ETV Bharat / state

ಶ್ರೀಕೃಷ್ಣದೇವರಾಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ, ಸಿಡಿದೆದ್ದ ಸಿಬ್ಬಂದಿ - undefined

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ವಿಶ್ವವಿದ್ಯಾನಿಲಯದ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಂಡಿಕೇಟ್ ಸದಸ್ಯರು
author img

By

Published : May 29, 2019, 11:47 AM IST

ಬಳ್ಳಾರಿ: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನೇಮಕಾತಿಯಲ್ಲಿ ಭ್ರಷ್ಟಾಚಾರ, ಅಕ್ರಮ ನಡೆಯುತ್ತಿದೆ. ಇದನ್ನು ತಡೆಗಟ್ಟಲು ವಿವಿಯ ಮಾಜಿ ಸಿಂಡಿಕೇಟ್ ಸದಸ್ಯರು ಹಾಗೂ ಅನ್ಯಾಯಕ್ಕೊಳಗಾದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತೇವೆ ಎಂದು ಎಬಿವಿಪಿ ಕಾರ್ಯಕರ್ತ ಅಡವಿಸ್ವಾಮಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಂಡಿಕೇಟ್ ಸದಸ್ಯ ಕೆ.ಹೆಚ್. ಹರಿಕುಮಾರ್

ನಗರದ ಖಾಸಗಿ ಹೊಟೇಲ್​ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಂಡಿಕೇಟ್ ಸದಸ್ಯ ಕೆ.ಹೆಚ್.ಹರಿಕುಮಾರ್ ವಿವಿಯಲ್ಲಿ ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಇಡೀ ರಾಜ್ಯವೇ ಮಾತನಾಡುತ್ತಿದ್ದರೂ, ಯಾವ ಜನಪ್ರತಿನಿಧಿಯೂ ತಲೆಕೆಡಸಿಕೊಂಡಂತೆ ಕಾಣುತ್ತಿಲ್ಲ. ಆದ್ದರಿಂದ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಅಧ್ಯಾಪಕರು, ಬೋಧಕೇತರ ಸಿಬ್ಬಂದಿ,ವಿದ್ಯಾರ್ಥಿಗಳು, ಸಂಘಟನೆಗಳು ವ್ಯವಸ್ಥೆ ಬಗ್ಗೆ ನಂಬಿಕೆ ಕಳೆದುಕೊಳ್ಳುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.

ಮೇ ತಿಂಗಳಲ್ಲಿ Non 371 ಜೆ ಎಂದು ಗೊಂದಲ:

ಐದು ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಇದು ಯಾವುದೇ ಹಳೆಯ ಮರು ಅಧಿಸೂಚನೆಯಾಗಿರುವುದಿಲ್ಲ. ಹೊಸ ಅಧಿಸೂಚನೆಯಾಗಿರುತ್ತದೆ. 371ಜೆ ಯೇತರ ಹುದ್ದೆಗಳೆಂದು ಅಧಿಸೂಚನೆಯಲ್ಲಿ ನಮೂದಿಸಿ, 371ಜೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಗೊಂದಲ ಉಂಟಾಗುವಂತೆ ಉದ್ದೇಶ ಪೂರ್ವಕವಾಗಿ ಮಾಡಿದ್ದಾರೆ ಎಂದು ದೂರಿದ್ದಾರೆ.

ಏಕಪಕ್ಷೀಯ ನಿರ್ಧಾರ :

25 ಮೇ 2019 ರಂದು ವಿವಿಯ ಸಿಂಡಿಕೇಟ್ ಸದಸ್ಯರಾದ ಡಾ.ಕೆ.ಆರ್ ವೇಣುಗೋಪಾಲರೆಡ್ಡಿ ಗೈರು ಹಾಜರಾದ ಕಾರಣ , ತಕ್ಷಣ ಏಕಪಕ್ಷೀಯವಾಗಿ ವಿವಿಯ ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕ ಡಾ. ಶಾಂತನಾಯ್ಕ್ ಅವರನ್ನು ಸಿಂಡಿಕೇಟ್ ಸದಸ್ಯರನ್ನಾಗಿ ಆಯ್ಕೆ ಮಾಡಿ, ಅದೇ ಆದೇಶ ಪತ್ರ ನೀಡಿ ದಿಢೀರ್ ಸಿಂಡಿಕೇಟ್ ಸಭೆಯಲ್ಲಿ ನೇಮಕಾತಿಗೆ ಅನುಮತಿ ಪಡೆದುಕೊಂಡಿದ್ದಾರೆ.

