ಬಳ್ಳಾರಿ: ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆಯನ್ನ ವಿರೋಧಿಸಿ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಯು ಕೈಗೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಈ ದಿನ 23 ದಿನಕ್ಕೆ ಕಾಲಿಟ್ಟಿದೆ.
ಜಿಲ್ಲಾ ವೀರಶೈವ ಜಂಗಮ ಅರ್ಚಕ ಮತ್ತು ಪುರೋಹಿತರ ಸಂಘದ ಪದಾಧಿಕಾರಿಗಳು ಈ ದಿನದ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಇಲ್ಲಿನ ಡಿಸಿ ಕಚೇರಿಯ ಎದುರು ಸ್ಥಾಪಿಸಲಾದ ತಾತ್ಕಾಲಿಕ ಟೆಂಟ್ನಲ್ಲಿ ನಾನಾ ಸಂಘಟನೆಗಳ ಮುಖಂಡರೊಂದಿಗೆ ಪುರೋಹಿತರ ಸಂಘದ ಪದಾಧಿಕಾರಿಗಳು ಭಾಗವಹಿಸಿ ಕೆಲಕಾಲ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ದ್ದಾರೆ.
ಅಖಂಡ ಬಳ್ಳಾರಿ ಜಿಲ್ಲೆಯನ್ನ ವಿಭಜನೆ ಮಾಡೋದು ತರವಲ್ಲ. ಭಾಷಾವಾರು ವಿಂಗಡಣೆ ವೇಳೆಯಲ್ಲಿ ಬಳ್ಳಾರಿ ಜಿಲ್ಲೆಯನ್ನ ಅಖಂಡವಾಗಿಯೇ ಉಳಿಸಲಾಗಿತ್ತು. ಹೀಗಾಗಿ, ರಾಜ್ಯ ಸರ್ಕಾರ ಈ ಜಿಲ್ಲೆಯ ವಿಭಜನೆ ಮಾಡೋದು ಸೂಕ್ತವಲ್ಲ. ಕೂಡಲೇ ನೂತನ ವಿಜಯನಗರ ಜಿಲ್ಲೆ ರಚನೆಯನ್ನ ಕೈಬಿಡಬೇಕೆಂದು ಹಿರಿಯ ಮುಖಂಡ ಟಿ.ಜಿ.ವಿಠ್ಠಲ ಆಗ್ರಹಿಸಿದ್ದಾರೆ.
ಕಾವಿ ಬಟ್ಟೆ ಪ್ರದರ್ಶನ:
ಜಿಲ್ಲಾ ವೀರಶೈವ ಅರ್ಚಕ ಮತ್ತು ಪುರೋಹಿತರ ಸಂಘದಿಂದ ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿ ಹೋರಾಟದಲ್ಲಿ ಕಾವಿ ಬಟ್ಟೆಗಳನ್ನ ಧರಿಸಿಕೊಂಡೇ ಹೋರಾಟಕ್ಕಿಳಿದಿರೋದು ವಿಶೇಷವೆನಿಸಿದೆ.
ಇದನ್ನೂ ಓದಿ:ಅಂತಃಕರಣದ ಕುಬೇರ: ಅನಾರೋಗ್ಯ ಪೀಡಿತ ಮಾಜಿ ನೌಕರನ ಮನೆ ಬಾಗಿಲಿಗೆ ಬಂದ ರತನ್ ಟಾಟಾ!