ETV Bharat / state

ವಿಜಯನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ, ಅಗತ್ಯ ಸಿದ್ಧತೆಗಳ ಪರಿಶೀಲನೆ - ಉಪಚುನಾವಣೆಯ ಮತ ಎಣಿಕೆ ಅಗತ್ಯ ಸಿದ್ಧತೆ ಸುದ್ದಿ

ವಿಜಯನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆಯು‌ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಾಳೆ ನಡೆಯಲಿದೆ.

vote Counting preperation
ಅಗತ್ಯ ಸಿದ್ಧತೆಗಳ ಪರಿಶೀಲನೆ
author img

By

Published : Dec 8, 2019, 11:41 PM IST

ಬಳ್ಳಾರಿ: ವಿಜಯನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆಯ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಾಳೆ ನಡೆಯಲಿದ್ದು ಸಿದ್ದತಾ ಕೆಲಸಗಳನ್ನು ಹಿರಿಯ ಅಧಿಕಾರಿಗಳು ಪರಿಶೀಲಿಸಿದ್ರು.

ಉಪಚುನಾವಣೆಯ ಮತ ಎಣಿಕೆಗೆ ಅಗತ್ಯ ಸಿದ್ಧತೆಗಳ ಪರಿಶೀಲನೆ

ಮತ ಎಣಿಕೆಗೆ ಸಂಬಂಧಿಸಿದಂತೆ ಅಗತ್ಯ ಸಿದ್ಧತೆಗಳನ್ನು‌ ಜಿಲ್ಲಾಡಳಿತ ಮಾಡಿಕೊಂಡಿದ್ದು, ಸೂಕ್ತ ಪೊಲೀಸ್ ಬಂದೋ‌ಬಸ್ತ್‌ ಕಲ್ಪಿಸಲಾಗಿದೆ. ಮತ ಎಣಿಕೆ ಬೆಳಗ್ಗೆ 8ಕ್ಕೆ ಆರಂಭವಾಗಲಿದ್ದು, ವೀಕ್ಷಕರು, ಅಭ್ಯರ್ಥಿಗಳ ಸಮ್ಮುಖದಲ್ಲಿ ಮತ ಯಂತ್ರಗಳಿರಿಸಲಾದ ಕೊಠಡಿಗಳನ್ನು ತೆರೆಯಲಾಗುತ್ತದೆ. ನಂತರ ಮತ ಯಂತ್ರಗಳನ್ನು ಮತ ಎಣಿಕಾ ಕೋಣೆಗೆ ತರಲಾಗುತ್ತದೆ ಎಂದು ಜಿಲ್ಲಾಧಿಕಾರಿ ನಕುಲ್ ತಿಳಿಸಿದರು.

ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕೈಗೊಳ್ಳಲಾಗಿರುವ ಅಗತ್ಯ ಸಿದ್ಧತೆಗಳನ್ನು ಪರಿಶೀಲಿಸಿ‌ ಮಾತನಾಡಿದ ಅವರು, ಮತ ಎಣಿಕೆಗೆ 14 ಟೇಬಲ್​ಗಳ‌ ವ್ಯವಸ್ಥೆ ಮಾಡಲಾಗಿದ್ದು, 17 ಸುತ್ತುಗಳಲ್ಲಿ ನಡೆಯಲಿದೆ. ಎಣಿಕಾ ಕೇಂದ್ರದೊಳಗೆ ಮೊಬೈಲ್​ಗಳನ್ನು‌ ನಿಷೇಧಿಸಲಾಗಿದ್ದು, ಗೇಟ್ ಬಳಿಯೇ ಅವುಗಳನ್ನಿಡುವುದಕ್ಕೆ‌ ವ್ಯವಸ್ಥೆ ಮಾಡಲಾಗಿದೆ. ಇಡೀ ಮತ ಎಣಿಕೆ ದಿನದಂದು ಸಂಪೂರ್ಣ ವಿಡಿಯೋ ರೆಕಾರ್ಡ್ ಮಾಡಲಾಗುತ್ತದೆ ಎಂದು ತಿಳಿಸಿದ್ರು.

ಪೊಲೀಸ್ ಸಿಬ್ಬಂದಿ ಸೇರಿದಂತೆ ಅಧಿಕಾರಿಗಳು‌ ಹಾಗೂ ಸಿಬ್ಬಂದಿ ಸೇರಿದಂತೆ 425 ಜನರನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಸಿಐಎಸ್ಎಫ್ ಒಂದು ತುಕಡಿ ಭದ್ರತೆಗೆ ನಿಯೋಜಿಸಲಾಗಿದೆ ಎಂದರು‌. ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿ‌ನ ಸುತ್ತ 1ಕಿ.ಮೀ‌ ವ್ಯಾಪ್ತಿಯಲ್ಲಿ ಡಿ‌.9ರಂದು ಬೆಳಗ್ಗೆ 6ರಿಂದ ರಾತ್ರಿ 12ರವರೆಗೆ ಮದ್ಯ ಸರಬರಾಜು, ಮಾರಾಟ ನಿಷೇಧಿಸಲಾಗಿದೆ ಎಂದಿದ್ದಾರೆ.

