ETV Bharat / state

ಗಣಿ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾಗೆ ಮೂರನೇ ಬಲಿ

author img

By

Published : Jun 22, 2020, 11:17 AM IST

ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿದ್ದು, ಇಂದು ಬಳ್ಳಾರಿ ಜಿಲ್ಲೆಯಲ್ಲಿ ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ.

Bellary
Bellary

ಬಳ್ಳಾರಿ: ಗಣಿ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಇಂದು ಮತ್ತೊಂದು ಬಲಿಯಾಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಆಂಧ್ರಪ್ರದೇಶದ ಆದೋನಿ ಮೂಲದ 62 ವರ್ಷದ ವ್ಯಕ್ತಿ (ಪಿ-7732) ಇಂದು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್. ಎಸ್.ನಕುಲ್ ಸ್ಪಷ್ಟಪಡಿಸಿದ್ದಾರೆ.

ಬಹು ಅಂಗಾಂಗ ವೈಫಲ್ಯತೆಯಿಂದ ಬಳಲುತ್ತಿದ್ದ ಈ ವ್ಯಕ್ತಿ, ಕಳೆದ ಜೂನ್ 17 ರಂದು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ಲಕ್ಷಣಗಳು ಕಂಡುಬಂದ ಹಿನ್ನೆಲೆ ತಪಾಸಣೆ ಮಾಡಲಾಗಿತ್ತು. ವರದಿ ಬಂದ ಬಳಿಕ ಕೊರೊನಾ ಪಾಸಿಟಿವ್ ಎಂದು ದೃಢಪಟ್ಟಿತ್ತು. ನಂತರ ಜಿಲ್ಲಾ ಕೋವಿಡ್ ಆಸ್ಪತ್ರೆಯ ಐಸೋಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿ ಮೃತಪಟ್ಟಿದ್ದಾರೆಂದು ಡಿ.ಸಿ ನಕುಲ್ ತಿಳಿಸಿದ್ದಾರೆ.

ಬಳ್ಳಾರಿ: ಗಣಿ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಇಂದು ಮತ್ತೊಂದು ಬಲಿಯಾಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಆಂಧ್ರಪ್ರದೇಶದ ಆದೋನಿ ಮೂಲದ 62 ವರ್ಷದ ವ್ಯಕ್ತಿ (ಪಿ-7732) ಇಂದು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್. ಎಸ್.ನಕುಲ್ ಸ್ಪಷ್ಟಪಡಿಸಿದ್ದಾರೆ.

ಬಹು ಅಂಗಾಂಗ ವೈಫಲ್ಯತೆಯಿಂದ ಬಳಲುತ್ತಿದ್ದ ಈ ವ್ಯಕ್ತಿ, ಕಳೆದ ಜೂನ್ 17 ರಂದು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ಲಕ್ಷಣಗಳು ಕಂಡುಬಂದ ಹಿನ್ನೆಲೆ ತಪಾಸಣೆ ಮಾಡಲಾಗಿತ್ತು. ವರದಿ ಬಂದ ಬಳಿಕ ಕೊರೊನಾ ಪಾಸಿಟಿವ್ ಎಂದು ದೃಢಪಟ್ಟಿತ್ತು. ನಂತರ ಜಿಲ್ಲಾ ಕೋವಿಡ್ ಆಸ್ಪತ್ರೆಯ ಐಸೋಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿ ಮೃತಪಟ್ಟಿದ್ದಾರೆಂದು ಡಿ.ಸಿ ನಕುಲ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.