇವೆ ಒದಗಿಸುವ ನಿಟ್ಟಿನಲ್ಲಿ ಸಿಬ್ಬಂದಿಯನ್ನು ಸಜ್ಜುಗೊಳಿಸಬೇಕಿದೆ. ನಿಗದಿಪಡಿಸಿದ ಅವಧಿಯೊಳಗೆ ಸೇವೆ ಒದಗಿಸದಿದ್ದಲ್ಲಿ ಯಾವ ರೀತಿ ಸಮಸ್ಯೆಯಾಗುತ್ತದೆ. ಅದನ್ನು ಅಧಿಕಾರಿಯ ಎಚ್‍ಆರ್‍ಎಂಎಸ್‍ನೊಂದಿಗೆ ಅಟ್ಯಾಚ್ ಮಾಡಲಾಗುತ್ತಿದ್ದು, ಬಡ್ತಿ ಸಂದರ್ಭದಲ್ಲಿಯೂ ಸಮಸ್ಯೆ ಉಂಟಾಗುತ್ತದೆ ಎಂಬುದನ್ನು ವಿವರಿಸಿದರು.

ಇಡೀ ದೇಶದಲ್ಲಿಯೇ ಅತ್ಯಂತ ಮಾದರಿಯಾಗಿರುವ ಈ ಸಕಾಲ ಸೇವೆಯನ್ನು ಬಾಂಗ್ಲಾದೇಶ ಕೂಡ ಅಳವಡಿಸಿಕೊಂಡಿದೆ. ಆರಂಭದಲ್ಲಿ 278 ಸೇವೆಗಳಿದ್ದವು ಈಗ 1091 ಸೇವೆಗಳು ಈ ಸಕಾಲದಡಿ ಲಭ್ಯವಿವೆ. ಈ ಮುಂಚೆ ಮ್ಯಾನ್ಯುಯಲ್ ಆಗಿದ್ದ ಸೇವೆಗಳು ಈಗ ಆನ್‍ಲೈನ್ (ಸೇವಾಸಿಂಧು) ಮೂಲಕ ಲಭ್ಯವಿವೆ ಎಂದರು.

ಸಕಾಲ ನಾಮಫಲಕ ಎಲ್ಲ ಕಚೇರಿಗಳಲ್ಲಿ ಅಳವಡಿಸಿ:

ಜಿಲ್ಲೆಯಲ್ಲಿರುವ ವಿವಿಧ ಇಲಾಖೆಗಳು ತಮ್ಮ ಇಲಾಖೆಯು ಸಕಾಲ ಸೇವೆ ಅಡಿ ಒದಗಿಸುತ್ತಿರುವ ಸೇವೆಗಳನ್ನು ನಾಮಫಲಕದಲ್ಲಿ ಬರೆದು ಮತ್ತು ಅದರೊಂದಿಗೆ ಸಹಾಯವಾಣಿ ಸಂಖ್ಯೆ ಕೆಳಗಡೆ ನಮೂದಿಸಿ ಕಡ್ಡಾಯವಾಗಿ ಅಳವಡಿಸುವ ಕೆಲಸ ಮಾಡಿ ಎಂದು ಜಿಲ್ಲಾಧಿಕಾರಿ ಕಚೇರಿಯ ತಹಸೀಲ್ದಾರ್ ವಿಶ್ವಜೀತ್ ಮೆಹತಾ ಅವರು ಸೂಚನೆ ನೀಡಿದರು.
ನಾಮಫಲಕದಲ್ಲಿ ಸಕಾಲ ಸೇವೆಗೆ ಸಂಬಂಧಿಸಿದಂತೆ ಲೋಗೋ ಮಾದರಿ ನೀಡಲಾಗಿದ್ದು,ಅದನ್ನು ಬಳಸಿಕೊಂಡು ಕಡ್ಡಾಯವಾಗಿ ಅಳವಡಿಸಬೇಕು ಎಂದು ಹೇಳಿದರು.
Conclusion:ಸಕಾಲದಲ್ಲಿ ಬಂದ ಅರ್ಜಿಗಳನ್ನು ಪಡೆದು ಕಡ್ಡಾಯವಾಗಿ ಸ್ವೀಕೃತಿ ನೀಡಿ ಎಂದು ಹೇಳಿದ ಅವರು, ಜಿಲ್ಲೆಯಲ್ಲಿ ಸರಿಯಾದ ಸಮಯಕ್ಕೆ ಸೇವೆ ಒದಗಿಸಿದ ಕಾರಣ 91 ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಪ್ರಶಂಸಾ ಪತ್ರ ನೀಡಿದ್ದಾರೆ ಎಂದರು.
ಜಿಲ್ಲಾ ಸಕಾಲ ಮಾಹಿತಿ ತಂತ್ರಜ್ಞಾನದ ಸಮಾಲೋಚಕ ಸೈಯದ್ ಅವರು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.