ಹೊಸಪೇಟೆ (ವಿಜಯನಗರ): 600 ಮೆಟ್ಟಿಲು ಹತ್ತಿ ಹರಕೆ ತಿರಿಸಿ ದೇವಿಯ ದರ್ಶನ ಪಡೆದು ಬರುವಾಗ ಹೃದಯಾಘಾತದಿಂದ ಭಕ್ತನೊಬ್ಬ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಉಚ್ಚಂಗೆಮ್ಮ ಕ್ಷೇತ್ರದಲ್ಲಿ ನಡೆದಿದೆ. ಹುಚ್ಚಪ್ಪ (60) ಸಾವನ್ನಪ್ಪಿದ ವ್ಯಕ್ತಿ ಎಂದು ಗುರುತಿಸಲಾಗಿದೆ. ದಾವಣಗೆರೆ ನಗರದ ನಿವಾಸಿ ಹುಚ್ಚಪ್ಪರವರು ತಮ್ಮ ಪತ್ನಿ ಜೊತೆಗೆ ಉಚ್ಚಂಗೆಮ್ಮನ ದರ್ಶನಕ್ಕೆ ತೆರಳಿದ್ದರು.
![Old man has died](https://etvbharatimages.akamaized.net/etvbharat/prod-images/13420129_thumbjpg.jpg)
ಗುಡ್ಡದ ಮೇಲಿನ ಉಚ್ಚಂಗೆಮ್ಮನ ದರ್ಶನಕ್ಕಾಗಿ 600 ಮೆಟ್ಟಿಲು ಹತ್ತಿದ್ದಾರೆ. ಇದರಿಂದ ಅಸ್ವಸ್ಥಗೊಂಡ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಸ್ಥಳೀಯರು ಡೋಲಿಯಲ್ಲಿ ಕೆಳಗೆ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದ್ದಾರೆ. ಆದರೆ, ಮಾರ್ಗ ಮಧ್ಯ ಅಸುನೀಗಿದ್ದಾರೆ.