ಹೊಸಪೇಟೆ (ವಿಜಯನಗರ): ನೂತನ ಜಿಲ್ಲೆ ವಿಜಯನಗರದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಅಧಿಕಾರ ಸ್ವೀಕರಿಸುವ ಮುನ್ನವೇ ಐಎಎಸ್ ಅಧಿಕಾರಿ ಕೆ.ಎಂ.ಗಾಯತ್ರಿ ನೇಮಕ ಆದೇಶವನ್ನು ರದ್ದುಪಡಿಸಲಾಗಿದೆ.
ವಿಜಯನಗರ ಜಿಲ್ಲಾಧಿಕಾರಿಯಾದ ಅನಿರುದ್ಧ ಶ್ರವಣ್ ಅವರಿಗೆ ಜಿಲ್ಲಾ ಪಂಚಾಯಿತಿ ಸಿಇಒ ಹುದ್ದೆಯನ್ನು ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಮುಂದಿನ ಆದೇಶದವರೆಗೆ ಈ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಯೇ ವಹಿಸುವಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕ್ ಆದೇಶದಲ್ಲಿ ತಿಳಿಸಿದ್ದಾರೆ.

ಅ.2ರಂದು ವಿಜಯನಗರ ಜಿಲ್ಲೆಗೆ ಸಿಇಓ ಆಗಿ ಕೆ.ಎಂ. ಗಾಯತ್ರಿ ಅವರನ್ನು ನೇಮಕ ಮಾಡಲಾಗಿತ್ತು. ಈ ಹಿಂದೆ ಮೈಸೂರಿನ ಎಎನ್ಎಸ್ಎಸ್ಐಆರ್ಡಿ (ANSSIRD) ನಿರ್ದೇಶಕರಾಗಿ ಕೆ.ಎಂ. ಗಾಯತ್ರಿ ಕಾರ್ಯನಿರ್ವಹಿಸಿದ್ದರು. ಈಗ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿಗಳಿಂದ ರದ್ಧತಿ ಬಗ್ಗೆ ಆದೇಶ ಹೊರಬಿದ್ದಿದೆ.
ಇದನ್ನೂ ಓದಿ: ತಂದೆಯಿಂದಲೇ ಮಗನಿಗೆ ಗುಂಡು ಪ್ರಕರಣ: ಮೆದುಳು ನಿಷ್ಕ್ರಿಯಗೊಂಡಿದ್ದ ಬಾಲಕ ಸಾವು