ETV Bharat / state

ಗಣಿನಗರಿಯಲ್ಲಿ ದುಪ್ಪಟ್ಟು ದರದಲ್ಲಿ ರಸಗೊಬ್ಬರ, ಕೀಟನಾಶಕ ಮಾರಾಟ ಆರೋಪ - ದುಪ್ಪಟ್ಟು ದರದಲಿ ರಸಗೊಬ್ಬರ ಮಾರಾಟ ಸುದ್ದಿ,

ಒಂದೆಡೆ ರೈತರು ತಾವು ಬೆಳೆದ ಬೆಳೆಗೆ ಕನಿಷ್ಠ ಬೆಂಬಲ ಸಿಗದಿರೋದರಿಂದ ಮಾರುಕಟ್ಟೆಗೆ ಸಾಗಿಸಲಾರದೇ ಗೋದಾಮಿನಲ್ಲಿ ದಾಸ್ತಾನು ಮಾಡಿಟ್ಟುಕೊಂಡು ಕನಿಷ್ಠ ಬೆಂಬಲ ಬೆಲೆಗಾಗಿ ಕಾಯುತ್ತಿದ್ದಾರೆ. ಮತ್ತೊಂದೆಡೆ, ಕೃಷಿ ಚಟುವಟಿಕೆಗೆ ಅಗತ್ಯ ಇರುವ ಪರಿಕರಗಳ ಖರೀದಿಗೂ ಸಹ ದುಬಾರಿ ಬೆಲೆ ತೆರಬೇಕಾಗಿದೆ.

pesticides Selling, pesticides Selling in double rate, pesticides Selling in double rate in Bellary, Bellary news, ದುಪ್ಪಟ್ಟು ದರದಲಿ ರಸಗೊಬ್ಬರ ಮಾರಾಟ, ಬಳ್ಳಾರಿಯಲ್ಲಿ ದುಪ್ಪಟ್ಟು ದರದಲಿ ರಸಗೊಬ್ಬರ ಮಾರಾಟ, ದುಪ್ಪಟ್ಟು ದರದಲಿ ರಸಗೊಬ್ಬರ ಮಾರಾಟ ಸುದ್ದಿ, ಬಳ್ಳಾರಿ ಸುದ್ದಿ,
ಗಣಿನಗರಿಯಲ್ಲಿ ರಸಗೊಬ್ಬರ ಖರೀದಿ ಭರಾಟೆ
author img

By

Published : May 21, 2021, 10:18 AM IST

ಬಳ್ಳಾರಿ: ಮಹಾಮಾರಿ ಕೊರೊನಾ ಸೋಂಕಿನ ಅಬ್ಬರ ಮಧ್ಯೆಯೂ ಕೂಡ ಗಣಿನಾಡು ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ರಸಗೊಬ್ಬರ, ಕೀಟನಾಶಕ ಔಷಧಿ ಮತ್ತು ಬೀಜ ಖರೀದಿ ಭರಾಟೆ ಜೋರಾಗಿದೆ.

ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯಾರಂಭಕ್ಕೆ ಕ್ಷಣಗಣನೆ ಶುರುವಾದ ಬೆನ್ನಲ್ಲೇ ಬಳ್ಳಾರಿ ತಾಲೂಕಿನ ನೂರಾರು ರೈತರು ರಸಗೊಬ್ಬರದ ಅಂಗಡಿಗಳ ಮುಂದೆ ಸಾಲಾಗಿ ನಿಂತುಕೊಂಡು ಕೃಷಿ ಚಟುವಟಿಕೆಗೆ ಬೇಕಾಗುವ ಅಗತ್ಯ ಪರಿಕರಗಳನ್ನು ಖರೀದಿಸುತ್ತಿದ್ದಾರೆ. ಹೀಗಾಗಿ ಅಂಗಡಿ ಮಾಲೀಕರು ದುಪ್ಪಟ್ಟು ದರದಲ್ಲಿ ರಸಗೊಬ್ಬರ, ಕೀಟನಾಶಕ ಔಷಧಿ ಮತ್ತು ಬಿತ್ತನೆ ಬೀಜ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಗಣಿನಗರಿಯಲ್ಲಿ ರಸಗೊಬ್ಬರ ಖರೀದಿ ಭರಾಟೆ

ಕಳೆದ ಬಾರಿಗೆ ಹೋಲಿಕೆ ಮಾಡಿ ನೋಡಿದಾಗ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಸೇರಿದಂತೆ ಕ್ರಿಮಿನಾಶಕ ಔಷಧಿಗಳ ಮಾರಾಟದಲ್ಲಿ ಭಾರೀ ವ್ಯತ್ಯಾಸ ಕಂಡುಬಂದಿದೆ. ಹೀಗಾಗಿ, ಅನಿವಾರ್ಯವಾಗಿ ದುಪ್ಪಟ್ಟು ದರದಲ್ಲೇ ಈ ಕೃಷಿ ಪರಿಕರಗಳ ಖರೀದಿ ಮಾಡೋ ಪರಿಸ್ಥಿತಿ ರೈತಾಪಿವರ್ಗಕ್ಕೆ ಬಂದೊದಗಿದೆ.

