ETV Bharat / state

ವಿಜಯನಗರದ ಜಿ.ಪಂ ಸಿಇಒ ಅಧಿಕಾರ ಸ್ವೀಕರಿಸುವ ಮುನ್ನವೇ ನೇಮಕ ಆದೇಶ ರದ್ದು - Vijayanagara ZP CEO

ನೂತನ ಜಿಲ್ಲೆ ವಿಜಯನಗರದ ಜಿಲ್ಲಾ‌‌‌ ಪಂಚಾಯಿತಿ ಸಿಇಒ ಆಗಿ ಕೆ.ಎಂ.ಗಾಯತ್ರಿ ಅಧಿಕಾರ ಸ್ವೀಕರಿಸುವ ಮುನ್ನವೇ ಈ ಹಿಂದಿನ ನೇಮಕ ಆದೇಶವನ್ನು ರದ್ದುಗೊಳಿಸಲಾಗಿದೆ.

vijayanagara-zp-ceo-appointment-order-cancelled
ವಿಜಯನಗರದ ಜಿಪಂ ಸಿಇಒ ಅಧಿಕಾರ ಸ್ವೀಕರಿಸುವ ಮುನ್ನವೇ ಆದೇಶ ರದ್ದು
author img

By

Published : Oct 8, 2021, 1:01 PM IST

ಹೊಸಪೇಟೆ (ವಿಜಯನಗರ): ನೂತನ ಜಿಲ್ಲೆ ವಿಜಯನಗರದಲ್ಲಿ ಜಿಲ್ಲಾ‌‌‌ ಪಂಚಾಯಿತಿ ಸಿಇಒ ಆಗಿ ಅಧಿಕಾರ ಸ್ವೀಕರಿಸುವ ಮುನ್ನವೇ ಐಎಎಸ್​ ಅಧಿಕಾರಿ ಕೆ.ಎಂ.ಗಾಯತ್ರಿ ನೇಮಕ ಆದೇಶವನ್ನು ರದ್ದುಪಡಿಸಲಾಗಿದೆ.

ವಿಜಯನಗರ ಜಿಲ್ಲಾಧಿಕಾರಿಯಾದ ಅನಿರುದ್ಧ ಶ್ರವಣ್ ಅವರಿಗೆ ಜಿಲ್ಲಾ ಪಂಚಾಯಿತಿ ಸಿಇಒ ಹುದ್ದೆಯನ್ನು ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಮುಂದಿನ ಆದೇಶದವರೆಗೆ ಈ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಯೇ ವಹಿಸುವಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕ್ ಆದೇಶದಲ್ಲಿ ತಿಳಿಸಿದ್ದಾರೆ.

Vijayanagara ZP CEO appointment order cancelled
ಆದೇಶ ಪ್ರತಿ

ಅ.2ರಂದು ವಿಜಯನಗರ ಜಿಲ್ಲೆಗೆ ಸಿಇಓ ಆಗಿ ಕೆ.ಎಂ. ಗಾಯತ್ರಿ ಅವರನ್ನು ನೇಮಕ ಮಾಡಲಾಗಿತ್ತು. ಈ ಹಿಂದೆ ಮೈಸೂರಿನ ಎಎನ್​ಎಸ್​ಎಸ್​ಐಆರ್​ಡಿ (ANSSIRD) ನಿರ್ದೇಶಕರಾಗಿ ಕೆ.ಎಂ. ಗಾಯತ್ರಿ ಕಾರ್ಯನಿರ್ವಹಿಸಿದ್ದರು. ಈಗ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿಗಳಿಂದ ರದ್ಧತಿ ಬಗ್ಗೆ ಆದೇಶ ಹೊರಬಿದ್ದಿದೆ.

ಇದನ್ನೂ ಓದಿ: ತಂದೆಯಿಂದಲೇ ಮಗನಿಗೆ ಗುಂಡು ಪ್ರಕರಣ: ಮೆದುಳು ನಿಷ್ಕ್ರಿಯಗೊಂಡಿದ್ದ ಬಾಲಕ ಸಾವು

ಹೊಸಪೇಟೆ (ವಿಜಯನಗರ): ನೂತನ ಜಿಲ್ಲೆ ವಿಜಯನಗರದಲ್ಲಿ ಜಿಲ್ಲಾ‌‌‌ ಪಂಚಾಯಿತಿ ಸಿಇಒ ಆಗಿ ಅಧಿಕಾರ ಸ್ವೀಕರಿಸುವ ಮುನ್ನವೇ ಐಎಎಸ್​ ಅಧಿಕಾರಿ ಕೆ.ಎಂ.ಗಾಯತ್ರಿ ನೇಮಕ ಆದೇಶವನ್ನು ರದ್ದುಪಡಿಸಲಾಗಿದೆ.

ವಿಜಯನಗರ ಜಿಲ್ಲಾಧಿಕಾರಿಯಾದ ಅನಿರುದ್ಧ ಶ್ರವಣ್ ಅವರಿಗೆ ಜಿಲ್ಲಾ ಪಂಚಾಯಿತಿ ಸಿಇಒ ಹುದ್ದೆಯನ್ನು ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಮುಂದಿನ ಆದೇಶದವರೆಗೆ ಈ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಯೇ ವಹಿಸುವಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕ್ ಆದೇಶದಲ್ಲಿ ತಿಳಿಸಿದ್ದಾರೆ.

Vijayanagara ZP CEO appointment order cancelled
ಆದೇಶ ಪ್ರತಿ

ಅ.2ರಂದು ವಿಜಯನಗರ ಜಿಲ್ಲೆಗೆ ಸಿಇಓ ಆಗಿ ಕೆ.ಎಂ. ಗಾಯತ್ರಿ ಅವರನ್ನು ನೇಮಕ ಮಾಡಲಾಗಿತ್ತು. ಈ ಹಿಂದೆ ಮೈಸೂರಿನ ಎಎನ್​ಎಸ್​ಎಸ್​ಐಆರ್​ಡಿ (ANSSIRD) ನಿರ್ದೇಶಕರಾಗಿ ಕೆ.ಎಂ. ಗಾಯತ್ರಿ ಕಾರ್ಯನಿರ್ವಹಿಸಿದ್ದರು. ಈಗ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿಗಳಿಂದ ರದ್ಧತಿ ಬಗ್ಗೆ ಆದೇಶ ಹೊರಬಿದ್ದಿದೆ.

ಇದನ್ನೂ ಓದಿ: ತಂದೆಯಿಂದಲೇ ಮಗನಿಗೆ ಗುಂಡು ಪ್ರಕರಣ: ಮೆದುಳು ನಿಷ್ಕ್ರಿಯಗೊಂಡಿದ್ದ ಬಾಲಕ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.