ETV Bharat / state

ರಾಜ್ಯದ 100 ದೇವಾಲಯಗಳಲ್ಲಿ ಸರ್ಕಾರದಿಂದ ಸಾವಿರಕ್ಕೂ ಹೆಚ್ಚು ಸಾಮೂಹಿಕ ವಿವಾಹದ ಗುರಿ

author img

By

Published : Nov 6, 2019, 11:15 PM IST

ಮುಜರಾಯಿ ಇಲಾಖೆ ವತಿಯಿಂದ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಸಾಮೂಹಿಕ ವಿವಾಹದ ಗುರಿಯನ್ನು ಹೊಂದಲಾಗಿದೆಯೆಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಒಂದು ಸಾವಿರಕ್ಕೂ ಅಧಿಕ ಸಾಮೂಹಿಕ ವಿವಾಹದ ಗುರಿ: ಶ್ರೀನಿವಾಸ ಪೂಜಾರಿ ಭರವಸೆ

ಬಳ್ಳಾರಿ: ಮುಜರಾಯಿ ಇಲಾಖೆ ವತಿಯಿಂದ ಒಂದು ಸಾವಿರಕ್ಕೂ ಹೆಚ್ಚು ಸಾಮೂಹಿಕ ವಿವಾಹಗಳನ್ನು ನೆರವೇರಿಸುವ ಗುರಿಯನ್ನು ಹೊಂದಲಾಗಿದೆ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಒಂದು ಸಾವಿರಕ್ಕೂ ಅಧಿಕ ಸಾಮೂಹಿಕ ವಿವಾಹದ ಗುರಿ: ಶ್ರೀನಿವಾಸ ಪೂಜಾರಿ ಭರವಸೆ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಆಯೋಜಿಸಿದ್ದ ಮುಜರಾಯಿ ಹಾಗೂ ಮೀನುಗಾರಿಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 190ಕ್ಕೂ ಅಧಿಕ ಎ ದರ್ಜೆಯ ದೇಗುಲಗಳಿವೆ. ಆ ಪೈಕಿ ನೂರು ದೇಗುಲಗಳಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ ಎಂದರು.

ಮದುವೆ ಒಂದಕ್ಕೆ ಕನಿಷ್ಠ 40,000 ರೂ.ಗಳನ್ನು ವ್ಯಯ ಮಾಡಲಾಗುವುದು, ವಧುವಿಗೆ ಮಾಂಗಲ್ಯ ಸೇರಿದಂತೆ ಇತರೆ ಖರ್ಚಿಗಾಗಿ 10,000 ನಗದನ್ನು ನೀಡಲಾಗುವುದು. ವರನ ಬಟ್ಟೆ ಸೇರಿದಂತೆ ಇನ್ನಿತರೆ ಖರೀದಿಗಾಗಿ 5,000ರೂ. ಗಳನ್ನು ನೀಡಲಾಗುವುದೆಂದರು. ಮೊದಲ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರನ್ನಾಗಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಪಾದಂಗಳವರು, ಆರ್ಟ್ ಆಫ್ ಲಿವಿಂಗ್​ನ ರವಿಶಂಕರ ಗುರೂಜಿ, ಇನ್ಫೋಸಿಸ್ ಕಂಪನಿಯ ಮುಖ್ಯಸ್ಥೆ ಸುಧಾಮೂರ್ತಿ ಅವರನ್ನು ಆಹ್ವಾನಿಸಲಾಗುವುದೆಂದು ಸಚಿವರು ಮಾಹಿತಿ ನೀಡಿದ್ರು.

ಬಳ್ಳಾರಿ: ಮುಜರಾಯಿ ಇಲಾಖೆ ವತಿಯಿಂದ ಒಂದು ಸಾವಿರಕ್ಕೂ ಹೆಚ್ಚು ಸಾಮೂಹಿಕ ವಿವಾಹಗಳನ್ನು ನೆರವೇರಿಸುವ ಗುರಿಯನ್ನು ಹೊಂದಲಾಗಿದೆ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಒಂದು ಸಾವಿರಕ್ಕೂ ಅಧಿಕ ಸಾಮೂಹಿಕ ವಿವಾಹದ ಗುರಿ: ಶ್ರೀನಿವಾಸ ಪೂಜಾರಿ ಭರವಸೆ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಆಯೋಜಿಸಿದ್ದ ಮುಜರಾಯಿ ಹಾಗೂ ಮೀನುಗಾರಿಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 190ಕ್ಕೂ ಅಧಿಕ ಎ ದರ್ಜೆಯ ದೇಗುಲಗಳಿವೆ. ಆ ಪೈಕಿ ನೂರು ದೇಗುಲಗಳಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ ಎಂದರು.

