ETV Bharat / state

ಬಳ್ಳಾರಿ: ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಮಹಿಳೆ ಸಾವು - ಕಲುಷಿತ ನೀರು ಸೇವಸಿ ಅಸ್ವತ್ಥಗೊಂಡಿದ್ದ ಮಹಿಳೆ ಸಾವು

ಶ್ರೀರಾಂಪುರ ಕಾಲೋನಿ ಸೇರಿದಂತೆ ‌ಇತರೆಡೆ ನಲ್ಲಿಯಲ್ಲಿ ಪೂರೈಕೆಯಾಗಿದ್ದ ಕಲುಷಿತ ನೀರನ್ನ ಸೇವಿಸಿ, ಸುಮಾರು 14 ಜನರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿತ್ತು.‌ ಇವರಲ್ಲಿ ಓರ್ವ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Breaking News
author img

By

Published : Jan 24, 2021, 2:26 PM IST

ಬಳ್ಳಾರಿ: ನಗರದ ಶ್ರೀರಾಂಪುರ ಕಾಲೋನಿಯಲ್ಲಿ ಕುಡಿಯುವ ನೀರಿನ ನಲ್ಲಿಗಳಲ್ಲಿ ಪೂರೈಕೆಯಾಗಿದ್ದ ಕಲುಷಿತ ನೀರು ಸೇವನೆಯಿಂದ ವಾಂತಿ-ಬೇದಿಯಾಗಿ ಅಸ್ವಸ್ಥಗೊಂಡಿದ್ದ ಮಹಿಳೆ ಸಾವನ್ನಪ್ಪಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಶ್ರೀರಾಂಪುರ ಕಾಲೋನಿ ಸೇರಿದಂತೆ ‌ಇತರೆಡೆ ನಲ್ಲಿಯಲ್ಲಿ ಪೂರೈಕೆಯಾಗಿದ್ದ ಕಲುಷಿತ ನೀರನ್ನ ಸೇವಿಸಿ, ಸುಮಾರು 14 ಜನರಲ್ಲಿ ವಾಂತಿ-ಬೇದಿ ಕಾಣಿಸಿಕೊಂಡಿತ್ತು.‌ ಆ ಪೈಕಿ ಮೂವರ ಪರಿಸ್ಥಿತಿ ಚಿಂತಾಜನಕವಾಗಿತ್ತು. ಅವರನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಇವರಲ್ಲಿ ಲಕ್ಷ್ಮೀದೇವಿ (56) ಎಂಬ ಮಹಿಳೆಯು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಎಫ್​​​ಡಿಐ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಬಂಧಿತರ ಸಂಖ್ಯೆ 14ಕ್ಕೆ ಏರಿಕೆ

ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಶ್ರೀರಾಂಪುರ ಕಾಲೋನಿ ಸೇರಿದಂತೆ ನಾನಾ ಕಡೆಗಳಲ್ಲಿ ಈ ಅನಧಿಕೃತ ನಲ್ಲಿ ಸಂಪರ್ಕ ಕಲ್ಪಿಸಿರುವುದರಿಂದಲೇ ಈ ಅವಘಡ ಸಂಭವಿಸಲು ಕಾರಣ ಎಂದು ಆರೋಪಿಸಲಾಗಿದೆ.‌ ಹೀಗಾಗಿ, ಮಹಾನಗರ ಪಾಲಿಕೆಯು ಅನಧಿಕೃತ ನಲ್ಲಿ ಗಳ ಸಂಪರ್ಕದ ಕಡಿತಗೊಳಿಸಲು ಮುಂದಾಗಿದೆ.

ಜಿಲ್ಲಾ ಮತ್ತು ತಾಲೂಕು ಆರೋಗ್ಯಾಧಿಕಾರಿ, ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿಗಳು ಶ್ರೀರಾಂಪುರ ಕಾಲೋನಿಗೆ ಮತ್ತು ಉಮಾಶಂಕರ್‌ ಕಾಲೋನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಳ್ಳಾರಿ: ನಗರದ ಶ್ರೀರಾಂಪುರ ಕಾಲೋನಿಯಲ್ಲಿ ಕುಡಿಯುವ ನೀರಿನ ನಲ್ಲಿಗಳಲ್ಲಿ ಪೂರೈಕೆಯಾಗಿದ್ದ ಕಲುಷಿತ ನೀರು ಸೇವನೆಯಿಂದ ವಾಂತಿ-ಬೇದಿಯಾಗಿ ಅಸ್ವಸ್ಥಗೊಂಡಿದ್ದ ಮಹಿಳೆ ಸಾವನ್ನಪ್ಪಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಶ್ರೀರಾಂಪುರ ಕಾಲೋನಿ ಸೇರಿದಂತೆ ‌ಇತರೆಡೆ ನಲ್ಲಿಯಲ್ಲಿ ಪೂರೈಕೆಯಾಗಿದ್ದ ಕಲುಷಿತ ನೀರನ್ನ ಸೇವಿಸಿ, ಸುಮಾರು 14 ಜನರಲ್ಲಿ ವಾಂತಿ-ಬೇದಿ ಕಾಣಿಸಿಕೊಂಡಿತ್ತು.‌ ಆ ಪೈಕಿ ಮೂವರ ಪರಿಸ್ಥಿತಿ ಚಿಂತಾಜನಕವಾಗಿತ್ತು. ಅವರನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಇವರಲ್ಲಿ ಲಕ್ಷ್ಮೀದೇವಿ (56) ಎಂಬ ಮಹಿಳೆಯು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಎಫ್​​​ಡಿಐ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಬಂಧಿತರ ಸಂಖ್ಯೆ 14ಕ್ಕೆ ಏರಿಕೆ

ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಶ್ರೀರಾಂಪುರ ಕಾಲೋನಿ ಸೇರಿದಂತೆ ನಾನಾ ಕಡೆಗಳಲ್ಲಿ ಈ ಅನಧಿಕೃತ ನಲ್ಲಿ ಸಂಪರ್ಕ ಕಲ್ಪಿಸಿರುವುದರಿಂದಲೇ ಈ ಅವಘಡ ಸಂಭವಿಸಲು ಕಾರಣ ಎಂದು ಆರೋಪಿಸಲಾಗಿದೆ.‌ ಹೀಗಾಗಿ, ಮಹಾನಗರ ಪಾಲಿಕೆಯು ಅನಧಿಕೃತ ನಲ್ಲಿ ಗಳ ಸಂಪರ್ಕದ ಕಡಿತಗೊಳಿಸಲು ಮುಂದಾಗಿದೆ.

ಜಿಲ್ಲಾ ಮತ್ತು ತಾಲೂಕು ಆರೋಗ್ಯಾಧಿಕಾರಿ, ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿಗಳು ಶ್ರೀರಾಂಪುರ ಕಾಲೋನಿಗೆ ಮತ್ತು ಉಮಾಶಂಕರ್‌ ಕಾಲೋನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.