ETV Bharat / state

ಸರ್ಕಾರಿ - ಅನುದಾನಿತ ಶಾಲಾ- ಕಾಲೇಜುಗಳ ಶುಲ್ಕ ರಾಜ್ಯ ಸರ್ಕಾರವೇ ಭರಿಸಲಿ - ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್​​ಒ)

ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡಬೇಕು ಹಾಗೂ ಎಲ್ಲ ವಿದ್ಯಾರ್ಥಿಗಳ ಶಿಷ್ಯ ವೇತನವನ್ನ (ಸ್ಕಾಲರ್ ಶಿಪ್) ಹೆಚ್ಚಿಸಿ ಕಡ್ಡಾಯವಾಗಿ ವಿತರಿಸಬೇಕು ಎಂದು ಎಐಡಿಎಸ್​ಒ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಸುರೇಶ ಒತ್ತಾಯಿಸಿದ್ದಾರೆ.

protest by AIDSO Organization at Bellary
ಎಐಡಿಎಸ್​ಒ ಸಂಘಟನೆ
author img

By

Published : May 26, 2020, 9:17 PM IST

ಬಳ್ಳಾರಿ: ಎಲ್ಲ ಸರ್ಕಾರಿ ಹಾಗೂ ಅನುದಾನಿತ ಶಾಲಾ - ಕಾಲೇಜುಗಳ ಶುಲ್ಕವನ್ನು ರಾಜ್ಯ ಸರ್ಕಾರವೇ ಭರಿಸಬೇಕು.‌ ವಿವಿಯ ಪರೀಕ್ಷಾ ಶುಲ್ಕವನ್ನು ರದ್ದುಪಡಿಸಬೇಕು. ಈಗಾಗಲೇ ಶುಲ್ಕ ಪಡೆದಲ್ಲಿ ಅದನ್ನ ವಾಪಸ್​​​​ ನೀಡಬೇಕು ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್​​ಒ) ನ ಪದಾಧಿಕಾರಿಗಳು ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಎಐಡಿಎಸ್​ಒ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಸುರೇಶ ಅವರ ನೇತೃತ್ವದಲ್ಲಿ ನಾಲ್ಕಾರು ವಿದ್ಯಾರ್ಥಿಗಳು ಜಿಲ್ಲೆಯ ಡಿಸಿ ಕಚೇರಿಯ ಆವರಣದಲ್ಲಿಂದು ಸಾಂಕೇತಿಕವಾಗಿ ಪ್ರತಿಭಟಿಸಿ, ಕಚೇರಿಯ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ರು.

ಎಐಡಿಎಸ್​ಒ ಸಂಘಟನೆಯಿಂದ ಪ್ರತಿಭಟನೆ

ನಂತರ ಮಾತನಾಡಿದ ಅವರು, ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡಬೇಕು. ಎಲ್ಲ ವಿದ್ಯಾರ್ಥಿಗಳ ಶಿಷ್ಯ ವೇತನವನ್ನ (ಸ್ಕಾಲರ್ ಶಿಪ್) ಹೆಚ್ಚಿಸಿ ಕಡ್ಡಾಯವಾಗಿ ವಿತರಿಸಬೇಕು. ಸರ್ಕಾರಿ ಹಾಸ್ಟೆಲ್​ಗಳ ಅನುದಾನವನ್ನು ಹೆಚ್ಚಿಸಿ ಹಾಗೂ ಹಾಸ್ಟೆಲ್ ಸೌಕರ್ಯವನ್ನು ಶೈಕ್ಷಣಿಕ ವರ್ಷಾರಂಭದಲ್ಲಿಯೇ ಒದಗಿಸಬೇಕು ಹಾಗೂ ಆನ್​ಲೈನ್​​ ತರಗತಿಗಳ ಆಧಾರದ ಮೇಲೆ ಪರೀಕ್ಷೆ ನಡೆಸಬಾರದು ಎಂದರು.

ನಂತರ ಮಾತು ಮುಂದುವರೆಸಿದ ಅವರು, ಪರೀಕ್ಷೆಯ ರೂಪುರೇಷೆಯನ್ನು ಶಿಕ್ಷಣ ತಜ್ಞರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ ಪ್ರಜಾ ತಾಂತ್ರಿಕವಾಗಿ ರೂಪಿಸತಕ್ಕದ್ದು. ಕ್ವಾರಂಟೈನ್ ಕೇಂದ್ರಗಳಾಗಿ ಬಳಸಿದ ಶಾಲೆ- ಕಾಲೇಜು ಹಾಗೂ ಹಾಸ್ಟೆಲ್ ಕಟ್ಟಡಗಳನ್ನ ಸಂಪೂರ್ಣವಾಗಿ ಶುದ್ಧೀಕರಿಸಿ ಸ್ಯಾನಿಟೈಸ್ ಮಾಡಿದ ನಂತರವೇ ವಿದ್ಯಾರ್ಥಿಗಳಿಗೆ ಅದನ್ನ ನೀಡಬೇಕು ಎಂದು ಒತ್ತಾಯಿಸಿದರು.

