ETV Bharat / state

ವೀರಭದ್ರೇಶ್ವರ ಜಾತ್ರೆಯಲ್ಲಿ ರಸ್ತೆ ಪಕ್ಕಕ್ಕೆ ತೆರಳಿದ ರಥ: ಜನರ ನಿಯಂತ್ರಣಕ್ಕೆ ಪೊಲೀಸರಿಂದ ಲಘು ಲಾಠಿ ಜಾರ್ಜ್

author img

By

Published : Jan 27, 2021, 1:14 PM IST

ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಸೋಗಿ ಗ್ರಾಮದಲ್ಲಿ ಕೊರೊನಾ ಭೀತಿ ನಡುವೆಯೇ ವೀರಭದ್ರೇಶ್ವರ ರಥೋತ್ಸವ ನಡೆದಿದ್ದು, ಈ ವೇಳೆ ಪೊಲೀಸರು ಜನರನ್ನು ಚದುರಿಸಲು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ರಥವು ರಸ್ತೆ ಪಕ್ಕಕ್ಕೆ ತೆರಳಿದ್ದು, ಸ್ವಲ್ಪದರಲ್ಲೇ ಅಪಾಯ ತಪ್ಪಿದೆ.

Veerabhadreshwara Fair
ವೀರಭದ್ರೇಶ್ವರ ಜಾತ್ರೆ

ಹೊಸಪೇಟೆ: ಬಳ್ಳಾರಿ‌ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಸೋಗಿ ಗ್ರಾಮದಲ್ಲಿ ನಡೆದ ವೀರಭದ್ರೇಶ್ವರ ರಥೋತ್ಸವದಲ್ಲಿ ಭಾರೀ ಅನಾಹುತ ತಪ್ಪಿ ಹೋಗಿದೆ.

ವೀರಭದ್ರೇಶ್ವರ ರಥೋತ್ಸವದಲ್ಲಿ ತಪ್ಪಿದ ಭಾರೀ ಅನಾಹುತ

ಕೊರೊನಾ ಹಿನ್ನೆಲೆಯಲ್ಲಿ ರಥೋತ್ಸವಕ್ಕೆ ಸರ್ಕಾರ ಆನುಮತಿ ನೀಡಿರಲಿಲ್ಲ. ಆದರೂ ಸಹ ರಥೋತ್ಸವ ಮಾಡಲಾಗಿದ್ದು, ರಥ ಎಳೆಯುವಾಗ ರಸ್ತೆ ಬಿಟ್ಟು ಪಕ್ಕಕ್ಕೆ ಹೋಗಿದೆ. ಇದೇ ಸಂದರ್ಭದಲ್ಲಿ ಪೊಲೀಸರು ಭಕ್ತರನ್ನು ತಡೆಯಲು ಲಘು ಲಾಠಿ ಪ್ರಹಾರ ಮಾಡಿದ್ದಾರೆ.

ರಥವು ರಸ್ತೆ ಬಿಟ್ಟು ಹೋಗಿದ್ದರಿಂದ ಐದು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಹೊಸಪೇಟೆ: ಬಳ್ಳಾರಿ‌ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಸೋಗಿ ಗ್ರಾಮದಲ್ಲಿ ನಡೆದ ವೀರಭದ್ರೇಶ್ವರ ರಥೋತ್ಸವದಲ್ಲಿ ಭಾರೀ ಅನಾಹುತ ತಪ್ಪಿ ಹೋಗಿದೆ.

ವೀರಭದ್ರೇಶ್ವರ ರಥೋತ್ಸವದಲ್ಲಿ ತಪ್ಪಿದ ಭಾರೀ ಅನಾಹುತ

ಕೊರೊನಾ ಹಿನ್ನೆಲೆಯಲ್ಲಿ ರಥೋತ್ಸವಕ್ಕೆ ಸರ್ಕಾರ ಆನುಮತಿ ನೀಡಿರಲಿಲ್ಲ. ಆದರೂ ಸಹ ರಥೋತ್ಸವ ಮಾಡಲಾಗಿದ್ದು, ರಥ ಎಳೆಯುವಾಗ ರಸ್ತೆ ಬಿಟ್ಟು ಪಕ್ಕಕ್ಕೆ ಹೋಗಿದೆ. ಇದೇ ಸಂದರ್ಭದಲ್ಲಿ ಪೊಲೀಸರು ಭಕ್ತರನ್ನು ತಡೆಯಲು ಲಘು ಲಾಠಿ ಪ್ರಹಾರ ಮಾಡಿದ್ದಾರೆ.

ರಥವು ರಸ್ತೆ ಬಿಟ್ಟು ಹೋಗಿದ್ದರಿಂದ ಐದು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.