ಮದುವೆ ಒಂದಕ್ಕೆ ಕನಿಷ್ಠ 40,000 ರೂ.ಗಳನ್ನು ವ್ಯಯ ಮಾಡಲಾಗುವುದು, ವಧುವಿಗೆ ಮಾಂಗಲ್ಯ ಸೇರಿದಂತೆ ಇತರೆ ಖರ್ಚಿಗಾಗಿ 10,000 ನಗದನ್ನು ನೀಡಲಾಗುವುದು. ವರನ ಬಟ್ಟೆ ಸೇರಿದಂತೆ ಇನ್ನಿತರೆ ಖರೀದಿಗಾಗಿ 5,000ರೂ. ಗಳನ್ನು ನೀಡಲಾಗುವುದೆಂದರು. ಮೊದಲ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರನ್ನಾಗಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಪಾದಂಗಳವರು, ಆರ್ಟ್ ಆಫ್ ಲಿವಿಂಗ್​ನ ರವಿಶಂಕರ ಗುರೂಜಿ, ಇನ್ಫೋಸಿಸ್ ಕಂಪನಿಯ ಮುಖ್ಯಸ್ಥೆ ಸುಧಾಮೂರ್ತಿ ಅವರನ್ನು ಆಹ್ವಾನಿಸಲಾಗುವುದೆಂದು ಸಚಿವರು ಮಾಹಿತಿ ನೀಡಿದ್ರು.

Intro:ಒಂದು ಸಾವಿರಕ್ಕೂ ಅಧಿಕ ಸಾಮೂಹಿಕ ವಿವಾಹದ ಗುರಿ: ಮುಜರಾಯಿ ಸಚಿವ ಶ್ರೀನಿವಾಸ ಪೂಜಾರಿ ಭರವಸೆ
ಬಳ್ಳಾರಿ: ಮುಜರಾಯಿ ಇಲಾಖೆ ವತಿಯಿಂದ ಸರಿಸುಮಾರು ಒಂದು ಸಾವಿರಕ್ಕೂ ಅಧಿಕ ಸಾಮೂಹಿಕ ವಿವಾಹದ ಗುರಿ ಯನ್ನು ಹೊಂದಲಾಗಿದೆ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭರವಸೆ ನೀಡಿದ್ದಾರೆ.
ಬಳ್ಳಾರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಆಯೋಜಿಸಿದ್ದ ಮುಜರಾಯಿ ಹಾಗೂ ಮೀನುಗಾರಿಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಸಚಿವ ಪೂಜಾರಿ, ರಾಜ್ಯದಲ್ಲಿ 190ಕ್ಕೂ ಅಧಿಕ ಎ ದರ್ಜೆಯ ದೇಗುಲಗಳಿವೆ. ಆ ಪೈಕಿ ನೂರು ದೇಗುಲ ಗಳಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ. ಅಂದಾಜು ಸಾವಿರ ಮದುವೆಗಳನ್ನು ಮಾಡಿ ಸಲು ಉದ್ದೇಶಿಸಲಾಗಿದೆಂದರು.


Body:ಮದುವೆ ಒಂದಕ್ಕೆ ಕನಿಷ್ಠ 40,000 ರೂ.ಗಳನ್ನು ವ್ಯಯ ಮಾಡಲಾಗುವುದು. ವಧುವಿಗೆ ಮಾಂಗಲ್ಯ ಸೇರಿದಂತೆ
ಇತರೆ ಖರ್ಚಿಗಾಗಿ 10,000 ನಗದನ್ನು ನೀಡಲಾಗುವುದು. ವರನ ಬಟ್ಟೆ ಸೇರಿದಂತೆ ಇನ್ನಿತರೆ ಖರೀದಿಗಾಗಿ 5,000ರೂ. ಗಳನ್ನು ನೀಡಲಾಗುವುದೆಂದರು.
ಮೊದಲ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರನ್ನಾಗಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆ, ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಪಾದಂಗಳವರು, ಆರ್ಟ್ ಆಫ್ ಲಿವಿಂಗ್ ನ ರವಿಶಂಕರ ಗುರೂಜಿ, ಇನ್ಫೋಸಿಸ್ ಕಂಪನಿಯ ಸುಧಾಮೂರ್ತಿ ಅವರನ್ನು ಆಹ್ವಾನಿಸಲಾಗುವುದು ಎಂದರು.


Conclusion:ನನಗೆ ವಿಶ್ವಾಸವಿದೆ. ಅಂದಾಜು ಸಾವಿರ ಮದುವೆಗಳನ್ನು ಮುಜರಾಯಿ ಇಲಾಖೆಯಿಂದ ನಡೆಯಲಿವೆ ಎಂದು ಸಚಿವ ಪೂಜಾರಿ ಆಶಾಭಾವನೆ ವ್ಯಕ್ತಪಡಿಸಿದ್ರು.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

KN_BLY_6_MINISTER_KOTA_SREENIVAS_BYTE_VSL_7203310
ETV Bharat Logo

Copyright © 2024 Ushodaya Enterprises Pvt. Ltd., All Rights Reserved.