ಒಂದೆಡೆ ರೈತರು ತಾವು ಬೆಳೆದ ಬೆಳೆಗೆ ಕನಿಷ್ಠ ಬೆಂಬಲ ಸಿಗದಿರೋದರಿಂದ ಮಾರುಕಟ್ಟೆಗೆ ಸಾಗಿಸಲಾರದೇ ಗೋದಾಮಿನಲ್ಲಿ ದಾಸ್ತಾನು ಮಾಡಿಟ್ಟುಕೊಂಡು ಕನಿಷ್ಠ ಬೆಂಬಲ ಬೆಲೆಗಾಗಿ ಕಾಯುತ್ತಿದ್ದಾರೆ. ಮತ್ತೊಂದೆಡೆ, ಕೃಷಿ ಚಟುವಟಿಕೆಗೆ ಅಗತ್ಯ ಇರುವ ಪರಿಕರಗಳ ಖರೀದಿಗೂ ಸಹ ದುಬಾರಿ ಬೆಲೆ ತೆರಬೇಕಾಗಿದೆ.

ಬಳ್ಳಾರಿ: ಮಹಾಮಾರಿ ಕೊರೊನಾ ಸೋಂಕಿನ ಅಬ್ಬರ ಮಧ್ಯೆಯೂ ಕೂಡ ಗಣಿನಾಡು ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ರಸಗೊಬ್ಬರ, ಕೀಟನಾಶಕ ಔಷಧಿ ಮತ್ತು ಬೀಜ ಖರೀದಿ ಭರಾಟೆ ಜೋರಾಗಿದೆ.

ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯಾರಂಭಕ್ಕೆ ಕ್ಷಣಗಣನೆ ಶುರುವಾದ ಬೆನ್ನಲ್ಲೇ ಬಳ್ಳಾರಿ ತಾಲೂಕಿನ ನೂರಾರು ರೈತರು ರಸಗೊಬ್ಬರದ ಅಂಗಡಿಗಳ ಮುಂದೆ ಸಾಲಾಗಿ ನಿಂತುಕೊಂಡು ಕೃಷಿ ಚಟುವಟಿಕೆಗೆ ಬೇಕಾಗುವ ಅಗತ್ಯ ಪರಿಕರಗಳನ್ನು ಖರೀದಿಸುತ್ತಿದ್ದಾರೆ. ಹೀಗಾಗಿ ಅಂಗಡಿ ಮಾಲೀಕರು ದುಪ್ಪಟ್ಟು ದರದಲ್ಲಿ ರಸಗೊಬ್ಬರ, ಕೀಟನಾಶಕ ಔಷಧಿ ಮತ್ತು ಬಿತ್ತನೆ ಬೀಜ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಗಣಿನಗರಿಯಲ್ಲಿ ರಸಗೊಬ್ಬರ ಖರೀದಿ ಭರಾಟೆ

ಕಳೆದ ಬಾರಿಗೆ ಹೋಲಿಕೆ ಮಾಡಿ ನೋಡಿದಾಗ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಸೇರಿದಂತೆ ಕ್ರಿಮಿನಾಶಕ ಔಷಧಿಗಳ ಮಾರಾಟದಲ್ಲಿ ಭಾರೀ ವ್ಯತ್ಯಾಸ ಕಂಡುಬಂದಿದೆ. ಹೀಗಾಗಿ, ಅನಿವಾರ್ಯವಾಗಿ ದುಪ್ಪಟ್ಟು ದರದಲ್ಲೇ ಈ ಕೃಷಿ ಪರಿಕರಗಳ ಖರೀದಿ ಮಾಡೋ ಪರಿಸ್ಥಿತಿ ರೈತಾಪಿವರ್ಗಕ್ಕೆ ಬಂದೊದಗಿದೆ.

ಒಂದೆಡೆ ರೈತರು ತಾವು ಬೆಳೆದ ಬೆಳೆಗೆ ಕನಿಷ್ಠ ಬೆಂಬಲ ಸಿಗದಿರೋದರಿಂದ ಮಾರುಕಟ್ಟೆಗೆ ಸಾಗಿಸಲಾರದೇ ಗೋದಾಮಿನಲ್ಲಿ ದಾಸ್ತಾನು ಮಾಡಿಟ್ಟುಕೊಂಡು ಕನಿಷ್ಠ ಬೆಂಬಲ ಬೆಲೆಗಾಗಿ ಕಾಯುತ್ತಿದ್ದಾರೆ. ಮತ್ತೊಂದೆಡೆ, ಕೃಷಿ ಚಟುವಟಿಕೆಗೆ ಅಗತ್ಯ ಇರುವ ಪರಿಕರಗಳ ಖರೀದಿಗೂ ಸಹ ದುಬಾರಿ ಬೆಲೆ ತೆರಬೇಕಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.