ETV Bharat / state

ಕಾಶ್ಮೀರ ಹಿಮಪಾತದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆ

ಕಾಶ್ಮೀರದ ಹಿಮಪಾತದಲ್ಲಿ ಸಿಲುಕಿದ್ದ ಹೊಸಪೇಟೆ ಹಾಗೂ ಹುಬ್ಬಳ್ಳಿ ಮೂಲದ ಕನ್ನಡಿಗರನ್ನು ಕಾಶ್ಮೀರದ ಸ್ಥಳೀಯ ಆಡಳಿತ, ಮಿಲಿಟರಿ ಪಡೆ ರಕ್ಷಿಸಿವೆ.

author img

By

Published : Mar 13, 2021, 4:58 PM IST

Updated : Mar 14, 2021, 12:49 PM IST

Protection of Kannadigars caught in Kashmir blizzard
ಕಾಶ್ಮೀರ ಹಿಮಪಾತದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆ

ಹೊಸಪೇಟೆ/ಹುಬ್ಬಳ್ಳಿ: ಕಾಶ್ಮೀರಕ್ಕೆ ಪ್ರವಾಸ ಹೋಗಿದ್ದ ವೇಳೆ ಹಿಮಪಾತವಾದ ಕಾರಣ ಖಾಸಗಿ ಹೊಟೇಲ್​ನಲ್ಲಿ ಸಿಲುಕಿದ್ದ ಹುಬ್ಬಳ್ಳಿಯ ಎಂಟು ಜನ ಹಾಗೂ ಹೊಸಪೇಟೆಯ ಇಬ್ಬರು ಪ್ರವಾಸಿಗರನ್ನು ರಕ್ಷಿಸಲಾಗಿದೆ. ಒಟ್ಟು 10 ಜನ ಪ್ರವಾಸಿಗರು ಈಗ ಶ್ರೀನಗರದ ಸುರಕ್ಷಿತ ಸ್ಥಳದಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

protection-of-kannadigars-caught-in-kashmir-blizzard
ಕಾಶ್ಮೀರ ಹಿಮಪಾತದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆ

ಜಮ್ಮು ಮತ್ತು ಕಾಶ್ಮೀರದ ಸೋನಾಮಾರ್ಗದ ಖಾಸಗಿ ಹೋಟೆಲ್‌ನಲ್ಲಿ 10 ಜನ ಉಳಿದುಕೊಂಡಿದ್ದರು. ಹುಬ್ಬಳ್ಳಿಯ ಕೇಶ್ವಾಪುರದ ಅಂಬಿಕಾ ನಗರದ ವೆಂಕಟೇಶ ಜಲಭಂಜನ್‌ ಕುಟುಂಬದ 8 ಜನ ಮತ್ತು ಹೊಸಪೇಟೆಯ ಪ್ರಕಾಶ್ ಹಾಗೂ ಸುಧಾ ಮೆಹರವಾಡೆ ದಂಪತಿ 9 ದಿನಗಳ ಹಿಂದೆ ಪ್ರವಾಸಕ್ಕೆ ತೆರಳಿದ್ದರು.

ಕಾಶ್ಮೀರ ಹಿಮಪಾತದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆ

ಸೋನಾಮಾರ್ಗದ ಹೊಟೇಲ್​ಗೆ ಬಂದ ನಂತರದ ಐದು ದಿನಗಳಲ್ಲಿ ಸುತ್ತಲಿನ ಪ್ರವಾಸಿ ಸ್ಥಳಗಳಿಗೆ ಭೇಟಿ ಕೊಟ್ಟು ವಾಪಸ್ ಬಂದಿದ್ದರು. ನಂತರ ಬೇರೆಲ್ಲೂ ಹೋಗದ ಸ್ಥಿತಿ ನಿರ್ಮಾಣವಾಗಿತ್ತು. ನಿರಂತರ ಹಿಮಪಾತದಿಂದ ರಸ್ತೆಗಳು ಬಂದ್​​ ಆಗಿದ್ದ ಪರಿಣಾಮ ವಿಡಿಯೋ ಮೂಲಕ ತಮ್ಮ ಅಳಲು ತೋಡಿಕೊಂಡಿದ್ದರು. ನಂತರ ಸಂಬಂಧಿಸಿದ ಅಧಿಕಾರಿಗಳು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿದ್ದಾರೆ.

