ETV Bharat / state

ಖಾಸಗಿ ಶಾಲಾ ಶಿಕ್ಷಕರಿಗೆ ಆರ್ಥಿಕ ಸಹಾಯ ನೀಡಲು ಆಡಳಿತ ಮಂಡಳಿ ಒಕ್ಕೂಟ ಒತ್ತಾಯ

author img

By

Published : Oct 6, 2020, 12:30 PM IST

ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಆರ್​ಟಿಇ ಕಡೆಯಿಂದ ಸಹಾಯಧನ ನೀಡಬೇಕು ಎಂದು ಬಳ್ಳಾರಿ ಜಿಲ್ಲಾ ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ ಮನವಿ ಮಾಡಿದರು.

ಆಡಳಿತ ಮಂಡಳಿ ಒಕ್ಕೂಟ
ಆಡಳಿತ ಮಂಡಳಿ ಒಕ್ಕೂಟ

ಬಳ್ಳಾರಿ: ಖಾಸಗಿ ಶಾಲಾ ಶಿಕ್ಷಕರಿಗೆ ಸರ್ಕಾರದ ಕಡೆಯಿಂದ ಆರ್ಥಿಕ ಸಹಾಯ ನೀಡಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಆರ್​ಟಿಇ ಕಡೆಯಿಂದ ಸಂಪೂರ್ಣವಾಗಿ ಹಣ ಪಾವತಿ ಮಾಡಬೇಕು ಎಂದು ಬಳ್ಳಾರಿ ಜಿಲ್ಲಾ ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಅಧ್ಯಕ್ಷ ಮರಿಸ್ವಾಮಿರೆಡ್ಡಿ ಮನವಿ ಮಾಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಮಾತನಾಡಿದ ಅವರು, ಕೋವಿಡ್-19ನಿಂದ ಖಾಸಗಿ ಶಾಲಾ-ಕಾಲೇಜುಗಳು ಕಳೆದ ಮಾರ್ಚ್​ನಿಂದ ಮುಚ್ಚಲ್ಪಟ್ಟಿವೆ. 2020ರ ಸಾಲಿನಲ್ಲಿ ಶಾಲಾ ಶುಲ್ಕದಲ್ಲಿ 50ರಿಂದ 60ರಷ್ಟು ಮಾತ್ರ ಶುಲ್ಕ ಪಾವತಿಸಿದ್ದಾರೆ. ಯಾವುದೇ ಪರೀಕ್ಷೆಗಳು ಇಲ್ಲದೆ ಉತ್ತೀರ್ಣರಾಗಿದ್ದಾರೆ. ಮಾರ್ಚ್ 2019 - 2020ನೇ ಸಾಲಿನ ಶಾಲಾ ಶುಲ್ಕ ಪಾವತಿಯಾಗಿಲ್ಲ ಎಂದರು.

ಆರ್ಥಿಕ ಸಹಾಯ ನೀಡಲು ಆಡಳಿತ ಮಂಡಳಿ ಒಕ್ಕೂಟ ಮನವಿ

ಆರ್​ಟಿಇ ಕಾಯ್ದೆಯ ಅಡಿಯಲ್ಲಿ ದಾಖಲಾದ ವಿದ್ಯಾರ್ಥಿಗಳ ಶುಲ್ಕವು ಸರ್ಕಾರದಿಂದ ಫೆಬ್ರವರಿ 2020ರ ಅಂತ್ಯದೊಳಗೆ ಪಾವತಿಯಾಗುತ್ತಿತ್ತು. ಆದರೆ ಈ ವರ್ಷ ಶಾಲೆಗಳಿಗೆ ಮೊದಲನೇ ಕಂತು ಬಂದಿದೆ. ಆದರೆ ಎರಡನೇ ಹಂತದ ಕಂತುಗಳು ಇನ್ನೂ ಅನೇಕ ಶಾಲೆಗಳಿಗೆ ಪಾವತಿಯಾಗಿಲ್ಲ. ಇನ್ನು ಆನ್​ಲೈನ್ ಕ್ಲಾಸ್​ಗಳಿಗೂ 10ರಿಂದ 15 ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ. ಶುಲ್ಕ ಸಹ ಸರಿಯಾಗಿ ಪಾವತಿಸುತ್ತಿಲ್ಲ. ಇದರಿಂದಾಗಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರಿಗೆ ಸಂಬಳ ನೀಡಲು ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಆರ್ಥಿಕ ಸಹಾಯ ನೀಡಬೇಕು ಎಂದು ಮನವಿ ಮಾಡಿಕೊಂಡರು.

ನಂತರ ಮಾತನಾಡಿದ ಶಿಕ್ಷಕಿ ಗಾಯತ್ರಿ, ಕಳೆದ ಐದು ವರ್ಷಗಳಿಂದ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೋವಿಡ್ ವೈರಸ್​​​ನಿಂದ ಆರ್ಥಿಕ ಪರಿಸ್ಥಿತಿ ಸರಿಯಾಗಿಲ್ಲ. ಜೀವನ ಮಾಡುವುದು ಕಷ್ಟಕರವಾಗಿದೆ. ಸರ್ಕಾರದ ಕಡೆಯಿಂದ ಯಾವುದೇ ಸೌಲಭ್ಯ ದೊರೆತಿಲ್ಲ. ಖಾಸಗಿ ಶಾಲೆಯ ಶಿಕ್ಷಕರಿಗೆ ಆರ್ಥಿಕ ಸಹಾಯದೊಂದಿಗೆ ಪ್ಯಾಕೇಜ್ ನೀಡಬೇಕು ಎಂದು ಮನವಿ ಮಾಡಿದರು.

