ETV Bharat / state

ಕುರುಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಸೋಂಕಿತ ವಿದ್ಯಾರ್ಥಿನಿ ಪರೀಕ್ಷೆಗೆ ಹಾಜರು

author img

By

Published : Jul 19, 2021, 12:24 PM IST

ಇಂದಿನಿಂದ ರಾಜ್ಯದಲ್ಲಿ SSLC ಪರೀಕ್ಷೆ ಆರಂಭಗೊಂಡಿದ್ದು, ಬಳ್ಳಾರಿ ಹಾಗೂ ವಿಜಯನಗರದಲ್ಲಿ ಸಹ ಕೋವಿಡ್​ ಮಾರ್ಗಸೂಚಿ ಅನ್ವಯ ಪರೀಕ್ಷೆ ನಡೆಯುತ್ತಿದೆ. ಓರ್ವ ಕೋವಿಡ್​ ಸೋಂಕಿತ ವಿದ್ಯಾರ್ಥಿಗೂ ಸಹ ಶಿಕ್ಷಣ ಇಲಾಖೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದೆ.

sslc exam
ಎಸ್​ಎಸ್​ಎಲ್​ಸಿ ಪರೀಕ್ಷೆ

ಬಳ್ಳಾರಿ: ಗಣಿನಾಡು ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಬೆಳಗ್ಗೆ 10:30 ರಿಂದ ಎಸ್​ಎಸ್​ಎಲ್​​ಸಿ ಪರೀಕ್ಷೆ ಆರಂಭವಾಯಿತು. ಉಭಯ ಜಿಲ್ಲೆಗಳಲ್ಲಿ 222 ಪರೀಕ್ಷೆ ಕೇಂದ್ರಗಳನ್ನ ಸ್ಥಾಪಿಸಲಾಗಿದ್ದು, ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳಿಗೆ ನೂರಾರು ವಿದ್ಯಾರ್ಥಿಗಳು ಆಗಮಿಸಿ ಪರೀಕ್ಷೆ ಬರೆಗೆ ಹಾಜರಾದ್ರು.

ಕುರುಗೋಡಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿಂದು ಕೋವಿಡ್ ಸೋಂಕಿತ ಓರ್ವ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅನುಮತಿ ನೀಡಲಾಗಿದೆ ಎಂದು ಡಿಡಿಪಿಐ ಮಾಹಿತಿ ನೀಡಿದ್ದಾರೆ.

ಎಸ್​ಎಸ್​ಎಲ್​ಸಿ ಪರೀಕ್ಷೆ

ಉಭಯ ಜಿಲ್ಲೆಗಳಲ್ಲಿ 42,989 ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ಮುನ್ನ ಥರ್ಮಲ್ ಸ್ಕ್ರೀನಿಂಗ್ ಮಾಡಿಸಿಕೊಂಡು ಹಾಗೂ ಹ್ಯಾಂಡ್ ಸ್ಯಾನಿಟೈಸರ್ ಅನ್ನ ಕಡ್ಡಾಯವಾಗಿ ಹಚ್ಚಿಕೊಂಡೇ ಪರೀಕ್ಷಾ ಕೊಠಡಿಗೆ ಪ್ರವೇಶಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ವ್ಯವಸ್ಥೆ ಮಾಡಿದೆ. ಸಾಮಾಜಿಕ ಅಂತರ ಕಾಪಾಡಿಕೊಂಡು ಸರತಿ ಸಾಲಿನಲ್ಲಿ ವಿದ್ಯಾರ್ಥಿಗಳು ನಿಂತಿದ್ದ ದೃಶ್ಯಗಳು ಕಂಡುಬಂದವು.

ಪ್ರತಿ ಕೊಠಡಿಯಲ್ಲಿ 12 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಒಂದು ಟೇಬಲ್​​ಗೆ ಒಬ್ಬ ವಿದ್ಯಾರ್ಥಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಡಿಡಿಪಿಐ ಸಿ.ರಾಮಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ:SSLC Exam ಪ್ರಾರಂಭ: ಪರೀಕ್ಷಾ ಕೇಂದ್ರಗಳಿಗೆ ದಿಢೀರ್ ಭೇಟಿ ಕೊಟ್ಟ ಸಚಿವ ಸುರೇಶ್ ಕುಮಾರ್

ಬಳ್ಳಾರಿ: ಗಣಿನಾಡು ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಬೆಳಗ್ಗೆ 10:30 ರಿಂದ ಎಸ್​ಎಸ್​ಎಲ್​​ಸಿ ಪರೀಕ್ಷೆ ಆರಂಭವಾಯಿತು. ಉಭಯ ಜಿಲ್ಲೆಗಳಲ್ಲಿ 222 ಪರೀಕ್ಷೆ ಕೇಂದ್ರಗಳನ್ನ ಸ್ಥಾಪಿಸಲಾಗಿದ್ದು, ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳಿಗೆ ನೂರಾರು ವಿದ್ಯಾರ್ಥಿಗಳು ಆಗಮಿಸಿ ಪರೀಕ್ಷೆ ಬರೆಗೆ ಹಾಜರಾದ್ರು.

ಕುರುಗೋಡಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿಂದು ಕೋವಿಡ್ ಸೋಂಕಿತ ಓರ್ವ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅನುಮತಿ ನೀಡಲಾಗಿದೆ ಎಂದು ಡಿಡಿಪಿಐ ಮಾಹಿತಿ ನೀಡಿದ್ದಾರೆ.

ಎಸ್​ಎಸ್​ಎಲ್​ಸಿ ಪರೀಕ್ಷೆ

ಉಭಯ ಜಿಲ್ಲೆಗಳಲ್ಲಿ 42,989 ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ಮುನ್ನ ಥರ್ಮಲ್ ಸ್ಕ್ರೀನಿಂಗ್ ಮಾಡಿಸಿಕೊಂಡು ಹಾಗೂ ಹ್ಯಾಂಡ್ ಸ್ಯಾನಿಟೈಸರ್ ಅನ್ನ ಕಡ್ಡಾಯವಾಗಿ ಹಚ್ಚಿಕೊಂಡೇ ಪರೀಕ್ಷಾ ಕೊಠಡಿಗೆ ಪ್ರವೇಶಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ವ್ಯವಸ್ಥೆ ಮಾಡಿದೆ. ಸಾಮಾಜಿಕ ಅಂತರ ಕಾಪಾಡಿಕೊಂಡು ಸರತಿ ಸಾಲಿನಲ್ಲಿ ವಿದ್ಯಾರ್ಥಿಗಳು ನಿಂತಿದ್ದ ದೃಶ್ಯಗಳು ಕಂಡುಬಂದವು.

ಪ್ರತಿ ಕೊಠಡಿಯಲ್ಲಿ 12 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಒಂದು ಟೇಬಲ್​​ಗೆ ಒಬ್ಬ ವಿದ್ಯಾರ್ಥಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಡಿಡಿಪಿಐ ಸಿ.ರಾಮಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ:SSLC Exam ಪ್ರಾರಂಭ: ಪರೀಕ್ಷಾ ಕೇಂದ್ರಗಳಿಗೆ ದಿಢೀರ್ ಭೇಟಿ ಕೊಟ್ಟ ಸಚಿವ ಸುರೇಶ್ ಕುಮಾರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.