ಬಳ್ಳಾರಿ: ಜಿಲ್ಲೆಯಲ್ಲಿ ನಡೆದ ಆದಿ ದೇವತೆ ಶ್ರೀ ಕನಕ ದುರ್ಗಮ್ಮ ದೇವಿಯ ಸಿಡಿಬಂಡಿ ಉತ್ಸವ ಅದ್ಧೂರಿಯಾಗಿ ಜರುಗಿತು. ಉತ್ಸವದಲ್ಲಿ ಗ್ರಾಮಸ್ಥರು ಸೇರಿದಂತೆ ಬೇರೆ ಬೇರೆ ಊರುಗಳಿಂದ ಆಗಮಿಸಿದ್ದ ಭಕ್ತರು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಸಿಡಿ ಬಂಡಿ ಉತ್ಸವದಲ್ಲಿ ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಭಾಗವಹಿಸಿ ಗಮನ ಸೆಳೆದವು. ಭಜನಾ ಪದ ಹಾಡುತ್ತ ಭಕ್ತರು ಹೆಜ್ಜೆ ಹಾಕಿದರು. ಡೊಳ್ಳು, ವೀರಭದ್ರ ಕುಣಿತ ಉತ್ಸವಕ್ಕೆ ಮೆರಗು ತಂದವು. ಭಕ್ತರು ತಮ್ಮ ಇಷ್ಟಾರ್ಥಗಳನ್ನು ಈಡೇರಿಸುವಂತೆ ದೇವಿಗೆ ಬೇಡಿಕೊಂಡು ಹರಕೆ ಕಟ್ಟಿಕೊಂಡರೆ, ಇನ್ನೂ ಕೆಲವರು ತಮ್ಮ ಇಷ್ಟಾರ್ಥಗಳು ಈಡೇರಿದ್ದಕ್ಕೆ ಹರಕೆ ತೀರಿಸಿದರು.