ಬಳ್ಳಾರಿ: ಎಲ್ಲ ಸರ್ಕಾರಿ ಹಾಗೂ ಅನುದಾನಿತ ಶಾಲಾ - ಕಾಲೇಜುಗಳ ಶುಲ್ಕವನ್ನು ರಾಜ್ಯ ಸರ್ಕಾರವೇ ಭರಿಸಬೇಕು.‌ ವಿವಿಯ ಪರೀಕ್ಷಾ ಶುಲ್ಕವನ್ನು ರದ್ದುಪಡಿಸಬೇಕು. ಈಗಾಗಲೇ ಶುಲ್ಕ ಪಡೆದಲ್ಲಿ ಅದನ್ನ ವಾಪಸ್​​​​ ನೀಡಬೇಕು ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್​​ಒ) ನ ಪದಾಧಿಕಾರಿಗಳು ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಎಐಡಿಎಸ್​ಒ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಸುರೇಶ ಅವರ ನೇತೃತ್ವದಲ್ಲಿ ನಾಲ್ಕಾರು ವಿದ್ಯಾರ್ಥಿಗಳು ಜಿಲ್ಲೆಯ ಡಿಸಿ ಕಚೇರಿಯ ಆವರಣದಲ್ಲಿಂದು ಸಾಂಕೇತಿಕವಾಗಿ ಪ್ರತಿಭಟಿಸಿ, ಕಚೇರಿಯ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ರು.

ಎಐಡಿಎಸ್​ಒ ಸಂಘಟನೆಯಿಂದ ಪ್ರತಿಭಟನೆ

ನಂತರ ಮಾತನಾಡಿದ ಅವರು, ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡಬೇಕು. ಎಲ್ಲ ವಿದ್ಯಾರ್ಥಿಗಳ ಶಿಷ್ಯ ವೇತನವನ್ನ (ಸ್ಕಾಲರ್ ಶಿಪ್) ಹೆಚ್ಚಿಸಿ ಕಡ್ಡಾಯವಾಗಿ ವಿತರಿಸಬೇಕು. ಸರ್ಕಾರಿ ಹಾಸ್ಟೆಲ್​ಗಳ ಅನುದಾನವನ್ನು ಹೆಚ್ಚಿಸಿ ಹಾಗೂ ಹಾಸ್ಟೆಲ್ ಸೌಕರ್ಯವನ್ನು ಶೈಕ್ಷಣಿಕ ವರ್ಷಾರಂಭದಲ್ಲಿಯೇ ಒದಗಿಸಬೇಕು ಹಾಗೂ ಆನ್​ಲೈನ್​​ ತರಗತಿಗಳ ಆಧಾರದ ಮೇಲೆ ಪರೀಕ್ಷೆ ನಡೆಸಬಾರದು ಎಂದರು.

ನಂತರ ಮಾತು ಮುಂದುವರೆಸಿದ ಅವರು, ಪರೀಕ್ಷೆಯ ರೂಪುರೇಷೆಯನ್ನು ಶಿಕ್ಷಣ ತಜ್ಞರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ ಪ್ರಜಾ ತಾಂತ್ರಿಕವಾಗಿ ರೂಪಿಸತಕ್ಕದ್ದು. ಕ್ವಾರಂಟೈನ್ ಕೇಂದ್ರಗಳಾಗಿ ಬಳಸಿದ ಶಾಲೆ- ಕಾಲೇಜು ಹಾಗೂ ಹಾಸ್ಟೆಲ್ ಕಟ್ಟಡಗಳನ್ನ ಸಂಪೂರ್ಣವಾಗಿ ಶುದ್ಧೀಕರಿಸಿ ಸ್ಯಾನಿಟೈಸ್ ಮಾಡಿದ ನಂತರವೇ ವಿದ್ಯಾರ್ಥಿಗಳಿಗೆ ಅದನ್ನ ನೀಡಬೇಕು ಎಂದು ಒತ್ತಾಯಿಸಿದರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.