ರಾಜ್ಯಪಾಲರಿಗೆ ಎಬಿವಿಪಿ ಮೊರೆ :

ವಿವಿಯ ನೇಮಕಾತಿಯಲ್ಲಿ ಭ್ರಷ್ಟಾಚಾರ, ಅಕ್ರಮ ನಡೆಯುತ್ತಿದೆ ಅದನ್ನು ತಡೆಗಟ್ಟಲು ವಿವಿಯ ಮಾಜಿ ಸಿಂಡಿಕೇಟ್ ಸದಸ್ಯರು ಹಾಗೂ ಅನ್ಯಾಯಕ್ಕೆ ಒಳಗಾದ ಬೋಧಕ ಮತ್ತು ಬೋಧಕೇತರ ಅಭ್ಯರ್ಥಿ ಕರ್ನಾಟಕ ರಾಜ್ಯದ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತೇವೆ ಹಾಗೂ ನೇಮಕಾತಿ ಪ್ರಕ್ರಿಯೆಯನ್ನು ತಡೆ ಹಿಡಿಯಬೇಕೆಂದು ಮನವಿ ಮಾಡುತ್ತೇವೆ ಎಂದಿದ್ದಾರೆ.

ಬಳ್ಳಾರಿ: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನೇಮಕಾತಿಯಲ್ಲಿ ಭ್ರಷ್ಟಾಚಾರ, ಅಕ್ರಮ ನಡೆಯುತ್ತಿದೆ. ಇದನ್ನು ತಡೆಗಟ್ಟಲು ವಿವಿಯ ಮಾಜಿ ಸಿಂಡಿಕೇಟ್ ಸದಸ್ಯರು ಹಾಗೂ ಅನ್ಯಾಯಕ್ಕೊಳಗಾದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತೇವೆ ಎಂದು ಎಬಿವಿಪಿ ಕಾರ್ಯಕರ್ತ ಅಡವಿಸ್ವಾಮಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಂಡಿಕೇಟ್ ಸದಸ್ಯ ಕೆ.ಹೆಚ್. ಹರಿಕುಮಾರ್

ನಗರದ ಖಾಸಗಿ ಹೊಟೇಲ್​ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಂಡಿಕೇಟ್ ಸದಸ್ಯ ಕೆ.ಹೆಚ್.ಹರಿಕುಮಾರ್ ವಿವಿಯಲ್ಲಿ ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಇಡೀ ರಾಜ್ಯವೇ ಮಾತನಾಡುತ್ತಿದ್ದರೂ, ಯಾವ ಜನಪ್ರತಿನಿಧಿಯೂ ತಲೆಕೆಡಸಿಕೊಂಡಂತೆ ಕಾಣುತ್ತಿಲ್ಲ. ಆದ್ದರಿಂದ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಅಧ್ಯಾಪಕರು, ಬೋಧಕೇತರ ಸಿಬ್ಬಂದಿ,ವಿದ್ಯಾರ್ಥಿಗಳು, ಸಂಘಟನೆಗಳು ವ್ಯವಸ್ಥೆ ಬಗ್ಗೆ ನಂಬಿಕೆ ಕಳೆದುಕೊಳ್ಳುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.

ಮೇ ತಿಂಗಳಲ್ಲಿ Non 371 ಜೆ ಎಂದು ಗೊಂದಲ:

ಐದು ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಇದು ಯಾವುದೇ ಹಳೆಯ ಮರು ಅಧಿಸೂಚನೆಯಾಗಿರುವುದಿಲ್ಲ. ಹೊಸ ಅಧಿಸೂಚನೆಯಾಗಿರುತ್ತದೆ. 371ಜೆ ಯೇತರ ಹುದ್ದೆಗಳೆಂದು ಅಧಿಸೂಚನೆಯಲ್ಲಿ ನಮೂದಿಸಿ, 371ಜೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಗೊಂದಲ ಉಂಟಾಗುವಂತೆ ಉದ್ದೇಶ ಪೂರ್ವಕವಾಗಿ ಮಾಡಿದ್ದಾರೆ ಎಂದು ದೂರಿದ್ದಾರೆ.

