ಹೊಸಪೇಟೆ: ಸಮಾನ ಕೆಲಸಕ್ಕೆ ಸಮಾನ ವೇತನವನ್ನು ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು, ಸಂಘದ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು.
ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಆಗ್ರಹ: ನೌಕರರ ಪ್ರತಿಭಟನೆ
ಗುತ್ತಿಗೆ, ಹೊರ ಗುತ್ತಿಗೆ ನೌಕರರಿಗೆ ವೇತನದಲ್ಲಿ ತಾರತಮ್ಯ ಮಾಡದೇ ಸಮಾನ ಕೆಲಸಕ್ಕೆ ಸಮಾನ ವೇತನವನ್ನು ನೀಡಬೇಕು ಎಂದು ಆಗ್ರಹಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ನೌಕರರು ಬೀದಿಗಿಳಿದಿದ್ದಾರೆ.
![ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಆಗ್ರಹ: ನೌಕರರ ಪ್ರತಿಭಟನೆ protest in hospet demanding equal pay for equal work](https://etvbharatimages.akamaized.net/etvbharat/prod-images/768-512-8984226-1002-8984226-1601381447447.jpg?imwidth=3840)
ಖಾಯಂ ನೌಕರರಿಗೆ ಒಳ್ಳೆಯ ವೇತನವನ್ನು ನೀಡಲಾಗುತ್ತಿದೆ. ಗುತ್ತಿಗೆ, ಹೊರ ಗುತ್ತಿಗೆ ನೌಕರರಿಗೆ ವೇತನದಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಎಲ್ಲಾ ಹುದ್ದೆಗಳಿಗೆ ವೇತನ, ಭತ್ಯೆಗಳು ಹಾಗೂ ವೇತನ ಶ್ರೇಣಿಯನ್ನು ನೀಡಬೇಕು ಎಂದು ಆಗ್ರಹಿಸಿದರು.
ಸೇವಾನುಭವಕ್ಕೆ ತಕ್ಕಂತೆ ಸೇವಾಂಕವನ್ನು ನೀಡಬೇಕು. ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರನ್ನು ಸೇವೆಯಿಂದ ಕೈ ಬಿಡಬಾರದು. ಸಣ್ಣ,ಪುಟ್ಟ ನೆಪಗಳನ್ನೊಡ್ಡಿ ಕೆಲಸದಿಂದ ತೆಗೆಯಬಾರದು. ರಜೆ ದಿನಗಳಲ್ಲಿ ಕಾರ್ಯನಿರ್ವಹಿಸಿದ್ರೆ ಪರ್ಯಾಯ ವೇತನ ಹಾಗೂ ರಜೆಯನ್ನು ನೀಡಬೇಕು ಎಂದು ಆಗ್ರಹಿಸಿದರು.
ಹೊಸಪೇಟೆ: ಸಮಾನ ಕೆಲಸಕ್ಕೆ ಸಮಾನ ವೇತನವನ್ನು ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು, ಸಂಘದ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು.
ಖಾಯಂ ನೌಕರರಿಗೆ ಒಳ್ಳೆಯ ವೇತನವನ್ನು ನೀಡಲಾಗುತ್ತಿದೆ. ಗುತ್ತಿಗೆ, ಹೊರ ಗುತ್ತಿಗೆ ನೌಕರರಿಗೆ ವೇತನದಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಎಲ್ಲಾ ಹುದ್ದೆಗಳಿಗೆ ವೇತನ, ಭತ್ಯೆಗಳು ಹಾಗೂ ವೇತನ ಶ್ರೇಣಿಯನ್ನು ನೀಡಬೇಕು ಎಂದು ಆಗ್ರಹಿಸಿದರು.
ಸೇವಾನುಭವಕ್ಕೆ ತಕ್ಕಂತೆ ಸೇವಾಂಕವನ್ನು ನೀಡಬೇಕು. ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರನ್ನು ಸೇವೆಯಿಂದ ಕೈ ಬಿಡಬಾರದು. ಸಣ್ಣ,ಪುಟ್ಟ ನೆಪಗಳನ್ನೊಡ್ಡಿ ಕೆಲಸದಿಂದ ತೆಗೆಯಬಾರದು. ರಜೆ ದಿನಗಳಲ್ಲಿ ಕಾರ್ಯನಿರ್ವಹಿಸಿದ್ರೆ ಪರ್ಯಾಯ ವೇತನ ಹಾಗೂ ರಜೆಯನ್ನು ನೀಡಬೇಕು ಎಂದು ಆಗ್ರಹಿಸಿದರು.