ಅಪರ ಜಿಲ್ಲಾಧಿಕಾರಿ ಮಂಜುನಾಥ, ಸಹಾಯಕ ಆಯುಕ್ತ ರಮೇಶ‌ ಕೋನ ರೆಡ್ಡಿ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ ಉಪಸ್ಥಿತರಿದ್ದರು.

ಬಳ್ಳಾರಿ: ವಿಜಯನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆಯ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಾಳೆ ನಡೆಯಲಿದ್ದು ಸಿದ್ದತಾ ಕೆಲಸಗಳನ್ನು ಹಿರಿಯ ಅಧಿಕಾರಿಗಳು ಪರಿಶೀಲಿಸಿದ್ರು.

ಉಪಚುನಾವಣೆಯ ಮತ ಎಣಿಕೆಗೆ ಅಗತ್ಯ ಸಿದ್ಧತೆಗಳ ಪರಿಶೀಲನೆ

ಮತ ಎಣಿಕೆಗೆ ಸಂಬಂಧಿಸಿದಂತೆ ಅಗತ್ಯ ಸಿದ್ಧತೆಗಳನ್ನು‌ ಜಿಲ್ಲಾಡಳಿತ ಮಾಡಿಕೊಂಡಿದ್ದು, ಸೂಕ್ತ ಪೊಲೀಸ್ ಬಂದೋ‌ಬಸ್ತ್‌ ಕಲ್ಪಿಸಲಾಗಿದೆ. ಮತ ಎಣಿಕೆ ಬೆಳಗ್ಗೆ 8ಕ್ಕೆ ಆರಂಭವಾಗಲಿದ್ದು, ವೀಕ್ಷಕರು, ಅಭ್ಯರ್ಥಿಗಳ ಸಮ್ಮುಖದಲ್ಲಿ ಮತ ಯಂತ್ರಗಳಿರಿಸಲಾದ ಕೊಠಡಿಗಳನ್ನು ತೆರೆಯಲಾಗುತ್ತದೆ. ನಂತರ ಮತ ಯಂತ್ರಗಳನ್ನು ಮತ ಎಣಿಕಾ ಕೋಣೆಗೆ ತರಲಾಗುತ್ತದೆ ಎಂದು ಜಿಲ್ಲಾಧಿಕಾರಿ ನಕುಲ್ ತಿಳಿಸಿದರು.

ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕೈಗೊಳ್ಳಲಾಗಿರುವ ಅಗತ್ಯ ಸಿದ್ಧತೆಗಳನ್ನು ಪರಿಶೀಲಿಸಿ‌ ಮಾತನಾಡಿದ ಅವರು, ಮತ ಎಣಿಕೆಗೆ 14 ಟೇಬಲ್​ಗಳ‌ ವ್ಯವಸ್ಥೆ ಮಾಡಲಾಗಿದ್ದು, 17 ಸುತ್ತುಗಳಲ್ಲಿ ನಡೆಯಲಿದೆ. ಎಣಿಕಾ ಕೇಂದ್ರದೊಳಗೆ ಮೊಬೈಲ್​ಗಳನ್ನು‌ ನಿಷೇಧಿಸಲಾಗಿದ್ದು, ಗೇಟ್ ಬಳಿಯೇ ಅವುಗಳನ್ನಿಡುವುದಕ್ಕೆ‌ ವ್ಯವಸ್ಥೆ ಮಾಡಲಾಗಿದೆ. ಇಡೀ ಮತ ಎಣಿಕೆ ದಿನದಂದು ಸಂಪೂರ್ಣ ವಿಡಿಯೋ ರೆಕಾರ್ಡ್ ಮಾಡಲಾಗುತ್ತದೆ ಎಂದು ತಿಳಿಸಿದ್ರು.

ಪೊಲೀಸ್ ಸಿಬ್ಬಂದಿ ಸೇರಿದಂತೆ ಅಧಿಕಾರಿಗಳು‌ ಹಾಗೂ ಸಿಬ್ಬಂದಿ ಸೇರಿದಂತೆ 425 ಜನರನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಸಿಐಎಸ್ಎಫ್ ಒಂದು ತುಕಡಿ ಭದ್ರತೆಗೆ ನಿಯೋಜಿಸಲಾಗಿದೆ ಎಂದರು‌. ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿ‌ನ ಸುತ್ತ 1ಕಿ.ಮೀ‌ ವ್ಯಾಪ್ತಿಯಲ್ಲಿ ಡಿ‌.9ರಂದು ಬೆಳಗ್ಗೆ 6ರಿಂದ ರಾತ್ರಿ 12ರವರೆಗೆ ಮದ್ಯ ಸರಬರಾಜು, ಮಾರಾಟ ನಿಷೇಧಿಸಲಾಗಿದೆ ಎಂದಿದ್ದಾರೆ.

