ETV Bharat / state

ವಿಮ್ಸ್ ಲ್ಯಾಬ್ ಟೆಕ್ನಿಷಿಯನ್ ಹಲ್ಲೆ ಪ್ರಕರಣ.. ಸಾಮಾಜಿಕ ಕಾರ್ಯಕರ್ತ ಮುಲಾಲಿಗೆ ಖಾಕಿ ನೋಟಿಸ್ ಜಾರಿ! - undefined

ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದ ಲ್ಯಾಬ್ ಟೆಕ್ನಿಷಿಯನ್​​ ಯಾದವಾಡ ಅವರ ಮೇಲಿನ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಮಂದಿಗೂ ನಾಳೆ ವಿಚಾರಣೆಗೆ ಹಾಜರಾಗುವಂತೆ ಕೌಲ್​ ಬಜಾರ್​ ಠಾಣೆಯ ಪೊಲೀಸರು ನೋಟಿಸ್​ ಜಾರಿ ಮಾಡಿದ್ದಾರೆ.

ರಾಜಶೇಖರ ಮುಲಾಲಿ
author img

By

Published : Jun 23, 2019, 10:28 AM IST

ಬಳ್ಳಾರಿ: ವಿಮ್ಸ್ ಲ್ಯಾಬ್ ಟೆಕ್ನಿಷಿಯನ್ ವಿ ಕೆ ಯಾದವಾಡ ಅವರ ಮೇಲೆ ಜೂನ್ 12ರಂದು ರಾತ್ರಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆಯ (ಸೋಮವಾರ) ದಿನ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿ ಅವರಿಗೆ ಕೌಲ್ ಬಜಾರ್ ಠಾಣೆಯ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ.

ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದ ಲ್ಯಾಬ್ ಟೆಕ್ನಿಷಿಯನ್​​ ಯಾದವಾಡ ಅವರ ಮೇಲಿನ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಮಂದಿಯನ್ನು ವಿಚಾರಣೆಗೆ ಒಳಪಡಿಸಿದಾಗ, ರಾಜಶೇಖರ ಮುಲಾಲಿಯವರೇ ಈ ಹಲ್ಲೆ ಪ್ರಕರಣಕ್ಕೆ ಕುಮ್ಮಕ್ಕು ನೀಡಿದ್ದಾರೆ ಎಂದು ವಿಚಾರಣೆ ವೇಳೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.‌

ಅದಕ್ಕೆ ಪೂರಕವಾದ ಕೆಲ ಸಾಕ್ಷಿಗಳು ಕೂಡ ಕೌಲ್ ಬಜಾರ್ ಠಾಣೆಯ ಪೊಲೀಸರಿಗೆ ದೊರೆತಿವೆಯಂತೆ. ಹೀಗಾಗಿ, ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿಯವರಿಗೆ ನೋಟಿಸ್ ಜಾರಿ ಗೊಳಿಸಲಾಗಿದೆ. ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠ ಲಕ್ಷ್ಮಣ ಬಿ ನಿಂಬರಗಿ ತಿಳಿಸಿದ್ದಾರೆ.

ಪೊಲೀಸ್ ಇಲಾಖೆಯಿಂದ ನೋಟಿಸ್ ಪಡೆದ ಮೊದಲನೇ ಆರೋಪಿ ಎಂಬ ಕುಖ್ಯಾತಿ ರಾಜಶೇಖರ ಮುಲಾಲಿಯವರದಾಗಿದೆ. ಲ್ಯಾಬ್ ಟೆಕ್ನಿಷಿಯನ್ ಯಾದವಾಡ ಅವರ ದೂರಿನ ಮೇರೆಗೆ ಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಹೆಚ್.ಆರ್.ರಂಗನಾಥ, ಜಿಲ್ಲಾ ವರದಿಗಾರ ವೀರೇಶ ದಾನಿ, ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿ, ವಿಮ್ಸ್‌ನ ವೈದ್ಯರಾದ ಡಾ.ರವಿ ಭೀಮಪ್ಪ, ಡಾ. ಶಡ್ರಕ್, ಶುಶ್ರೂಕ ವಿಭಾಗದ ನೌಕರ ಹನುಮಂತ ರಾಯ ಹಾಗೂ ಉಷಾ ಎಂಬುವರ ಮೇಲೆ ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.‌ ಯಾದವಾಡ ನನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆಂದು ಆರೋಪಿ ಉಷಾ ಎಂಬುವರು ಮಹಿಳಾ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದರು.

ನೌಕರಿಯ ಆಮಿಷ :

ಯಾದವಾಡ ಅವರ ಮೇಲಿನ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿರುವ ಕೆಲ ಆರೋಪಿಗಳಿಗೆ ವಿಮ್ಸ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಡಿ ನೌಕರಿ ಕೊಡಿಸುವುದಾಗಿ ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿಯವರು ಆಮಿಷವೊಡ್ಡಿದ್ದರು ಎಂಬ ದೂರುಗಳು ಕೇಳಿಬಂದಿವೆ.

