ETV Bharat / state

ಬಳ್ಳಾರಿಯ ಮೂರು ತಾಲೂಕಿನಲ್ಲಿ ಖರೀದಿ ಕೇಂದ್ರ ಸ್ಥಾಪನೆ... 5.71 ಲಕ್ಷ ಕ್ವಿಂಟಾಲ್ ಭತ್ತ ಖರೀದಿ ಗುರಿ‌

author img

By

Published : Dec 1, 2020, 7:35 PM IST

ಗಣಿ ಜಿಲ್ಲೆಯ ಬಳ್ಳಾರಿ, ಕಂಪ್ಲಿ ಹಾಗೂ ಸಿರುಗುಪ್ಪ ತಾಲೂಕಿನಾದ್ಯಂತ ಭತ್ತದ ಬೆಳೆ ಜಾಸ್ತಿ ಇರೋದರಿಂದ ಮೂರು ತಾಲೂಕುಗಳಲ್ಲಿ ತಲಾ ಒಂದರಂತೆಯೇ ಭತ್ತ ಖರೀದಿ ಕೇಂದ್ರ ತೆರೆಯಲಾಗಿದೆ.

Bellary
Bellary

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಭತ್ತ ಖರೀದಿ ಕೇಂದ್ರ ಪ್ರಾರಂಭಿಸಲಾಗಿದ್ದು, ಈ ಖರೀದಿ ಕೇಂದ್ರಗಳಲ್ಲಿ ರೈತರ ನೋಂದಣಿ‌ ಕಡ್ಡಾಯಗೊಳಿಸಲಾಗಿದೆ.

ಬಳ್ಳಾರಿಯಲ್ಲಿ ಭತ್ತ ಖರೀದಿ ಕೇಂದ್ರ

ನವೆಂಬರ್ 30ರಂದೇ ಈ ನೋಂದಣಿ ಕಾರ್ಯ ಆರಂಭಿಸಿದ್ದು, ಈವರೆಗೂ ಒಬ್ಬ ರೈತರೂ ಕೂಡ ಖರೀದಿ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಿಲ್ಲ. ಕೆಲ ತಾಂತ್ರಿಕ ದೋಷಗಳಿಂದಾಗಿ ಈ ಖರೀದಿ ಕೇಂದ್ರಗಳತ್ತ ರೈತರು ಸುಳಿದಿಲ್ಲ ಎನ್ನಲಾಗಿದೆ.

ಗಣಿ ಜಿಲ್ಲೆ ಬಳ್ಳಾರಿ, ಕಂಪ್ಲಿ ಹಾಗೂ ಸಿರುಗುಪ್ಪ ತಾಲೂಕಿನಾದ್ಯಂತ ಭತ್ತದ ಬೆಳೆ ಜಾಸ್ತಿ ಇರೋದರಿಂದ ಈ ಮೂರು ತಾಲೂಕುಗಳಲ್ಲಿ ತಲಾ ಒಂದರಂತೆಯೇ ಭತ್ತ ಖರೀದಿ ಕೇಂದ್ರ ತೆರೆಯಲಾಗಿದೆ. ಭತ್ತದ ಗುಣಮಟ್ಟದ ಪರೀಕ್ಷೆಯ ಇನ್ಸ್​ಪೆಕ್ಟರ್​ ಸೇರಿದಂತೆ ಖರೀದಿ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಕೆಲ ತಾಂತ್ರಿಕ ದೋಷಗಳಿಂದ ನವೆಂಬರ್ 30ರಂದು ಯಾರೊಬ್ಬ ರೈತರೂ ಕೂಡ ಈ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಿಲ್ಲ.

ಈ ಸಂಬಂಧ ಈಟಿವಿ ಭಾರತದೊಂದಿಗೆ ಮಾತನಾಡಿದ ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಸಿ.ಎಂ.ಶ್ರೀಧರ, ಕಳೆದ ಬಾರಿ ಅಂದಾಜು 801 ಮಂದಿ ರೈತರು ಈ ಖರೀದಿ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಿದ್ದರು. ಸರಿ ಸುಮಾರು 12,800 ಕ್ವಿಂಟಾಲ್ ಭತ್ತ ಖರೀದಿಸಲಾಗಿತ್ತು. ಈ ಬಾರಿ ಕೂಡ ಅಂದಾಜು 5.71 ಲಕ್ಷ ಕ್ವಿಂಟಾಲ್ ಭತ್ತವನ್ನ ಖರೀದಿಸಲು ನಿರ್ಧರಿಸಲಾಗಿದೆ.‌ ಡಿಸೆಂಬರ್ 20ರಿಂದ ಭತ್ತ ಖರೀದಿಸಲು ನಿರ್ಧರಿಸಲಾಗಿದೆ. ಅದಕ್ಕೂ ಮೊದಲು ರೈತರ ನೋಂದಣಿ ಕಡ್ಡಾಯವಾಗಿದೆ ಎಂದರು.