ಏಕಪಕ್ಷೀಯ ನಿರ್ಧಾರ :

25 ಮೇ 2019 ರಂದು ವಿವಿಯ ಸಿಂಡಿಕೇಟ್ ಸದಸ್ಯರಾದ ಡಾ.ಕೆ.ಆರ್ ವೇಣುಗೋಪಾಲರೆಡ್ಡಿ ಗೈರು ಹಾಜರಾದ ಕಾರಣ , ತಕ್ಷಣ ಏಕಪಕ್ಷೀಯವಾಗಿ ವಿವಿಯ ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕ ಡಾ. ಶಾಂತನಾಯ್ಕ್ ಅವರನ್ನು ಸಿಂಡಿಕೇಟ್ ಸದಸ್ಯರನ್ನಾಗಿ ಆಯ್ಕೆ ಮಾಡಿ, ಅದೇ ಆದೇಶ ಪತ್ರ ನೀಡಿ ದಿಢೀರ್ ಸಿಂಡಿಕೇಟ್ ಸಭೆಯಲ್ಲಿ ನೇಮಕಾತಿಗೆ ಅನುಮತಿ ಪಡೆದುಕೊಂಡಿದ್ದಾರೆ.

ರಾಜ್ಯಪಾಲರಿಗೆ ಎಬಿವಿಪಿ ಮೊರೆ :

ವಿವಿಯ ನೇಮಕಾತಿಯಲ್ಲಿ ಭ್ರಷ್ಟಾಚಾರ, ಅಕ್ರಮ ನಡೆಯುತ್ತಿದೆ ಅದನ್ನು ತಡೆಗಟ್ಟಲು ವಿವಿಯ ಮಾಜಿ ಸಿಂಡಿಕೇಟ್ ಸದಸ್ಯರು ಹಾಗೂ ಅನ್ಯಾಯಕ್ಕೆ ಒಳಗಾದ ಬೋಧಕ ಮತ್ತು ಬೋಧಕೇತರ ಅಭ್ಯರ್ಥಿ ಕರ್ನಾಟಕ ರಾಜ್ಯದ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತೇವೆ ಹಾಗೂ ನೇಮಕಾತಿ ಪ್ರಕ್ರಿಯೆಯನ್ನು ತಡೆ ಹಿಡಿಯಬೇಕೆಂದು ಮನವಿ ಮಾಡುತ್ತೇವೆ ಎಂದಿದ್ದಾರೆ.

Intro:ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮಾಜಿ ಸಿಂಡಿಕೇಟ್ ಸದಸ್ಯರು, ಬೋಧನೆ ಮತ್ತು ಬೋಧಕೇತರ ನೇಮಕಾತಿಯಲ್ಲಿ ಅನ್ಯಾಯಕ್ಕೊಳಗಾದ ಅಭ್ಯರ್ಥಿಗಳು ವಿವಿಯ ಭ್ರಷ್ಟಚಾರ, ಅಕ್ರಮಕ್ಕೆ ಸಂಭಂದಿಸಿದಂತೆ ರಾಜ್ಯಪಾಲರಿಗೆ ಭೇಟಿ ಮಾಡಿ ಮನವಿ ಸಲ್ಲಿಸುತ್ತವೆ ಹಾಗೇ ಸರ್ಕಾರ ಮತ್ತು ರಾಜ್ಯಪಾಲರು ಮಧ್ಯಪ್ರವೇಶ ಮಾಡಿ ನೇಮಕಾತಿ ಪ್ರಕ್ರಿಯೆಯನ್ನು ತಡೆ ಹಿಡಿಯಬೇಕೆಂದು ಎಬಿವಿಪಿ ನೇತೃತ್ವದಲ್ಲಿ ಮನವಿ ಸಲ್ಲಿಸುತ್ತೇವೆ ಎಂದು ಎಬಿವಿಪಿ ಕಾರ್ಯಕರ್ತ ಅಡವಿಸ್ವಾಮಿ ತಿಳಿಸಿದರು.