ಬಳ್ಳಾರಿ: ವಿಮ್ಸ್ ಲ್ಯಾಬ್ ಟೆಕ್ನಿಷಿಯನ್ ವಿ ಕೆ ಯಾದವಾಡ ಅವರ ಮೇಲೆ ಜೂನ್ 12ರಂದು ರಾತ್ರಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆಯ (ಸೋಮವಾರ) ದಿನ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿ ಅವರಿಗೆ ಕೌಲ್ ಬಜಾರ್ ಠಾಣೆಯ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ.

ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದ ಲ್ಯಾಬ್ ಟೆಕ್ನಿಷಿಯನ್​​ ಯಾದವಾಡ ಅವರ ಮೇಲಿನ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಮಂದಿಯನ್ನು ವಿಚಾರಣೆಗೆ ಒಳಪಡಿಸಿದಾಗ, ರಾಜಶೇಖರ ಮುಲಾಲಿಯವರೇ ಈ ಹಲ್ಲೆ ಪ್ರಕರಣಕ್ಕೆ ಕುಮ್ಮಕ್ಕು ನೀಡಿದ್ದಾರೆ ಎಂದು ವಿಚಾರಣೆ ವೇಳೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.‌

ಅದಕ್ಕೆ ಪೂರಕವಾದ ಕೆಲ ಸಾಕ್ಷಿಗಳು ಕೂಡ ಕೌಲ್ ಬಜಾರ್ ಠಾಣೆಯ ಪೊಲೀಸರಿಗೆ ದೊರೆತಿವೆಯಂತೆ. ಹೀಗಾಗಿ, ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿಯವರಿಗೆ ನೋಟಿಸ್ ಜಾರಿ ಗೊಳಿಸಲಾಗಿದೆ. ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠ ಲಕ್ಷ್ಮಣ ಬಿ ನಿಂಬರಗಿ ತಿಳಿಸಿದ್ದಾರೆ.

ಪೊಲೀಸ್ ಇಲಾಖೆಯಿಂದ ನೋಟಿಸ್ ಪಡೆದ ಮೊದಲನೇ ಆರೋಪಿ ಎಂಬ ಕುಖ್ಯಾತಿ ರಾಜಶೇಖರ ಮುಲಾಲಿಯವರದಾಗಿದೆ. ಲ್ಯಾಬ್ ಟೆಕ್ನಿಷಿಯನ್ ಯಾದವಾಡ ಅವರ ದೂರಿನ ಮೇರೆಗೆ ಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಹೆಚ್.ಆರ್.ರಂಗನಾಥ, ಜಿಲ್ಲಾ ವರದಿಗಾರ ವೀರೇಶ ದಾನಿ, ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿ, ವಿಮ್ಸ್‌ನ ವೈದ್ಯರಾದ ಡಾ.ರವಿ ಭೀಮಪ್ಪ, ಡಾ. ಶಡ್ರಕ್, ಶುಶ್ರೂಕ ವಿಭಾಗದ ನೌಕರ ಹನುಮಂತ ರಾಯ ಹಾಗೂ ಉಷಾ ಎಂಬುವರ ಮೇಲೆ ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.‌ ಯಾದವಾಡ ನನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆಂದು ಆರೋಪಿ ಉಷಾ ಎಂಬುವರು ಮಹಿಳಾ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದರು.

ನೌಕರಿಯ ಆಮಿಷ :

ಯಾದವಾಡ ಅವರ ಮೇಲಿನ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿರುವ ಕೆಲ ಆರೋಪಿಗಳಿಗೆ ವಿಮ್ಸ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಡಿ ನೌಕರಿ ಕೊಡಿಸುವುದಾಗಿ ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿಯವರು ಆಮಿಷವೊಡ್ಡಿದ್ದರು ಎಂಬ ದೂರುಗಳು ಕೇಳಿಬಂದಿವೆ.