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಭತ್ತ ಖರೀದಿ ಕೇಂದ್ರ ಪ್ರಾರಂಭಿಸಲಾಗಿದ್ದು, ಈ ಖರೀದಿ ಕೇಂದ್ರಗಳಲ್ಲಿ ರೈತರ ನೋಂದಣಿ‌ ಕಡ್ಡಾಯಗೊಳಿಸಲಾಗಿದೆ.

ಬಳ್ಳಾರಿಯಲ್ಲಿ ಭತ್ತ ಖರೀದಿ ಕೇಂದ್ರ

ನವೆಂಬರ್ 30ರಂದೇ ಈ ನೋಂದಣಿ ಕಾರ್ಯ ಆರಂಭಿಸಿದ್ದು, ಈವರೆಗೂ ಒಬ್ಬ ರೈತರೂ ಕೂಡ ಖರೀದಿ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಿಲ್ಲ. ಕೆಲ ತಾಂತ್ರಿಕ ದೋಷಗಳಿಂದಾಗಿ ಈ ಖರೀದಿ ಕೇಂದ್ರಗಳತ್ತ ರೈತರು ಸುಳಿದಿಲ್ಲ ಎನ್ನಲಾಗಿದೆ.

ಗಣಿ ಜಿಲ್ಲೆ ಬಳ್ಳಾರಿ, ಕಂಪ್ಲಿ ಹಾಗೂ ಸಿರುಗುಪ್ಪ ತಾಲೂಕಿನಾದ್ಯಂತ ಭತ್ತದ ಬೆಳೆ ಜಾಸ್ತಿ ಇರೋದರಿಂದ ಈ ಮೂರು ತಾಲೂಕುಗಳಲ್ಲಿ ತಲಾ ಒಂದರಂತೆಯೇ ಭತ್ತ ಖರೀದಿ ಕೇಂದ್ರ ತೆರೆಯಲಾಗಿದೆ. ಭತ್ತದ ಗುಣಮಟ್ಟದ ಪರೀಕ್ಷೆಯ ಇನ್ಸ್​ಪೆಕ್ಟರ್​ ಸೇರಿದಂತೆ ಖರೀದಿ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಕೆಲ ತಾಂತ್ರಿಕ ದೋಷಗಳಿಂದ ನವೆಂಬರ್ 30ರಂದು ಯಾರೊಬ್ಬ ರೈತರೂ ಕೂಡ ಈ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಿಲ್ಲ.

ಈ ಸಂಬಂಧ ಈಟಿವಿ ಭಾರತದೊಂದಿಗೆ ಮಾತನಾಡಿದ ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಸಿ.ಎಂ.ಶ್ರೀಧರ, ಕಳೆದ ಬಾರಿ ಅಂದಾಜು 801 ಮಂದಿ ರೈತರು ಈ ಖರೀದಿ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಿದ್ದರು. ಸರಿ ಸುಮಾರು 12,800 ಕ್ವಿಂಟಾಲ್ ಭತ್ತ ಖರೀದಿಸಲಾಗಿತ್ತು. ಈ ಬಾರಿ ಕೂಡ ಅಂದಾಜು 5.71 ಲಕ್ಷ ಕ್ವಿಂಟಾಲ್ ಭತ್ತವನ್ನ ಖರೀದಿಸಲು ನಿರ್ಧರಿಸಲಾಗಿದೆ.‌ ಡಿಸೆಂಬರ್ 20ರಿಂದ ಭತ್ತ ಖರೀದಿಸಲು ನಿರ್ಧರಿಸಲಾಗಿದೆ. ಅದಕ್ಕೂ ಮೊದಲು ರೈತರ ನೋಂದಣಿ ಕಡ್ಡಾಯವಾಗಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.