ಹೊಸಪೇಟೆ (ಬಳ್ಳಾರಿ): ತಾಲೂಕಿನ ರಾಷ್ಟ್ರೀಯ ಹೆದ್ದಾರಿ-50ರ ಟನಲ್ ಬಳಿ ನಡೆದ ಅಪಘಾತದಲ್ಲಿ ಹೊಸಪೇಟೆಯ ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಸುನಂದಾ ಸ್ವಲ್ಪದರಲ್ಲೇ ಪಾರಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿ-50ರ ಟನಲ್ ಬಳಿ ಶಿಕ್ಷಣಾಧಿಕಾರಿ ಪಿ. ಸುನಂದಾ ಚಲಿಸುತ್ತಿದ್ದ ಜೀಪ್ಗೆ ಅಪರಿಚಿತ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಜೀಪ್ ಪಲ್ಟಿಯಾಗಿದೆ ಬಿದ್ದಿದೆ.
ಅಪಘಾತದಲ್ಲಿ ಬಿಇಒ ಸುನಂದಾ ಸೇರಿದಂತೆ ನಾಲ್ವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.