ETV Bharat / state

ಬಸ್​-ಬೈಕ್ ನಡುವೆ ಭೀಕರ ಅಪಘಾತ: ಯುವಕರಿಬ್ಬರ ದುರ್ಮರಣ - ಹೊಸಪೇಟೆ ಗಾದಿಗನೂರಿನ ಬಳಿ ಅಪಘಾತ

ಸಾರಿಗೆ ಸಂಸ್ಥೆ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ, ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

two-bike-riders-killed-in-road-accident-near-hosapete
ಬಸ್ ಮತ್ತು ಬೈಕ್ ನಡುವೆ ಅಪಘಾತ
author img

By

Published : May 4, 2022, 10:52 PM IST

Updated : May 5, 2022, 6:36 AM IST

ವಿಜಯನಗರ: ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾದಿಗನೂರು ಬಳಿ ಸಾರಿಗೆ ಸಂಸ್ಥೆ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ. ಬಸ್ ಗುದ್ದಿದ ರಭಸಕ್ಕೆ ಯುವಕ ಕಿರಣ್ (23) ಸ್ಥಳದಲ್ಲೇ ಸಾವನ್ನಪ್ಪಿದರೆ, ವೆಂಕಟೇಶ (25) ಎಂಬಾತ ಆಸ್ಪತ್ರೆಗೆ ಸಾಗಿಸುವ ವೇಳೆ ಅಸುನೀಗಿದ್ದಾನೆ.

ಸಾರಿಗೆ ಬಸ್ ಹೊಸಪೇಟೆಯಿಂದ ಬಳ್ಳಾರಿಗೆ ತೆರಳುತ್ತಿತ್ತು. ಬೈಕ್ ಸವಾರರು ಗಾದಿಗನೂರಿನ ಜಾತ್ರೆಯಲ್ಲಿ ಊಟ ಮುಗಿಸಿ, ತಮ್ಮ ಸ್ವಗ್ರಾಮ ಕಾಕುಬಾಳುಗೆ ಬೈಕ್​ನಲ್ಲಿ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಹೊಸಪೇಟೆಯ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮೃತದೇಹ ಆಸ್ಪತ್ರೆಗೆ ಸಾಗಿಸಿದರು. ಈ ಬಗ್ಗೆ ಗ್ರಾಮೀಣ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಮಳೆಯ ಅವಾಂತರ : ಮರ ಬಿದ್ದು ವ್ಯಕ್ತಿ ಸಾವು

ವಿಜಯನಗರ: ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾದಿಗನೂರು ಬಳಿ ಸಾರಿಗೆ ಸಂಸ್ಥೆ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ. ಬಸ್ ಗುದ್ದಿದ ರಭಸಕ್ಕೆ ಯುವಕ ಕಿರಣ್ (23) ಸ್ಥಳದಲ್ಲೇ ಸಾವನ್ನಪ್ಪಿದರೆ, ವೆಂಕಟೇಶ (25) ಎಂಬಾತ ಆಸ್ಪತ್ರೆಗೆ ಸಾಗಿಸುವ ವೇಳೆ ಅಸುನೀಗಿದ್ದಾನೆ.

ಸಾರಿಗೆ ಬಸ್ ಹೊಸಪೇಟೆಯಿಂದ ಬಳ್ಳಾರಿಗೆ ತೆರಳುತ್ತಿತ್ತು. ಬೈಕ್ ಸವಾರರು ಗಾದಿಗನೂರಿನ ಜಾತ್ರೆಯಲ್ಲಿ ಊಟ ಮುಗಿಸಿ, ತಮ್ಮ ಸ್ವಗ್ರಾಮ ಕಾಕುಬಾಳುಗೆ ಬೈಕ್​ನಲ್ಲಿ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಹೊಸಪೇಟೆಯ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮೃತದೇಹ ಆಸ್ಪತ್ರೆಗೆ ಸಾಗಿಸಿದರು. ಈ ಬಗ್ಗೆ ಗ್ರಾಮೀಣ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಮಳೆಯ ಅವಾಂತರ : ಮರ ಬಿದ್ದು ವ್ಯಕ್ತಿ ಸಾವು

Last Updated : May 5, 2022, 6:36 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.