Intro:ವಿಮ್ಸ್ ಲ್ಯಾಬ್ ಟೆಕ್ನಿಷಿಯನ್ ಮೇಲೆ ಹಲ್ಲೆ ಪ್ರಕರಣ: ಮುಲಾಲಿಗೆ ನೋಟಿಸ್ ಜಾರಿ!
ಬಳ್ಳಾರಿ: ಇಲ್ಲಿನ ವಿಮ್ಸ್ ಲ್ಯಾಬ್ ಟೆಕ್ನಿಷಿಯನ್ ವಿ.ಕೆ.ಯಾದವಾಡ ಅವರ ಮೇಲೆ ಜೂನ್ 12ರಂದು ರಾತ್ರಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆಯ (ಸೋಮವಾರ) ದಿನ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿ ಅವರಿಗೆ ಕೌಲ್ ಬಜಾರ್ ಠಾಣೆಯ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ.
ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದ ಲ್ಯಾಬ್ ಟೆಕ್ನಿಷಿಯಬ್ ಯಾದ
ವಾಡ ಅವರ ಮೇಲಿನ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿದ್ದ
ಆರುಮಂದಿಯನ್ನು ವಿಚಾರಣೆಗೆ ಒಳಪಡಿಸಿದಾಗ, ರಾಜಶೇಖರ ಮುಲಾಲಿಯವರೇ ಈ ಹಲ್ಲೆ ಪ್ರಕರಣಕ್ಕೆ ಕುಮ್ಮಕ್ಕು ನೀಡಿದ್ದಾರೆ ಎಂದು ವಿಚಾರಣೆ ಆರುಮಂದಿ ಆರೋಪಿಗಳು ತಪ್ಪೊಪ್ಪಿಕೊಂಡಿ ದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.‌
ಅದಕ್ಕೆ ಪೂರಕವಾದ ಕೆಲ ಸಾಕ್ಷಿಗಳು ಕೂಡ ಕೌಲ್ ಬಜಾರ್ ಠಾಣೆಯ ಪೊಲೀಸರಿಗೆ ದೊರೆತಿವೆಯಂತೆ. ಹೀಗಾಗಿ, ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿಯವರಿಗೆ ನೋಟಿಸ್ ಜಾರಿ ಗೊಳಿಸಲಾಗಿದೆ. ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಾ ಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಬಿ.ನಿಂಬರಗಿ ತಿಳಿಸಿದ್ದಾರೆ.
Body:ಆಗಾಗಿ, ಜಿಲ್ಲಾ ಪೊಲೀಸ್ ಇಲಾಖೆಯಿಂದ ನೋಟಿಸ್ ಪಡೆದ ಮೊದಲನೇ ಆರೋಪಿಯಾಗಿ ರಾಜಶೇಖರ ಮುಲಾಲಿಯವರು ಹೊರಹೊಮ್ಮಿದ್ದಾರೆ. ಈವರೆಗೂ ವಿಚಾರಣೆಗೆ ಹಾಜರಾಗುವಂತೆ ಯಾರೊಬ್ಬರಿಗೂ ನೋಟಿಸ್ ಜಾರಿಗೊಳಿಸಿಲ್ಲದಿರುವುದು ಸ್ಮರಿಸ ಬಹುದು.
ಲ್ಯಾಬ್ ಟೆಕ್ನಿಷಿಯನ್ ಯಾದವಾಡ ಅವರ ದೂರಿನ ಮೇರೆಗೆ ಪಬ್ಲಿಕ್ ಟಿ.ವಿ.ಯ ಪ್ರಧಾನ ಸಂಪಾದಕ ಹೆಚ್.ಆರ್.ರಂಗನಾಥ, ಜಿಲ್ಲಾ ವರದಿಗಾರ ವೀರೇಶ ದಾನಿ, ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿ, ವಿಮ್ಸ್ ನ ವೈದ್ಯರಾದ ಡಾ.ರವಿಭೀಮಪ್ಪ, ಡಾ.ಶಡ್ರಕ್, ಶುಶ್ರೂಷಕ ವಿಭಾಗದ ನೌಕರ ಹನುಮಂತ ರಾಯ ಹಾಗೂ ಉಷಾ ಎಂಬುವರ ಮೇಲೆ ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.‌ ಯಾದವಾಡ ನನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆಂದು ಆರೋಪಿ ಉಷಾ ಎಂಬುವರು ಮಹಿಳಾ ಠಾಣೆ ಯಲ್ಲಿ ಪ್ರತಿದೂರು ದಾಖಲಿಸಿದ್ದರು.
ನೌಕರಿಯ ಆಮಿಷ: ಯಾದವಾಡ ಅವರ ಮೇಲಿನ ಹಲ್ಲೆ ಪ್ರಕರಣ ದಲ್ಲಿ ಭಾಗಿಯಾಗಿರುವ ಕೆಲ ಆರೋಪಿಗಳಿಗೆ ವಿಮ್ಸ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಡಿ ನೌಕರಿ ಕೊಡಿಸುವುದಾಗಿ ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿಯವರು ಆಮಿಷವೊಡ್ಡಿದ್ದ ರು ಎಂಬ ದೂರುಗಳು ಕೇಳಿಬಂದಿವೆ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_01_23_COWAL_BAZAR_POLICE_ISSUED_NOTICE_RAJASHEKAR_MULALI_7203310

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.