ETV Bharat / state

ಇಂದಿನಿಂದ ಶ್ರೀಕುಮಾರಸ್ವಾಮಿ ಜಾತ್ರೆ: ಕೋವಿಡ್​ ಷರತ್ತುಗಳು ಅನ್ವಯ! - ಶ್ರೀಕುಮಾರಸ್ವಾಮಿ ಜಾತ್ರೆಗೆ ಕೋವಿಡ್​ ನಿಯಮಗಳು ಅನ್ವಯ

ಬಳ್ಳಾರಿ ಜಿಲ್ಲೆಯ ಸಂಡೂರಿನ ಕುಮಾರಸ್ವಾಮಿ ಜಾತ್ರೆ ನವೆಂಬರ್ 30 ಹಾಗೂ ಡಿಸೆಂಬರ್ 1 ರಂದು ನಡೆಯಲಿದೆ. ಈ ಹಿನ್ನೆಲೆ ಜಾತ್ರೆಗ ಬರುವ ಸಾರ್ವಜನಿಕರು ಕೋವಿಡ್​ ನಿಯಮಗಳನ್ನು ಪಾಲಿಸುವುದು ಕಡ್ಡಾಯ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

sandoor sri shivkumar swami fair
ಬಳ್ಳಾರಿ
author img

By

Published : Nov 30, 2020, 8:46 AM IST

ಸಂಡೂರು(ಬಳ್ಳಾರಿ) : ಶ್ರೀ ಕುಮಾರಸ್ವಾಮಿ ಜಾತ್ರೆ ಇಂದಿನಿಂದ ಆರಂಭಗೊಂಡಿದ್ದು, ಕೋವಿಡ್​ ನಿಯಮಗಳನ್ನು ಕಡ್ಡಾಯವಾಗಿ ಭಕ್ತರು ಪಾಲನೆ ಮಾಡಬೇಕು ಎಂದು ದೇವಸ್ಥಾನದ ಆಡಳಿತ ಮಂಡಳಿ ಅಧಿಕಾರಿ ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲೆಯ ಸಂಡೂರಿನ ಕುಮಾರಸ್ವಾಮಿ ಜಾತ್ರೆ ನವೆಂಬರ್ 30 ಹಾಗೂ ಡಿಸೆಂಬರ್ 1 ರಂದು ನಡೆಯಲಿದೆ. ಕೊರೊನಾ ನಿಯಂತ್ರಣ ಹಿನ್ನೆಲೆ ಹಲವು ನಿರ್ಬಂಧಗಳನ್ನು ಜಾತ್ರೆಗೆ ವಿಧಿಸಲಾಗಿದೆ. ಜಾತ್ರೆಗೆ ಬರುವವರು ಮುಖಗವಸು ಧರಿಸಬೇಕಲ್ಲದೇ, ಅಂತರವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳಬೇಕು. ಥರ್ಮಲ್ ಸ್ಕ್ರೀನಿಂಗ್ ಮಾಡಿಸಿ ಹಾಗೂ ಸ್ಯಾನಿಟೈಸರ್ ಬಳಸಿ ನಂತರವೇ ದೇವಸ್ಥಾನದ ಒಳಗೆ ಬರಬೇಕು. ದೇವಸ್ಥಾನದಲ್ಲಿ ಪ್ರಸಾದ, ಕಾಯಿ, ಮಂಗಳಾರತಿಗೆ ಅವಕಾಶವಿರುವುದಿಲ್ಲ. 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ, 10 ವರ್ಷ ಒಳಗಿನ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ದೇವಸ್ಥಾನದಲ್ಲಿ ಪ್ರವೇಶವಿಲ್ಲ.