ಅಪರ ಜಿಲ್ಲಾಧಿಕಾರಿ ಮಂಜುನಾಥ, ಸಹಾಯಕ ಆಯುಕ್ತ ರಮೇಶ‌ ಕೋನ ರೆಡ್ಡಿ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ ಉಪಸ್ಥಿತರಿದ್ದರು.

Intro:ಅಗತ್ಯ ಸಿದ್ಧತೆಗಳ ಪರಿಶೀಲನೆ ನಡೆಸಿದ‌ ಡಿಸಿ,ಎಸ್ಪಿ
ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತ ಎಣಿಕೆ ನಾಳೆBody:ವಿಜಯನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆಯು‌ ನಗರದ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿ.9ರಂದು ನಡೆಯಲಿದೆ.

ಮತ ಎಣಿಕೆಗೆ ಸಂಬಂಧಿಸಿದಂತೆ ಅಗತ್ಯ ಸಿದ್ಧತೆಗಳನ್ನು‌ ಜಿಲ್ಲಾಡಳಿತ ಮಾಡಿಕೊಂಡಿದೆ. ಸೂಕ್ತ ಬಂದೋ‌ಬಸ್ತ್‌ ಕಲ್ಪಿಸಲಾಗಿದೆ. ಮತ ಎಣಿಕೆಯು‌ ಡಿ.9ರಂದು ಬೆಳಗ್ಗೆ 8ಕ್ಕೆ ಆರಂಭವಾಗಲಿದೆ.

ವೀಕ್ಷಕರು, ಅಭ್ಯರ್ಥಿಗಳ ಸಮ್ಮುಖದಲ್ಲಿ ಮತಯಂತ್ರಗಳಿರಿಸಲಾದ ಸ್ಟ್ರಾಂಗ್ ರೂಂಗಳನ್ನು ಒಪನ್ ಮಾಡಲಾಗುತ್ತದೆ. ನಂತರ ಮತಯಂತ್ರಗಳನ್ನು ಮತ ಎಣಿಕಾ ಕೋಣೆಗೆ ತರಲಾಗುತ್ತದೆ ಎಂದು ಜಿಲ್ಲಾಧಿಕಾರಿ ನಕುಲ್ ಅವರು ತಿಳಿಸಿದರು.

ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕೈಗೊಳ್ಳಲಾಗಿರುವ ಅಗತ್ಯ ಸಿದ್ಧತೆಗಳನ್ನು ಪರಿಶೀಲಿಸಿ‌ ಅವರು ಮಾತನಾಡಿದರು.

ಮತ ಎಣಿಕೆಗೆ 14 ಟೇಬಲ್ ಗಳ‌ ವ್ಯವಸ್ಥೆ ಮಾಡಲಾಗಿದ್ದು,17 ಸುತ್ತುಗಳಲ್ಲಿ ನಡೆಯಲಿದೆ.
ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್ ಗಳನ್ನು‌ ನಿಷೇಧಿಸಲಾಗಿದ್ದು,ಗೇಟ್ ಬಳಿಯೇ ಅವುಗಳನ್ನಿಡುವುದಕ್ಕೆ‌ ವ್ಯವಸ್ಥೆ ಮಾಡಲಾಗಿದೆ. ಇಡೀ ಮತ ಎಣಿಕೆ ದಿನದಂದು ಸಂಪೂರ್ಣ ವಿಡಿಯೋಗ್ರಫಿ ಮಾಡಲಾಗುತ್ತದೆ. 13 ಅಭ್ಯರ್ಥಿಗಳು ಪರವಾಗಿ 65 ಏಜೆಂಟರು ಪಾಸ್ ತೆಗೆದುಕೊಂಡಿದ್ದಾರೆ. ಪೊಲೀಸ್ ಸಿಬ್ಬಂದಿ ಸೇರಿದಂತೆ ಅಧಿಕಾರಿಗಳು‌ ಹಾಗೂ ಸಿಬ್ಬಂದಿ 425ಜನರನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಸಿಐಎಸ್ಎಫ್ ಒಂದು ತುಕಡಿ ಭದ್ರತೆಗೆ ನಿಯೋಜಿಸಲಾಗಿದೆ ಎಂದರು‌.
ಸರಕಾರಿ ಪಾಲಿಟೆಕ್ನಿಕ್ ಕಾಲೇಜಿ‌ನ ಸುತ್ತ 1ಕಿ.ಮೀ‌ ವ್ಯಾಪ್ತಿಯಲ್ಲಿ ಡಿ‌.9ರಂದು ಬೆಳಗ್ಗೆ 6ರಿಂದ ರಾತ್ರಿ 12ರವರೆಗೆ ಮದ್ಯ ಸರಬರಾಜು, ಮಾರಾಟ ನಿಷೇಧಿಸಲಾಗಿದೆ ಎಂದರು.

Conclusion:ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಂಜುನಾಥ, ಸಹಾಯಕ ಆಯುಕ್ತ ರಮೇಶ‌ ಕೋನರೆಡ್ಡಿ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ ಇದ್ದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.