Body:ನಗರದ ಖಾಸಗಿ ಹೋಟಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಂಡಿಕೇಟ್ ಸದಸ್ಯ ಕೆ.ಹೆಚ್. ಹರಿಕುಮಾರ್ ಅವರು ವಿಜಯ ನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಇಡೀ ರಾಜ್ಯಾದ್ಯಂತ ವಿವಿಯ ಹೆಸರು ಹರಿದಾಡುತ್ತಿದ್ದರೂ ಯಾವ ಜನ ಪ್ರತಿನಿಧಿಯು ತಲೆಕೆಡಸಿಕೊಂಡಂತೆ ಕಾಣುತ್ತಿಲ್ಲ. ಆದ್ದರಿಂದ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಅಧ್ಯಾಪಕರು, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಸಂಘಟನೆಗಳು ಈ ವ್ಯವಸ್ಥೆ ಬಗ್ಗೆ ನಂಬಿಕೆ ಕಳೆದುಕೊಳ್ಳುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಮೀಸಲಾತಿ ಪರಿಗಣಿಸಿ, ಉತ್ತಮ ಗುಣಮಟ್ಟದ ಮತ್ತು ಅರ್ಹತೆಯನ್ನು ಹೊಂದಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿ ಎಂದು ತಿಳಿಸಿದರು.

ನಂತರ ಮಾತನಾಡಿದ ಎಬಿವಿಪಿ ಕಾರ್ಯಕರ್ತ ಅಡವಿಸ್ವಾಮಿ ವಿವಿಗೆ ಗೆ ಸಂಭಂದವಿರದ ಇರುವ ಪನ್ನರಾಜ್ ಮತ್ತು ರಾಜಶೇಖರ್ ಮೊಲಾಲಿ ಅಂತ ವ್ಯಕ್ತಿಗಳನ್ನು ವಿವಿಯಲ್ಲಿ ಇಂದು ಏಕೆ ? ಸಭೆಗೆ ಆಹ್ವಾನಿಸಿ ಉದ್ದೇಶವೇನು ?

ನಿನ್ನೆ ದಿನ ದಿಡಿರನೇ ಬೋಧಕೇತರ 15 ಸಿಬ್ಬಂದಿಗಳನ್ನು ಏಕೆ ? ವರ್ಗಾವಣೆ ಮಾಡಿರುವ ಉದ್ದೇಶ ಏನು ?

2016 ರಲ್ಲಿ ರಾಜ್ಯಪಾಲರು ಕುಲಪತಿಗಳ ಅಧಿಕಾರ ಅವಧಿ ಮುಗಿಯುವ ಆರು ತಿಂಗಳ ಮುಂಚಿತವಾಗಿ ನೇಮಕಾತಿ ಪ್ರಕ್ರಿಯೆಯನ್ನು ಮುಗಿಸಿಕೊಳ್ಳಲು ಆದೇಶ ಹೊರಡಿಸಿದ್ದಾರೆ. ಯಾವುದೇ ಆದೇಶವನ್ನು ರಾಜ್ಯಪಾಲರು ಹೊರಡಿಸಿರುವುದಿಲ್ಲ.

ಕುಲಪತಿಗಳು ಹೇಳುವ ಪ್ರಕಾರ 2018 ರಲ್ಲಿ ಸರ್ಕಾರದಿಂದ ಮೂರು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ಮುಗಿಸಿ ಎಂದು ಆದೇಶ ಬಂದಿದೆ. ನೇಮಕಾತಿ ಪ್ರಕ್ರಿಯೆಯನ್ನು ಕೈಗೊಂಡಿರುವುದಾಗಿ ತಿಳಿಸುತ್ತಿದ್ದಾರೆ. ಆದರೆ 2019 ನೇ ಮೇ ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದ್ದು, ಸರ್ಕಾರದ ಆದೇಶವನ್ನು ಸಹ ಉಲ್ಲಂಘಿಸಿದ್ದಾರೆ ಎಂದರು.