ಐದು ವರ್ಷದಲ್ಲಿ ಎರಡು ಬಾರಿ ಈ ಜಾತ್ರೆ ನಡೆಯಲಿದ್ದು, ಶಿವಯೋಗ ಹಾಗೂ ಕೃತಿಕಾ ನಕ್ಷತ್ರ ಕೂಡಿದ ಕಾರ್ತೀಕ ಪೌರ್ಣಿಮೆಯಂದು ಈ ಜಾತ್ರೆ ನಡೆಯುತ್ತದೆ. ಜಾತ್ರೆಗೆ ಈಗಾಗಲೇ ಭರದ ಸಿದ್ಧತೆಗಳು ಕೈಗೊಂಡಿದ್ದು, ದೇವಸ್ಥಾನಗಳಿಗೆ ವಿದ್ಯುತ್ ದೀಪದ ಅಲಂಕಾರ ಮಾಡಲಾಗಿದೆ. ದೇವಾಲಯಕ್ಕೆ ಹೋಗಲು ವಾಹನಗಳಿಗೆ ಅವಕಾಶ ಇರುವುದಿಲ್ಲ. ನಂದಿಹಳ್ಳಿಯಲ್ಲಿ ವಾಹನಗಳ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಂದ ದೇವಸ್ಥಾನಕ್ಕೆ ಭಕ್ತರು ಕಾಲ್ನಡಿಗೆಯಲ್ಲೇ ಬರಬೇಕು. ದೇವಸ್ಥಾನದ ಆವರಣದಲ್ಲಿ ಯಾವುದೇ ಅಂಗಡಿ, ಹೋಟೆಲ್​ಗಳಿಗೆ ಅವಕಾಶ ಕಲ್ಪಿಸಿಲ್ಲ ಮತ್ತು ದೇವಸ್ಥಾನದಲ್ಲಿ ಉಳಿದುಕೊಳ್ಳಲು ಅವಕಾಶ ಇರುವುದಿಲ್ಲ.

sandoor sri shivkumar swami fair
ಇಂದಿನಿಂದ ಶ್ರೀಕುಮಾರಸ್ವಾಮಿ ಜಾತ್ರೆ
ಕುಮಾರಸ್ವಾಮಿ ವಿಭೂತಿ ಬೆಟ್ಟದಿಂದ ಕಣಿ (ವಿಭೂತಿ) ಹೊರುವ ಕಮತೂರಿನ ಸೇವಕರಿಗೂ ನಿಯಮ ಕಡ್ಡಾಯ. ನಾಳೆ ದೇವಸ್ಥಾನದ ಮೇಲೆ ವಿಶೇಷ ಪಟ ಏರಿಸುವ ಕಾರ್ಯಕ್ರಮದ ನೇರಪ್ರಸಾರ ವೀಕ್ಷಿಸಲು ವಿಜಯ ಸರ್ಕಲ್, ಪುರಸಭೆ ಬಸ್ ನಿಲ್ದಾಣದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ.

ಸಂಡೂರು(ಬಳ್ಳಾರಿ) : ಶ್ರೀ ಕುಮಾರಸ್ವಾಮಿ ಜಾತ್ರೆ ಇಂದಿನಿಂದ ಆರಂಭಗೊಂಡಿದ್ದು, ಕೋವಿಡ್​ ನಿಯಮಗಳನ್ನು ಕಡ್ಡಾಯವಾಗಿ ಭಕ್ತರು ಪಾಲನೆ ಮಾಡಬೇಕು ಎಂದು ದೇವಸ್ಥಾನದ ಆಡಳಿತ ಮಂಡಳಿ ಅಧಿಕಾರಿ ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲೆಯ ಸಂಡೂರಿನ ಕುಮಾರಸ್ವಾಮಿ ಜಾತ್ರೆ ನವೆಂಬರ್ 30 ಹಾಗೂ ಡಿಸೆಂಬರ್ 1 ರಂದು ನಡೆಯಲಿದೆ. ಕೊರೊನಾ ನಿಯಂತ್ರಣ ಹಿನ್ನೆಲೆ ಹಲವು ನಿರ್ಬಂಧಗಳನ್ನು ಜಾತ್ರೆಗೆ ವಿಧಿಸಲಾಗಿದೆ. ಜಾತ್ರೆಗೆ ಬರುವವರು ಮುಖಗವಸು ಧರಿಸಬೇಕಲ್ಲದೇ, ಅಂತರವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳಬೇಕು. ಥರ್ಮಲ್ ಸ್ಕ್ರೀನಿಂಗ್ ಮಾಡಿಸಿ ಹಾಗೂ ಸ್ಯಾನಿಟೈಸರ್ ಬಳಸಿ ನಂತರವೇ ದೇವಸ್ಥಾನದ ಒಳಗೆ ಬರಬೇಕು. ದೇವಸ್ಥಾನದಲ್ಲಿ ಪ್ರಸಾದ, ಕಾಯಿ, ಮಂಗಳಾರತಿಗೆ ಅವಕಾಶವಿರುವುದಿಲ್ಲ. 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ, 10 ವರ್ಷ ಒಳಗಿನ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ದೇವಸ್ಥಾನದಲ್ಲಿ ಪ್ರವೇಶವಿಲ್ಲ.