ಓದಿ:ಹಿಮಪಾತದಿಂದಾಗಿ ಕಾಶ್ಮೀರದಲ್ಲಿ ಸಿಲುಕಿದ ಕನ್ನಡಿಗರು: ರಕ್ಷಣೆಗೆ ಮೊರೆ

ಹೊಸಪೇಟೆ/ಹುಬ್ಬಳ್ಳಿ: ಕಾಶ್ಮೀರಕ್ಕೆ ಪ್ರವಾಸ ಹೋಗಿದ್ದ ವೇಳೆ ಹಿಮಪಾತವಾದ ಕಾರಣ ಖಾಸಗಿ ಹೊಟೇಲ್​ನಲ್ಲಿ ಸಿಲುಕಿದ್ದ ಹುಬ್ಬಳ್ಳಿಯ ಎಂಟು ಜನ ಹಾಗೂ ಹೊಸಪೇಟೆಯ ಇಬ್ಬರು ಪ್ರವಾಸಿಗರನ್ನು ರಕ್ಷಿಸಲಾಗಿದೆ. ಒಟ್ಟು 10 ಜನ ಪ್ರವಾಸಿಗರು ಈಗ ಶ್ರೀನಗರದ ಸುರಕ್ಷಿತ ಸ್ಥಳದಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

protection-of-kannadigars-caught-in-kashmir-blizzard
ಕಾಶ್ಮೀರ ಹಿಮಪಾತದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆ

ಜಮ್ಮು ಮತ್ತು ಕಾಶ್ಮೀರದ ಸೋನಾಮಾರ್ಗದ ಖಾಸಗಿ ಹೋಟೆಲ್‌ನಲ್ಲಿ 10 ಜನ ಉಳಿದುಕೊಂಡಿದ್ದರು. ಹುಬ್ಬಳ್ಳಿಯ ಕೇಶ್ವಾಪುರದ ಅಂಬಿಕಾ ನಗರದ ವೆಂಕಟೇಶ ಜಲಭಂಜನ್‌ ಕುಟುಂಬದ 8 ಜನ ಮತ್ತು ಹೊಸಪೇಟೆಯ ಪ್ರಕಾಶ್ ಹಾಗೂ ಸುಧಾ ಮೆಹರವಾಡೆ ದಂಪತಿ 9 ದಿನಗಳ ಹಿಂದೆ ಪ್ರವಾಸಕ್ಕೆ ತೆರಳಿದ್ದರು.

ಕಾಶ್ಮೀರ ಹಿಮಪಾತದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆ

ಸೋನಾಮಾರ್ಗದ ಹೊಟೇಲ್​ಗೆ ಬಂದ ನಂತರದ ಐದು ದಿನಗಳಲ್ಲಿ ಸುತ್ತಲಿನ ಪ್ರವಾಸಿ ಸ್ಥಳಗಳಿಗೆ ಭೇಟಿ ಕೊಟ್ಟು ವಾಪಸ್ ಬಂದಿದ್ದರು. ನಂತರ ಬೇರೆಲ್ಲೂ ಹೋಗದ ಸ್ಥಿತಿ ನಿರ್ಮಾಣವಾಗಿತ್ತು. ನಿರಂತರ ಹಿಮಪಾತದಿಂದ ರಸ್ತೆಗಳು ಬಂದ್​​ ಆಗಿದ್ದ ಪರಿಣಾಮ ವಿಡಿಯೋ ಮೂಲಕ ತಮ್ಮ ಅಳಲು ತೋಡಿಕೊಂಡಿದ್ದರು. ನಂತರ ಸಂಬಂಧಿಸಿದ ಅಧಿಕಾರಿಗಳು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿದ್ದಾರೆ.

ಓದಿ:ಹಿಮಪಾತದಿಂದಾಗಿ ಕಾಶ್ಮೀರದಲ್ಲಿ ಸಿಲುಕಿದ ಕನ್ನಡಿಗರು: ರಕ್ಷಣೆಗೆ ಮೊರೆ

Last Updated : Mar 14, 2021, 12:49 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.