ನೇಮಕಾರಿಗೆ 5 ಮರು ಅಧಿಸೂಚನೆಗಳು :

ನೇಮಕಾತಿ ಸಂಭಂದಿಸಿದಂತೆ 2016 ರಲ್ಲಿ ಹೊರಡಿಸಿದ ಅಧಿಸೂಚನೆಯನ್ನು ಆಧರಿಸಿ ಐದು ಮರು ಅಧಿಸೂಚನೆಗಳನ್ನು ಹೊರಡಿಸಿದ್ದಾರೆ. ಒಂದು ಅಧಿಸೂಚನೆ ಆರು ತಿಂಗಳು ಮಾತ್ರ ಸಿಂದುತ್ಚ ಹೊಂದಿರುತ್ತದೆ ಎಂದರು.
ಆರು ತಿಂಗಖ ನಂತರ ಯಾವುದೇ ಅಧಿಸೂಚನೆಯನ್ನು ಹೊರಡಿಸಿದರೆ ಅದನ್ನು ಹೊಸ ಅಧಿಸೂಚನೆ ಎಂದು ಪರಿಗಣಿಸಲಾಗುತ್ತದೆ.
ಯಾವುದೇ ಆರು ತಿಂಗಳ ಹಿಂದಿನ ಹಳೆ ಅಧಿಸೂಚನೆಯನ್ನು ಆಧರಿಸಿ, ಮರು ಅಧಿಸೂಚನೆ ಎಂದು ಹೊರಡಿಸಲು ಬರುವುದಿಲ್ಲ. ‌ಏಕೆಂದರೆ ಪ್ರತಿ ಆರು ತಿಂಗಳು - ವರ್ಷಕ್ಕೊಮ್ಮೆ ಯು.ಜಿ.ಸಿ ನಿಯಮಗಳು ತಿದ್ದಪಡಿಯಾಗುವುದರಿಂದ ನೇಮಕಾತಿಯ ಅರ್ಹತೆಗಳು ಅಭ್ಯರ್ಥಿಗೆ ಸಂಭಂದಿಸಿದಂತೆ ಬದಲಾವಣೆ ಯಾಗುತ್ತವೆ ಎಂದರು.


ಮೇ ತಿಂಗಳಲ್ಲಿ ನಾನ್ 371 ಜೆ ಎಂದು ಗೊಂದಲ್ಲ : ಐದು ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಇದು ಯಾವುದೇ ಹಳೆಯ ಮರು ಅಧಿಸೂಚನೆ ಯಾಗಿರುವುದಿಲ್ಲ. ಹೊಸ ಅಧಿಸೂಚನೆ ಯಾಗಿರುತ್ತದೆ.
ನಾನ್ 371 ಜೆ ಹುದ್ದೆಗಳೆಂದು ಅಧಿಸೂಚನೆಯಲ್ಲಿ ನಮೂದಿಸಿ, 371 ಜೆ ಅಭ್ಯರ್ಥಿಗಳ ಅರ್ಜಿ ಸಲ್ಲಿಸಲು ಗೊಂದಲ ಉಂಟಾಗುವಂತೆ ಉದ್ದೇಶ ಪೂರ್ವಕವಾಗಿ ಮಾಡಿದ್ದಾರೆ ಎಂದು ದೂರಿದರು. ಅಭ್ಯರ್ಥಿಗಳಿಗೆ ವಿಳಂಬ, ಹಾಲ್ ಟಿಕೆಟ್ ತಲುಪದೇ ಇರುವುದು ಕೂಡ ಭ್ರಷ್ಟಾಚಾರ ಎಸಗಿರುವುದು ಕಂಡು ಬರುತ್ತದೆ ಎಂದರು.


2019 ರ ಹೊಸ ಅಧಿಸೂಚನೆ :

ಬೋಧಕೇತರ ಸಿಬ್ಬಂದಿ ನೇಮಕಾತಿಗೆ ಸಂಭಂದಿಸಿದಂತೆ ,2019 ನೇ ಸಾಲಿನ ಹೊಸ ಅಧಿಸೂಚನೆಯನ್ನು ಹೊರಡಿಸಿರುವುದು ಕುಲಪತಿಗಳ ಅಲ್ಪಾವಧಿ ಅಧಿಕಾರ ಸಮಯದಲ್ಲಿ ಹೊರಡಿಸಿರುವ ಕಾನೂನು ಬಾಹಿರ ಅಧಿಸೂಚನೆಯಾಗಿರುತ್ತದೆ. ಇದಕ್ಕೆ ಸಂಭಂದಿಸಿದಂತೆ ಯಾವುದೇ ಹಳೆ ಅಧಿಸೂಚನೆಗಳು ಇರುವುದಿಲ್ಲ.