ಬಳ್ಳಾರಿ: ಖಾಸಗಿ ಶಾಲಾ ಶಿಕ್ಷಕರಿಗೆ ಸರ್ಕಾರದ ಕಡೆಯಿಂದ ಆರ್ಥಿಕ ಸಹಾಯ ನೀಡಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಆರ್​ಟಿಇ ಕಡೆಯಿಂದ ಸಂಪೂರ್ಣವಾಗಿ ಹಣ ಪಾವತಿ ಮಾಡಬೇಕು ಎಂದು ಬಳ್ಳಾರಿ ಜಿಲ್ಲಾ ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಅಧ್ಯಕ್ಷ ಮರಿಸ್ವಾಮಿರೆಡ್ಡಿ ಮನವಿ ಮಾಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಮಾತನಾಡಿದ ಅವರು, ಕೋವಿಡ್-19ನಿಂದ ಖಾಸಗಿ ಶಾಲಾ-ಕಾಲೇಜುಗಳು ಕಳೆದ ಮಾರ್ಚ್​ನಿಂದ ಮುಚ್ಚಲ್ಪಟ್ಟಿವೆ. 2020ರ ಸಾಲಿನಲ್ಲಿ ಶಾಲಾ ಶುಲ್ಕದಲ್ಲಿ 50ರಿಂದ 60ರಷ್ಟು ಮಾತ್ರ ಶುಲ್ಕ ಪಾವತಿಸಿದ್ದಾರೆ. ಯಾವುದೇ ಪರೀಕ್ಷೆಗಳು ಇಲ್ಲದೆ ಉತ್ತೀರ್ಣರಾಗಿದ್ದಾರೆ. ಮಾರ್ಚ್ 2019 - 2020ನೇ ಸಾಲಿನ ಶಾಲಾ ಶುಲ್ಕ ಪಾವತಿಯಾಗಿಲ್ಲ ಎಂದರು.

ಆರ್ಥಿಕ ಸಹಾಯ ನೀಡಲು ಆಡಳಿತ ಮಂಡಳಿ ಒಕ್ಕೂಟ ಮನವಿ

ಆರ್​ಟಿಇ ಕಾಯ್ದೆಯ ಅಡಿಯಲ್ಲಿ ದಾಖಲಾದ ವಿದ್ಯಾರ್ಥಿಗಳ ಶುಲ್ಕವು ಸರ್ಕಾರದಿಂದ ಫೆಬ್ರವರಿ 2020ರ ಅಂತ್ಯದೊಳಗೆ ಪಾವತಿಯಾಗುತ್ತಿತ್ತು. ಆದರೆ ಈ ವರ್ಷ ಶಾಲೆಗಳಿಗೆ ಮೊದಲನೇ ಕಂತು ಬಂದಿದೆ. ಆದರೆ ಎರಡನೇ ಹಂತದ ಕಂತುಗಳು ಇನ್ನೂ ಅನೇಕ ಶಾಲೆಗಳಿಗೆ ಪಾವತಿಯಾಗಿಲ್ಲ. ಇನ್ನು ಆನ್​ಲೈನ್ ಕ್ಲಾಸ್​ಗಳಿಗೂ 10ರಿಂದ 15 ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ. ಶುಲ್ಕ ಸಹ ಸರಿಯಾಗಿ ಪಾವತಿಸುತ್ತಿಲ್ಲ. ಇದರಿಂದಾಗಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರಿಗೆ ಸಂಬಳ ನೀಡಲು ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಆರ್ಥಿಕ ಸಹಾಯ ನೀಡಬೇಕು ಎಂದು ಮನವಿ ಮಾಡಿಕೊಂಡರು.

ನಂತರ ಮಾತನಾಡಿದ ಶಿಕ್ಷಕಿ ಗಾಯತ್ರಿ, ಕಳೆದ ಐದು ವರ್ಷಗಳಿಂದ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೋವಿಡ್ ವೈರಸ್​​​ನಿಂದ ಆರ್ಥಿಕ ಪರಿಸ್ಥಿತಿ ಸರಿಯಾಗಿಲ್ಲ. ಜೀವನ ಮಾಡುವುದು ಕಷ್ಟಕರವಾಗಿದೆ. ಸರ್ಕಾರದ ಕಡೆಯಿಂದ ಯಾವುದೇ ಸೌಲಭ್ಯ ದೊರೆತಿಲ್ಲ. ಖಾಸಗಿ ಶಾಲೆಯ ಶಿಕ್ಷಕರಿಗೆ ಆರ್ಥಿಕ ಸಹಾಯದೊಂದಿಗೆ ಪ್ಯಾಕೇಜ್ ನೀಡಬೇಕು ಎಂದು ಮನವಿ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.