ಐದು ವರ್ಷದಲ್ಲಿ ಎರಡು ಬಾರಿ ಈ ಜಾತ್ರೆ ನಡೆಯಲಿದ್ದು, ಶಿವಯೋಗ ಹಾಗೂ ಕೃತಿಕಾ ನಕ್ಷತ್ರ ಕೂಡಿದ ಕಾರ್ತೀಕ ಪೌರ್ಣಿಮೆಯಂದು ಈ ಜಾತ್ರೆ ನಡೆಯುತ್ತದೆ. ಜಾತ್ರೆಗೆ ಈಗಾಗಲೇ ಭರದ ಸಿದ್ಧತೆಗಳು ಕೈಗೊಂಡಿದ್ದು, ದೇವಸ್ಥಾನಗಳಿಗೆ ವಿದ್ಯುತ್ ದೀಪದ ಅಲಂಕಾರ ಮಾಡಲಾಗಿದೆ. ದೇವಾಲಯಕ್ಕೆ ಹೋಗಲು ವಾಹನಗಳಿಗೆ ಅವಕಾಶ ಇರುವುದಿಲ್ಲ. ನಂದಿಹಳ್ಳಿಯಲ್ಲಿ ವಾಹನಗಳ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಂದ ದೇವಸ್ಥಾನಕ್ಕೆ ಭಕ್ತರು ಕಾಲ್ನಡಿಗೆಯಲ್ಲೇ ಬರಬೇಕು. ದೇವಸ್ಥಾನದ ಆವರಣದಲ್ಲಿ ಯಾವುದೇ ಅಂಗಡಿ, ಹೋಟೆಲ್​ಗಳಿಗೆ ಅವಕಾಶ ಕಲ್ಪಿಸಿಲ್ಲ ಮತ್ತು ದೇವಸ್ಥಾನದಲ್ಲಿ ಉಳಿದುಕೊಳ್ಳಲು ಅವಕಾಶ ಇರುವುದಿಲ್ಲ.

sandoor sri shivkumar swami fair
ಇಂದಿನಿಂದ ಶ್ರೀಕುಮಾರಸ್ವಾಮಿ ಜಾತ್ರೆ
ಕುಮಾರಸ್ವಾಮಿ ವಿಭೂತಿ ಬೆಟ್ಟದಿಂದ ಕಣಿ (ವಿಭೂತಿ) ಹೊರುವ ಕಮತೂರಿನ ಸೇವಕರಿಗೂ ನಿಯಮ ಕಡ್ಡಾಯ. ನಾಳೆ ದೇವಸ್ಥಾನದ ಮೇಲೆ ವಿಶೇಷ ಪಟ ಏರಿಸುವ ಕಾರ್ಯಕ್ರಮದ ನೇರಪ್ರಸಾರ ವೀಕ್ಷಿಸಲು ವಿಜಯ ಸರ್ಕಲ್, ಪುರಸಭೆ ಬಸ್ ನಿಲ್ದಾಣದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.