ಏಕಪಕ್ಷೀಯ ನಿರ್ಧಾರ :

25 ಮೇ 2019 ರಂದು ವಿವಿಯ ಸಿಂಡಿಕೇಟ್ ಸದಸ್ಯರಾದ ಡಾ. ಕೆ ಆರ್ ವೇಣುಗೋಪಾಲರೆಡ್ಡಿ ಗೈರು ಹಾಜರಾದ ಕಾರಣ , ತಕ್ಷಣ ಏಕಪಕ್ಷೀಯವಾಗಿ ವಿವಿಯ ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕ ಡಾ. ಶಾಂತನಾಯ್ಕ್ ಅವರನ್ನು ಸಿಂಡಿಕೇಟ್ ಸದಸ್ಯರನ್ನಾಗಿ ಆಯ್ಕೆ ಮಾಡಿ, ಅದೇ ಆದೇಶ ಪತ್ರ ನೀಡಿ ದಿಢೀರ್ ಸಿಂಡಿಕೇಟ್ ಸಭೆಯಲ್ಲಿ ನೇಮಕಾತಿ ಗೆ ಅನುಮತಿ ಪಡೆದುಕೊಂಡಿದ್ದಾರೆ.


ರಾಜ್ಯಪಾಲರಿಗೆ ಎಬಿವಿಪಿ ಮೊರೆ :

ವಿವಿಯ ನೇಮಕಾತಿಯಲ್ಲಿ ಭ್ರಷ್ಟಾಚಾರ, ಅಕ್ರಮ ನಡೆಯುತ್ತಿದೆ ಅದನ್ನು ತಡೆಗಟ್ಟಲು ವಿವಿಯ ಮಾಜಿ ಸಿಂಡಿಕೇಟ್ ಸದಸ್ಯರು ಹಾಗೂ ಅನ್ಯಾಯಕ್ಕೆ ಒಳಗಾದ ಬೋಧಕ ಮತ್ತು ಬೋಧಕೇತರ ಅಭ್ಯರ್ಥಿ ಕರ್ನಾಟಕ ರಾಜ್ಯದ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸುತ್ತೇವೆ ಎಂದು ತಿಳಿಸಿದರು.
ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರು ಮಧ್ಯ ಪ್ರವೇಶ ಮಾಡಿ ನೇಮಕಾತಿ ಪ್ರಕ್ರಿಯೆಯನ್ನು ತಡೆ ಹಿಡಿಯಬೇಕೆಂದು ಮನವಿ ಸಲ್ಲಿಸುತ್ತೇವೆ ಎಂದರು.


Conclusion:ಈ ಸುದ್ದಿಗೋಷ್ಠಿಯಲ್ಲಿ ಎಬಿವಿಪಿ ಕಾರ್ಯಕರ್ತರಾದ ಅಡವಿ ಸ್ವಾಮಿ, ಮಲ್ಲೇಶ್, ಯುವರಾಜ್ ,ಮಾಜಿ ಸಿಂಡಿಕೇಟ್ ಸದಸ್ಯರಾದ ಕೆ.ಹೆಚ್. ಹರಿಕುಮಾರ್, ಕೆ.ಆರ್ ವಿಜಯಲಕ್ಷ್ಮೀ ಹಾಗೂ ಬೋಧಕರ ನೇಮಕಾತಿಯಲ್ಲಿ ಅನ್ಯಾಯಕ್ಕೆ ಒಳಗಾದ ಅಭ್ಯರ್ಥಿ ಶ್ರೀವಾಣಿ, ಬೋಧಕೇತರ ನೇಮಕಾತಿಯಲ್ಲಿ ಅನ್ಯಾಯಕ್ಕೆ ಒಳಗಾದ ಅಭ್ಯರ್ಥಿ ಚಿದಾನಂ ಹಾಜರಿದ್ದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.